Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 1 ಜೂನ್ 2020 (08:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಬೇಡದ ವಿಚಾರಗಳಿಗೆ ತಲೆಕೆಡಿಸಿಕೊಂಡು ಮಾನಸಿಕ ನೆಮ್ಮದಿ ಹಾಳಾಗಬಹುದು. ತಾಳ್ಮೆ, ಸಂಯಮ ಅಗತ್ಯ. ಹಿರಿಯರೊಂದಿಗೆ ಮಾತನಾಡುವಾಗ ದುಡುಕಿ ಮನಸ್ಸಿಗೆ ನೋವುಂಟು ಮಾಡಬೇಡಿ. ದೇವತಾ ಪ್ರಾರ್ಥನೆಯಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ವೃಷಭ: ಕಾರ್ಯರಂಗದಲ್ಲಿ ನಿಮಗೆ ಅನುಕೂಲಕರವಾಗಿ ಎಲ್ಲವೂ ನಡೆಯುತ್ತಿಲ್ಲ ಅನಿಸಿದರೂ ಪರಿಸ್ಥಿತಿಗೆ ತಕ್ಕಂತೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಕೌಟುಂಬಿಕವಾಗಿ ನೆಮ್ಮದಿ ಸಿಗಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ.

ಮಿಥುನ: ಸಾಂಸಾರಿಕವಾಗಿ ಮಹಿಳೆಯರಿಗೆ ಭಾವುಕ ಸಂದರ್ಭಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗದೇ ನಿರಾಸೆಯಾಗಬಹುದು. ವಿದ್ಯಾರ್ಥಿಗಳು ಹೊಸ ಸವಾಲುಗಳಿಗೆ ಸಿದ್ಧತೆ ನಡೆಸಬೇಕಾಗುತ್ತದೆ.

ಕರ್ಕಟಕ: ಆರ್ಥಿಕವಾಗಿ ಧನಾಗಮನಕ್ಕೆ ಕೊರತೆಯಿರದು. ಆದರೆ ಅಷ್ಟೇ ಖರ್ಚೂ ಇರಲಿದೆ. ಕಾರ್ಯರಂಗದಲ್ಲಿ ಛಲಬಿಡದೇ ಕೆಲಸ ಮಾಡುವುದರಿಂದ ಯಶಸ್ಸು ನಿಮ್ಮದಾಗುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ದಿನದಂತ್ಯಕ್ಕೆ ಶುಭ ಸುದ್ದಿ ನಿರೀಕ್ಷಿಸಿ.

ಸಿಂಹ: ಪೂರ್ವ ನಿಗದಿತ ಕಾರ್ಯಕ್ರಮಗಳಲ್ಲಿ ಅನಿರೀಕ್ಷಿತ ಬದಲಾವಣೆಯಾಗುವುದರಿಂದ ಕಿರಿ ಕಿರಿ ಅನುಭವಿಸಲಿದ್ದೀರಿ. ರಾಜಕೀಯ ರಂಗದಲ್ಲಿರುವವರಿಗೆ ಹೆಚ್ಚಿನ ಹೊಣೆಗಾರಿಕೆ ಹೆಗಲಿಗೇರಲಿದೆ. ಸರಕಾರಿ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮುನ್ನಡೆಯಿರಲಿದೆ.

ಕನ್ಯಾ: ಅವಿವಾಹಿತರಿಗೆ ನಿಂತು ಹೋಗಿದ್ದ ವಿವಾಹ ಮಾತುಕತೆ ಪುನರಾರಂಭವಾಗಲಿದೆ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಯೋಚನೆ ಮಾಡಲಿದ್ದೀರಿ. ಆರ್ಥಿಕವಾಗಿ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದು ಉತ್ತಮ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ತುಲಾ: ನಿರುದ್ಯೋಗಿಗಳಿಗೆ ಅನೇಕ ರೀತಿಯ ಅವಕಾಶಗಳು ಒದಗಿಬರಲಿದೆ. ಉದ್ಯೋಗ ರಂಗದಲ್ಲಿ ಮೇಲಧಿಕಾರಿಗಳ ಸಲಹೆ ಪಡೆದು ಮುನ್ನಡೆಯಿರಿ. ಮಹಿಳೆಯರಿಗೆ ಸದ್ಯದಲ್ಲೇ ಚಿನ್ನಾಭರಣ ಖರೀದಿ ಯೋಗವಿದೆ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಬೇಕಾಗುತ್ತದೆ.

ವೃಶ್ಚಿಕ: ಸಾಂಸಾರಿಕವಾಗಿ ಪೋಷಕರ ಸಹಾಯದಿಂದ ಸಾಧನೆ ಮಾಡುವ ಉತ್ಸಾಹ ಬರಲಿದೆ. ಹಿರಿಯರ ಹಿತವಚನಗಳಿಗೆ ಕಿವಿಗೊಡಿ. ದಾಂಪತ್ಯದಲ್ಲಿ ಸುಖ ಕಾಣುವಿರಿ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ಸರಕಾರಿ ಅಧಿಕಾರಿಗಳಿಗೆ ಕಾರ್ಯದೊತ್ತಡವರಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ವಾಹನ ಖರೀದಿ ಯೋಗವಿದೆ. ಹಣಕಾಸಿನ ಹರಿವಿಗೆ ತೊಂದರೆಯಿರದು. ದೇವರ ಮೇಲೆ ಭಕ್ತಿ ಹೆಚ್ಚಲಿದೆ.

ಮಕರ: ಅನಿರೀಕ್ಷಿತ ರೂಪದಲ್ಲಿ ನಿಮ್ಮ ಕಾರ್ಯಸಾಧನೆಯಾಗಲಿರುವುದರಿಂದ ಮನಸ್ಸಿಗೆ ಸಂತಸವಾಗಲಿದೆ. ಎಷ್ಟೋ ದಿನಗಳಿಂದ ಬಾಕಿಯಿದ್ದ ಹರಕೆ ತೀರಿಸಲಿದ್ದೀರಿ. ಹಿರಿಯರಿಗೆ ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಬಹುದು. ಎಚ್ಚರಿಕೆ ಅಗತ್ಯ.

ಕುಂಭ: ಉದ್ಯೋಗ ರಂಗದಲ್ಲಿ ನವೀನ ಚಿಂತನೆಗಳನ್ನು ಅಳವಡಿಸಲು ಚಿಂತನೆ ನಡೆಸಲಿದ್ದೀರಿ. ಧನಗಳಿಕೆಗೆ ನಾನಾ ಮಾರ್ಗಗಳನ್ನು ಹುಡುಕಲಿದ್ದೀರಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಮಹಿಳೆಯರಿಗೆ ತವರಿನಿಂದ ಉಡುಗೊರೆ ನಿರೀಕ್ಷಿಸಬಹುದು.

ಮೀನ: ನ್ಯಾಯಾಲಯದ ಕಾರ್ಯ ಕಲಾಪಗಳಲ್ಲಿ ಹಿನ್ನಡೆಯಾಗಬಹುದು. ಸತತ ಪ್ರಯತ್ನದಿಂದ ಯಶಸ್ಸು ಪಡೆಯುವಿರಿ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಿಲ್ಲ. ವ್ಯಾಪಾರಿಗಳಿಗೆ ಸಣ್ಣ ಮಟ್ಟಿನ ಲಾಭವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

Share this Story:

Follow Webdunia kannada

ಮುಂದಿನ ಸುದ್ದಿ

ವಾಸ್ತು ಪ್ರಕಾರ ಸೀಬೆಮರ ಮನೆಯ ಯಾವ ದಿಕ್ಕಿನಲ್ಲಿರಬೇಕು ಗೊತ್ತಾ?