ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 31 ಮೇ 2020 (09:02 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅನಗತ್ಯವಾಗಿ ಕಲಹಕ್ಕೆಡೆ ಮಾಡಿಕೊಡುವ ಸನ್ನಿವೇಶ ಸೃಷ್ಟಿಸಿಕೊಂಡು ನೀವೇ ಪಶ್ಚಾತ್ತಾಪಪಟ್ಟುಕೊಳ್ಳುತ್ತೀರಿ. ತಾಳ್ಮೆ, ಸಂಯಮದಿಂದ ನಡೆದುಕೊಳ್ಳುವುದು ಮುಖ್ಯ. ಆರ್ಥಿಕವಾಗಿ ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಕಳ್ಳತನದ ಭೀತಿಯಿದೆ.

ವೃಷಭ: ಕೌಟುಂಬಿಕ ವ್ಯವಹಾರಗಳು ಸಮಾಧಾನಕರವಾಗಿ ನಡೆಯಲಿವೆ. ಮನೆಗೆ ಬೇಕಾದ ವಸ್ತುಗಳ ಖರೀದಿಗೆ ಧನವ್ಯಯವಾಗಲಿದೆ. ಚಿನ್ನಾಭರಣ ರಿಪೇರಿ ಮಾಡುವ ಕೆಲಸಕ್ಕೆ ಮುಂದಾಗಲಿದ್ದೀರಿ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಮಿಥುನ: ವೃತ್ತಿರಂಗದಲ್ಲಿ ಏಳಿಗೆಗಾಗಿ ವೈಯಕ್ತಿಕ ಸಂತೋಷವನ್ನು ತ್ಯಾಗ ಮಾಡಬೇಕಾಗುತ್ತದೆ. ಪ್ರೀತಿ ಪಾತ್ರರ ಅಗಲುವಿಕೆಯ ನೋವು ಕಾಡಬಹುದು. ಮಹಿಳೆಯರಿಗೆ ಭಾವನೆಗಳನ್ನು ನಿಯಂತ್ರಿಸುವುದು ಕಷ್ಟವಾಗಬಹುದು. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ವೈಯಕ್ತಿಕ ದೇಹಾರೋಗ್ಯದ ಬಗ್ಗೆ ನಿರ್ಲ್ಯಕ್ಷ ಬೇಡ. ಆರ್ಥಿಕವಾಗಿ ಹಣಕಾಸಿನ ಹರಿವಿದ್ದರೂ ಅದೇ ರೀತಿಯಲ್ಲಿ ಖರ್ಚೂ ಇರಲಿದೆ. ವಿದ್ಯಾರ್ಥಿಗಳ ಮನಸ್ಸು ಪರಿವರ್ತನೆಯಾಗಿ ಅಭ್ಯಾಸದ ಕಡೆಗೆ ಗಮನ ಕೊಡುವರು. ಸಾಲಗಾರರಿಂದ ಮುಕ್ತಿ ಸಿಗಲಿದೆ.

ಸಿಂಹ: ವಾಹನ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ಅಗತ್ಯ. ಕಾರ್ಯರಂಗದಲ್ಲಿ ಛಲಬಿಡದೇ ಕೆಲಸ ಮಾಡಿದರೆ ಯಶಸ್ಸು ಸಾಧ‍್ಯ. ಅವಿವಾಹಿತರಿಗೆ ಯೋಗ್ಯ ಸಂಬಂಧಗಳು ಸ್ವಲ್ಪದರಲ್ಲೇ ಕೈ ತಪ್ಪಿ ನಿರಾಸೆಯಾಗಬಹುದು. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಕನ್ಯಾ: ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಸಂಗಾತಿಯ ಸಲಹೆಗಳಿಗೆ ಕಿವಿಗೊಡುವುದು ಅಗತ್ಯ. ದೇಹಾರೋಗ್ಯದ ಬಗ್ಗೆ ನಿಗಾ ವಹಿಸಿ. ಮಕ್ಕಳಿಂದ ಸಂತಸ ಸಿಗಲಿದೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶ ಬಳಸಿಕೊಳ್ಳುವುದು ಉತ್ತಮ.

ತುಲಾ: ಕಾರ್ಯಕ್ಷೇತ್ರದಲ್ಲಿ ಹೊಸ ಚಿಂತನೆಗಳಿಂದ ನಿಮ್ಮ ಮುಂದಿರುವ ಸಮಸ್ಯೆಗಳು ನಿವಾರಣೆಯಾಗಲಿವೆ. ಆರ್ಥಿಕವಾಗಿ ಮುಗ್ಗಟ್ಟು ಅನುಭವಿಸಿದರೂ ಸಕಾಲದಲ್ಲಿ ಮಿತ್ರರಿಂದ ನೆರವು ದೊರೆಯಲಿದೆ. ಸರಕಾರಿ ಅಧಿಕಾರಿಗಳಿಗೆ ಲೆಕ್ಕ ಪತ್ರದ ಬಗ್ಗೆ ನಿಗಾ ಇರಬೇಕು.

ವೃಶ್ಚಿಕ: ಉದ್ಯೋಗದಲ್ಲಿ ನಿರೀಕ್ಷಿತ ಸಾಧನೆ ಮಾಡಲಿದ್ದೀರಿ. ಮೇಲಧಿಕಾರಿಗಳ ಪ್ರಶಂಸೆ ಸಿಗಲಿದೆ. ಆದರೆ ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ. ನಿರುದ್ಯೋಗಿಗಳಿಗೆ ಅನಿರೀಕ್ಷಿತವಾಗಿ ಉದ್ಯೋಗ ಲಾಭವಾಗಲಿದೆ.

ಧನು: ಪ್ರೀತಿ ಪಾತ್ರರೊಂದಿಗಿನ ಮಾತುಕತೆಯಿಂದ ಮನಸ್ಸು ಹಗುರವಾಗಲಿದೆ. ಸಾಂಸಾರಿಕವಾಗಿ ಪೋಷಕರ ಮನಸ್ಸಿಗೆ ಬೇಸರವಾಗದಂತೆ ನಡೆದುಕೊಳ್ಳುವುದು ಮುಖ್ಯ. ವಿದ್ಯಾರ್ಥಿಗಳಿಗೆ ಹೊಸ ಸವಾಲುಗಳು ಎದುರಾಗಲಿವೆ. ವಿನಾಕಾರಣ ಚಿಂತೆ ಬೇಡ.

ಮಕರ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ. ಕಾರ್ಯದೊತ್ತಡದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ದೊರೆಯಲಿದೆ. ಶುಭ ಫಲಗಳಿಗಾಗಿ ದೇವರ ಪ್ರಾರ್ಥನೆ ಮಾಡಿ.

ಕುಂಭ: ಮಾನಸಿಕವಾಗಿ ನಿಮ್ಮನ್ನು ಅಸ್ಥಿರಗೊಳಿಸಲು ವಿರೋಧಿಗಳು ಹೊಂಚು ಹಾಕುತ್ತಿರುತ್ತಾರೆ. ಮಾನಸಿಕವಾಗಿ ಗಟ್ಟಿಯಾಗಬೇಕಾದ ಕಾಲವಿದು. ಸಂಗಾತಿಯೊಂದಿಗೆ ಮನಸ್ಸಿನ ದುಃಖ ಹಂಚಿಕೊಳ್ಳಲಿದ್ದೀರಿ. ಉದ್ಯೋಗದಲ್ಲಿ ಬದಲಾವಣೆ ಬಯಸುವಿರಿ.

ಮೀನ: ನಿಮ್ಮ ಮನೋಕಾಮನೆಗಳು ಹಂತ ಹಂತವಾಗಿ ನೆರವೇರಲಿದೆ. ಸಾಂಸಾರಿಕವಾಗಿ ಬಂಧು ಬಳಗದವರ ಸಹಕಾರ ಸಿಗಲಿದೆ. ಪ್ರತಿಷ್ಠಿತರ ಸಂಪರ್ಕದಿಂದ ಕಾರ್ಯಸಿದ್ಧಿಯಾಗುವುದು. ಮಹಿಳೆಯರಿಗೆ ಗೃಹ ಕೃತ್ಯಗಳಿಂದ ಬಿಡುವು ಸಿಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಬುಧವಾರ ಗಣೇಶನ ಅನುಗ್ರಹಕ್ಕೆ ಈ ಸ್ತೋತ್ರ ಓದಿ

ವೈಕುಂಠ ಏಕಾದಶಿ ದಿನವಾದ ಇಂದು ಮಹಾವಿಷ್ಣುವಿನ ಈ ಮಂತ್ರವನ್ನು ತಪ್ಪದೇ ಪಠಿಸಿ

ವಿವಾಹ, ಸಂತಾನಕ್ಕೆ ಅಡ್ಡಿಯಾಗುತ್ತಿದ್ದರೆ ಸುಬ್ರಹ್ಮಣ್ಯನ ಈ ಸ್ತೋತ್ರ ಓದಿ

ನಾಳೆ ವೈಕುಂಠ ಏಕಾದಶಿ, ಹೀಗಿರಲಿ ಪೂಜಾ ವಿಧಾನ

ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರ ಓದಿ

ಮುಂದಿನ ಸುದ್ದಿ
Show comments