Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 2 ಜೂನ್ 2020 (09:01 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆರ್ಥಿಕವಾಗಿ ಹಣಕಾಸಿನ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಆಸಕ್ತಿ ಕುಂಠಿತವಾಗಬಹುದು. ರಾಜಕೀಯ ವರ್ಗದವರಿಗೆ ಹೊಸ ಸವಾಲುಗಳು ಎದುರಾಗಲಿವೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ವೈಯಕ್ತಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ಉಪೇಕ್ಷೆ ಬೇಡ. ಹೆಚ್ಚಿನ ಧನಾರ್ಜನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ದೂರ ಸಂಚಾರಕ್ಕೆ ನಾನಾ ರೀತಿಯ ಅಡ್ಡಿ ಆತಂಕಗಳು ಎದುರಾಗಬಹುದು. ಕುಲದೇವರ ಪ್ರಾರ್ಥನೆ ಮಾಡಿ.

ಮಿಥುನ: ವ್ಯಾಪಾರ, ವ್ಯವಹಾರದಲ್ಲಿ ಹೆಚ್ಚಿನ ಲಾಭ ಕಂಡುಕೊಳ್ಳಲಿದ್ದೀರಿ. ಆದರೆ ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರುವುದು ಮುಖ್ಯ. ಮನಸ್ಸಿಗೆ ಖುಷಿಕೊಡುವ ಕೆಲಸದಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಸಂಗಾತಿಯ ಸಹಕಾರ ಸಿಗಲಿದೆ. ಮಕ್ಕಳಿಂದ ಶುಭ ಸುದ್ದಿ ಆಲಿಸುವಿರಿ.

ಕರ್ಕಟಕ: ಸಾಂಸಾರಿಕವಾಗಿ ನಾನಾ ರೀತಿ ಖರ್ಚು ವೆಚ್ಚಗಳು ಎದುರಾಗಲಿವೆ. ಉದ್ಯೋಗ ಕ್ಷೇತ್ರದಲ್ಲಿ ತಾಳ್ಮೆ ಸಮಾಧಾನದಿಂದ ಮುಂದುವರಿಯಿರಿ. ಸಾಮಾಜಿಕ ಕೆಲಸಗಳಿಗೆ ಜನಮನ್ನಣೆ ದೊರೆಯಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ಕೃಷಿಕರು ವ್ಯವಹಾರದಲ್ಲಿ ಲಾಭ ಕಂಡುಕೊಳ್ಳಲಿದ್ದೀರಿ. ನೂತನ ಮನೆ, ಆಸ್ತಿ ಖರೀದಿಗೆ ಮುಂದಾಗಲಿದ್ದೀರಿ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸ್ವಲ್ಪದರಲ್ಲೇ ಕೈತಪ್ಪಿದ ನಿರಾಸೆ ಕಾಡಬಹುದು. ಸ್ವಯಂ ಉದ್ಯೋಗಿಗಳು ಲಾಭ ಪಡೆಯಲಿದ್ದಾರೆ.

ಕನ್ಯಾ: ದಾಯಾದಿಗಳೊಂದಿಗಿನ ಕಲಹಕ್ಕೆ ಒಂದು ರೀತಿಯ ಅಂತ್ಯ ಸಿಗಲಿದೆ. ಸಾಂಸಾರಿಕವಾಗಿ ನೆಮ್ಮದಿ ಸಿಗುವುದು. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ಸಿಗಲಿದೆ. ಪ್ರೇಮಿಗಳಿಗೆ ಅಗಲುವಿಕೆಯ ನೋವು ಕಾಡಲಿದೆ. ತಾಳ್ಮೆ, ಸಂಯಮವಿರಲಿ.

ತುಲಾ: ಮನೆ ರಿಪೇರಿ, ಗೃಹ ವಸ್ತುಗಳ ಖರೀದಿ ಇತ್ಯಾದಿಗಾಗಿ ಖರ್ಚು ವೆಚ್ಚಗಳಾಗಲಿವೆ. ನೂತನ ಉದ್ಯೋಗದಲ್ಲಿ ತೊಡಗಿಸಿಕೊಂಡವರಿಗೆ ಕಷ್ಟಗಳು ಎದುರಾರೀತು. ಆತ್ಮಸ್ಥೈರ್ಯದಿಂದ ಮುನ್ನಡೆಯಿರಿ. ಧಾರ್ಮಿಕವಾಗಿ ಭಕ್ತಿ ಭಾವ ಹೆಚ್ಚುವುದು.

ವೃಶ್ಚಿಕ: ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗಲಿದೆ. ಹೆಚ್ಚಿನ ಧನಾರ್ಜನೆಗೆ ನಾನಾ ಮಾರ್ಗಗಳನ್ನು ಹುಡುಕಾಡಲಿದ್ದೀರಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಸಿಗಲಿದೆ. ಸರಕಾರಿ ಉದ್ಯೋಗದಲ್ಲಿರುವವರಿಗೆ ಹೆಚ್ಚಿನ ಕಾರ್ಯಭಾರ ಹೆಗಲಿಗೇರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಧನು: ಕೌಟುಂಬಿಕವಾಗಿ ನಿಮ್ಮ ಕೆಲವೊಂದು ನಿರ್ಧಾರಗಳು ಕುಟುಂಬ ಸದಸ್ಯರಿಗೆ ಹಿಡಿಸದೇ ಹೋದೀತು. ವಿದ್ಯಾರ್ಥಿಗಳಿಗೆ ಪ್ರಯತ್ನ ಬಲಕ್ಕೆ ತಕ್ಕ ಫಲ ಸಿಗುವುದು. ಮಹಿಳೆಯರಿಗೆ ಚಿನ್ನಾಭರಣಗಳನ್ನು ಸಂರಕ್ಷಿಸುವ ಹೊಣೆಗಾರಿಕೆ ಹೆಗಲಿಗೇರಲಿದೆ. ಎಚ್ಚರಿಕೆಯಿರಲಿ.

ಮಕರ: ಅನಿವಾರ್ಯವಾಗಿ ಮಾತು ತಪ್ಪಿ ನಡೆಯಬೇಕಾಗುತ್ತದೆ. ಸಂಗಾತಿಯ ಮುನಿಸಿಗೆ ಕಾರಣರಾಗಲಿದ್ದೀರಿ. ವಾಹನ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ಅಗತ್ಯ. ಹಿರಿಯರಿಗೆ ದೇವಾಲಯ ಸಂದರ್ಶನ ಯೋಗವಿದೆ. ದುಂದು  ವೆಚ್ಚಗಳಿಗೆ ಕಡಿವಾಣ ಹಾಕಿ.

ಕುಂಭ: ಆರ್ಥಿಕವಾಗಿ ನಿಮ್ಮ ಲೆಕ್ಕಾಚಾರಗಳು ತಲೆಕೆಳಗಾದ ಅನುಭವವಾಗಲಿದೆ. ಸಂಗಾತಿಯ ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ನಿರಾಸಕ್ತಿ ಕಾಡಬಹುದು. ಕೃಷಿಕರಿಗೆ ವ್ಯವಹಾರಕ್ಕೆ ಇದುವರೆಗೆ ಇದ್ದ ಸಮಸ್ಯೆಗಳು ನಿವಾರಣೆಯಾಗಲಿದೆ.

ಮೀನ: ರಾಜಕೀಯ ವರ್ಗದವರಿಗೆ ಮಹಿಳೆಯರಿಂದ ಅಪವಾದದ ಭೀತಿಯಿದೆ. ಹಾಗಿದ್ದರೂ ನಿಮ್ಮ ಅಧಿಕಾರ ಬಲ ಹೆಚ್ಚುವುದು. ಕಾರ್ಯರಂಗದಲ್ಲಿ ಕ್ಷುಲ್ಲುಕ ವಿಚಾರಗಳ ಬಗ್ಗೆ ವಾದ-ವಿವಾದ ಮಾಡಿಕೊಂಡು ಕೂರಬೇಡಿ. ಕ್ರಿಯಾತ್ಮಕ ಯೋಚನೆಯಿಂದ ಯಶಸ್ಸು ಸಾಧ‍್ಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments