Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 4 ಜೂನ್ 2020 (08:52 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕಾರ್ಯರಂಗದಲ್ಲಿ ತುಸು ಮುನ್ನಡೆ ತೋರಿಬರಲಿದ್ದು, ಅಂದುಕೊಂಡ ಕಾರ್ಯ ನೆರವೇರಿಸುವಿರಿ. ವಿದ್ಯಾರ್ಥಿಗಳಿಗೆ ಪ್ರಯತ್ನಬಲಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ವ್ಯಾಪಾರಿಗಳಿಗೆ ನಷ್ಟದ ಭೀತಿಯಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ.

ವೃಷಭ: ಸಾಂಸಾರಿಕವಾಗಿ ಅನಿರೀಕ್ಷಿತವಾಗಿ ಅತಿಥಿಗಳ ಆಗಮನದಿಂದ ಸಂತಸದ ವಾತಾವರಣವಾಗಲಿದೆ. ವೃತ್ತಿರಂಗದಲ್ಲಿ ಹೊಸ ಸವಾಲುಗಳಿಗೆ ಸಿದ್ಧರಾಗಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಬಹುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಆರ್ಥಿಕ ಪರಿಸ್ಥಿತಿಯಲ್ಲಿ ಸುದಾರಣೆಯಾಗಲಿದ್ದು, ಹೊಸ ಯೋಜನೆಗಳಿಗೆ ಕೈ ಹಾಕಲಿದ್ದೀರಿ. ಸಾಮಾಜಿಕ ರಂಗದಲ್ಲಿ ನಿಮ್ಮ ಕೆಲಸಗಳಿಗೆ ಜನಮನ್ನಣೆ ಸಿಗಲಿದೆ. ಹಿರಿಯರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಅವಿವಾಹಿತರಿಗೆ ಶೀಘ್ರ ಬಯಸಿದ ಸಂಬಂಧಗಳು ಕೂಡಿಬರಲಿದೆ.

ಕರ್ಕಟಕ: ಮಹಿಳೆಯರಿಗೆ ಉದ್ಯೋಗದಲ್ಲಿ ಮುನ್ನಡೆಯಿದ್ದರೂ ಅಧಿಕ ಕಾರ್ಯದೊತ್ತಡದಿಂದ ಹೈರಾಣಾಗಲಿದ್ದೀರಿ. ನ್ಯಾಯಾಲಯದ ಕಲಾಪಗಳಲ್ಲಿ ಹಿನ್ನಡೆಯಾದೀತು. ಕಾರ್ಯನಿಮಿತ್ತ ಸಂಚಾರ ಮಾಡಬೇಕಾಗುತ್ತದೆ. ಚಾಲನೆಯಲ್ಲಿ ಎಚ್ಚರಿಕೆಯಿಂದಿರಿ.

ಸಿಂಹ: ಕಾರ್ಮಿಕ ವರ್ಗದವರಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ಸಾಮಾಜಿಕ ಕೆಲಸಗಳಿಂದ ಹೆಸರು, ಕೀರ್ತಿ ಸಂಪಾದನೆ ಮಾಡುವ ಯೋಗವಿದೆ. ಆರ್ಥಿಕವಾಗಿ ಅನಿರೀಕ್ಷಿತ ರೀತಿಯಲ್ಲಿ ಧನಾಗಮನವಾಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಕನ್ಯಾ: ಸಾಂಸಾರಿಕವಾಗಿ ಮಹಿಳೆಯರಿಗೆ ಸ್ವಜನರಿಂದಲೇ ಕಿರಿ ಕಿರಿ ಎದುರಾಗಲಿದೆ. ನೆರೆಹೊರೆಯವರ ಜತೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಹಿರಿಯರ ಸಲಹೆಗಳಿಗೆ ಕಿವಿಗೊಡುವುದು ಉತ್ತಮ. ಕೃಷಿಕರಿಗೆ ವ್ಯವಹಾರ ಸುಗಮವಾಗಲಿದೆ.

ತುಲಾ: ಮನಸ್ಸಿನಲ್ಲಿ ಹುಟ್ಟಿಕೊಂಡ ನಾನಾ ಗೊಂದಲಗಳಿಗೆ ಪರಿಹಾರ ಕಂಡುಕೊಳ್ಳಲು ದೇವರ ಮೊರೆ ಹೋಗುವಿರಿ. ದೇವತಾ ಕಾರ್ಯಗಳಿಗಾಗಿ ಧನವಿನಿಯೋಗ ಮಾಡುವಿರಿ. ಮಿತ್ರರ ಕಷ್ಟಗಳಿಗೆ ನೆರವು ನೀಡಲು ಹೋಗಿ ಸಂಕಷ್ಟಕ್ಕೆ ಸಿಲುಕುವ ಅಪಾಯವಿದೆ.

ವೃಶ್ಚಿಕ: ಯೋಗ್ಯ ವಯಸ್ಕರು ಕಂಕಣ ಬಲ ಕೂಡಿಬರಲು ದೇವರ ಮೊರೆ ಹೋಗಲಿದ್ದಾರೆ. ಹಿರಿಯರಿಗೆ ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬರಬಹುದು. ಉಪೇಕ್ಷೆ ಬೇಡ. ಆಸ್ತಿ ವಿವಾದಗಳು ಬಗೆಹರಿಯಲಿವೆ. ಹಣಕಾಸಿನ ವಿಚಾರದಲ್ಲಿ ಲೆಕ್ಕಾಚಾರ ಕಟ್ಟುನಿಟ್ಟಾಗಿರಲಿ.

ಧನು: ನ್ಯಾಯಾಲಯದ ಕೆಲಸಗಳು ಸುಗಮವಾಗಿ ನಡೆಯಲಿವೆ. ಸಹೋದರರಿಂದ ಉಡುಗೊರೆ ನಿರೀಕ್ಷಿಸಬಹುದು. ಸಾಂಸಾರಿಕವಾಗಿ ನೆಮ್ಮದಿಯ ದಿನವಾಗಿರಲಿದೆ. ಪ್ರೇಮಿಗಳಿಗೆ ಪ್ರೀತಿ ಪಾತ್ರರನ್ನು ಸೇರಿದ ಸಂತೋಷ ಸಿಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಮಕರ: ಉದ್ಯೋಗದಲ್ಲಿ ಮನಸ್ಸು ಬದಲಾವಣೆ ಬಯಸಿದರೂ ಅಂದುಕೊಂಡ ಕೆಲಸ ಸಿಗದೇ ನಿರಾಸೆಯಾಗಲಿದೆ. ದಾಂಪತ್ಯದಲ್ಲಿ ಸಣ್ಣ ಪುಟ್ಟ ಅಸಮಾಧಾನಗಳನ್ನು ಮರೆತು ಮುನ್ನಡೆಯುವುದು ಮುಖ್ಯ. ಕೃಷಿಕರಿಗೆ ನೀರಿಗಾಗಿ ಬವಣೆ ತಪ್ಪಲಿದೆ.

ಕುಂಭ: ಒಂದು ರೀತಿಯ ಅಸಮಾಧಾನ ಮನಸ್ಸು ಕಾಡಲಿದ್ದು, ಸಂಗಾತಿಯ ಜತೆ ನಿಮ್ಮ ಮನಸ್ಸಿನ ದುಗುಡ ಹಂಚಿಕೊಳ್ಳಲಿದ್ದೀರಿ. ಕೌಟುಂಬಿಕವಾಗಿ ಜವಾಬ್ಧಾರಿಗಳು ಹೆಚ್ಚಲಿದೆ. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ದೈವಾನುಕೂಲದಿಂದ ಇಂದು ನೀವು ಕೈ ಹಿಡಿಯುವ ಕೆಲಸ ಸುಸ್ರೂತ್ರವಾಗಿ ನೆರವೇರಲಿದೆ. ಆದರೆ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಬೇಕು. ದೇವತಾ ಪ್ರಾರ್ಥನೆ ಮರೆಯದಿರಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮನೆಯ ಆವರಣದಲ್ಲಿ ಶಮಿ ವೃಕ್ಷವಿದ್ದರೆ ಈ ಎಲ್ಲಾ ಫಲ ನಿಮ್ಮದಾಗಲಿದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments