Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 29 ಮೇ 2020 (08:42 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕಾರ್ಯಕ್ಷೇತ್ರದಲ್ಲಿ ನಿರ್ಧಾರ ಕೈಗೊಳ್ಳುವಾಗ ಗೊಂದಲ ಕಾಡಬಹುದು. ಮೇಲಧಿಕಾರಿಗಳು ನಿಮ್ಮ ಅಭಿಪ್ರಾಯಗಳನ್ನು ಕಡೆಗಣಿಸುವುದರಿಂದ ಮನಸ್ಸಿಗೆ ಬೇಸರವಾಗಬಹುದು. ಅವಿವಾಹಿತರಿಗೆ ಶೀಘ‍್ರ ಕಂಕಣ ಬಲ ಕೂಡಿಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ದೈವಾನುಕೂಲದಿಂದ ಇಂದು ನೀವು ಕೈಗೊಳ್ಳಲಿರುವ ಕಾರ್ಯಗಳು ಸುಗಮವಾಗಿ ನೆರವೇರಲಿದೆ. ಕಾರ್ಯರಂಗದಲ್ಲಿ ಸಹೋದ್ಯೋಗಿಗಳ ಸಹಕಾರದಿಂದ ಸಮಸ್ಯೆಗಳು ಬಗೆಹರಿಯಲಿವೆ. ಉದ್ಯೋಗ ಬದಲಾವಣೆಗೆ ಮನಸ್ಸು ಮಾಡಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಪರಿಸ್ಥಿತಿಗೆ ತಕ್ಕಂತೆ ಹೊಂದಾಣಿಕೆ ಮಾಡುವುದನ್ನು ಕಲಿಯಬೇಕು. ಆರ್ಥಿಕವಾಗಿ ಹಣಕಾಸಿನ ಸಮಸ್ಯೆಗಳು ದೂರವಾಗಲಿದೆ. ನೆರೆಹೊರೆಯವರೊಂದಿಗೆ ಸಹಕಾರವಿದ್ದರೆ ಉತ್ತಮ. ಆದರೆ ಹಿತಶತ್ರುಗಳಿಗೆ ನಿಮ್ಮ ಜೀವನದಲ್ಲಿ ಮೂಗು ತೂರಿಸಲು ಅವಕಾಶ ಕೊಡಬೇಡಿ.

ಕರ್ಕಟಕ: ಕಾರ್ಯಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗಬಹುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಗೃಹ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳಾಗಲಿವೆ. ಸಂಗಾತಿಯ ಮನೋಭಿಲಾಷೆ ಈಡೇರಿಸಲಿದ್ದೀರಿ. ದಿನದಂತ್ಯಕ್ಕೆ ಶುಭ ಸುದ್ದಿ.

ಸಿಂಹ: ನಿಮ್ಮ ಸುತ್ತಲಿನ ಜನರೇ ನಿಮ್ಮ ದಾರಿ ತಪ್ಪಿಸಲಿದ್ದೀರಿ. ದೃಢ ನಿರ್ಧಾರದಿಂದ ಮುನ್ನಡೆದರೆ ಕಾರ್ಯದಲ್ಲಿ ಯಶಸ್ಸು ಕಾಣಲಿದ್ದೀರಿ. ಧನಾದಾಯ ಗಳಿಕೆಗೆ ನಾನಾ ಮಾರ್ಗಗಳನ್ನು ಹುಡುಕಾಡಲಿದ್ದೀರಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಇಷ್ಟ ಭೋಜನ ಯೋಗವಿದೆ.

ಕನ್ಯಾ: ಅನಾವಶ್ಯಕ ಉದ್ವೇಗಕ್ಕೊಳಗಾಗಬೇಡಿ. ನಯವಂಚಕರ ಮಾತಿಗೆ ಮರಳಾಗಬೇಡಿ. ಉದ್ಯೋಗ ಕ್ಷೇತ್ರದಲ್ಲಿ ಮೈಮರೆತರೆ ಅನಾಹುತವಾದೀತು. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳಾಗಲಿವೆ. ಬಾಕಿ ಹಣ ಸಂದಾಯವಾಗಲಿದೆ.

ತುಲಾ: ಅನಿರೀಕ್ಷಿತವಾಗಿ ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ದಾಯಾದಿಗಳಿಂದ ಆಸ್ತಿ ತಗಾದೆ ಬರಲಿದೆ. ಹಿರಿಯರ ಮಾತಿಗೆ ಬೆಲೆಕೊಡಿ. ದೇವಾಲಯ ಸಂದರ್ಶನ ಯೋಗವಿದೆ.

ವೃಶ್ಚಿಕ: ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಭರವಸೆ ಸಿಗಲಿದೆ. ದೇಹಾರೋಗ್ಯದಲ್ಲಿ ಕೈಕೊಟ್ಟು ಚಿಂತೆಗೆ ಕಾರಣವಾಗಬಹುದು. ಆರ್ಥಿಕವಾಗಿ ಹಣಕಾಸಿನ ಸಮಸ್ಯೆಗಳು ದೂರವಾಗಲಿದೆ. ದೇವತಾ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ಧನು: ವಿದ್ಯಾರ್ಥಿಗಳಿಗೆ ಯಶಸ್ಸಿಗೆ ಕಠಿಣ ಪರಿಶ್ರಮ ಅಗತ್ಯ. ಉದ್ಯೋಗ ಬದಲಾವಣೆಗೆ ಮನಸ್ಸು ಮಾಡಲಿದ್ದೀರಿ. ಗೃಹ ರಿಪೇರಿ ಕೆಲಸಗಳಿಗೆ ಖರ್ಚು ವೆಚ್ಚಗಳಾಗಲಿವೆ. ಆಹಾರ ಬದಲಾವಣೆಯಿಂದ ದೇಹಾರೋಗ್ಯದಲ್ಲಿ ಏರುಪೇರಾಗಲಿದೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕಿ.

ಮಕರ: ಕೌಟುಂಬಿಕವಾಗಿ ಬಂಧುಮಿತ್ರರ ಆಗಮನದಿಂದ ಮನಸ್ಸಿಗೆ ಸಂತಸವಾಗಲಿದೆ. ವೃತ್ತಿರಂಗದಲ್ಲಿ ಮುನ್ನಡೆಯ ಯೋಗವಿದೆ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಲಿದ್ದೀರಿ.

ಕುಂಭ: ಸಾಂಸಾರಿಕವಾಗಿ ಸುಖಕ್ಕೆ ಕೊರತೆಯಿರದು. ಆದರೆ ಅನಗತ್ಯ ಚಿಂತೆಗಳಿಗೆ ಕಡಿವಾಣ ಹಾಕಬೇಕು. ವೃತ್ತಿರಂಗದಲ್ಲಿ ಇದ್ದ ಸಮಸ್ಯೆಗಳು ನಿಧಾನವಾಗಿ ದೂರವಾಗಲಿದೆ. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯಾಗಲಿದೆ. ಅವಸರದ ನಿರ್ಧಾರ ಕೈಗೊಳ್ಳಲು ಹೋಗಬೇಡಿ.

ಮೀನ: ಮನೋಕಾಮನೆ ಪೂರೈಸಲು ಪರಿಶ್ರಮಪಡಬೇಕು. ಮಹಿಳೆಯರಿಗೆ ಉದ್ಯೋಗದಲ್ಲಿ ಮುನ್ನಡೆಯ ಯೋಗವಿದೆ. ಹಿರಿಯರಿಂದ ಅನಿರೀಕ್ಷಿತ ಉಡುಗೊರೆ ನಿರೀಕ್ಷಿಸಬಹುದು. ನಿಮ್ಮ ಕ್ರಿಯಾಶೀಲತೆ ಪ್ರಕಟಿಸಲಿ ವೇದಿಕೆ ಸಿಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ ಕಾದಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments