ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 5 ಜೂನ್ 2020 (08:59 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೃತ್ತಿರಂಗದಲ್ಲಿ ಹಿತಶತ್ರುಗಳ ಕಾಟ ಹೆಚ್ಚಾಗುವುದು. ಉದ್ಯೋಗದಲ್ಲಿ ಬದಲಾವಣೆಗೆ ಮನಸ್ಸು ಬಯಸಲಿದೆ. ಸಾಂಸಾರಿಕವಾಗಿ ನೆಮ್ಮದಿ ಸಿಗಲಿದೆ. ಆದರೆ ಅನಗತ್ಯ ವಿಚಾರಗಳಿಗೆ ಚಿಂತೆ ಮಾಡುವುದನ್ನು ಬಿಡಿ. ಆರೋಗ್ಯದಲ್ಲಿ ಕಾಳಜಿಯಿರಲಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಹೊಸ ಉತ್ಸಾಹದಿಂದ ಕೆಲಸ ಮಾಡಲಿದ್ದೀರಿ. ಧರ್ಮ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ನಿಮ್ಮ ಕ್ರಿಯಾಶೀಲತೆಗೆ ತಕ್ಕ ಮನ್ನಣೆ ಸಿಗಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ಮಿಥುನ: ವೃತ್ತಿರಂಗದಲ್ಲಿ ಮೇಲ್ವರ್ಗದ ಹುದ್ದೆಯಲ್ಲಿರುವವರಿಗೆ ಹೆಚ್ಚಿನ ಜವಾಬ್ಧಾರಿಗಳನ್ನು ಹೊರಬೇಕಾಗುತ್ತದೆ. ಬಿಡುವಿಲ್ಲದ ಕಾರ್ಯದೊತ್ತಡದಿಂದ ದೇಹಾಯಾಸವಾಗಲಿದೆ. ನ್ಯಾಯಾಲಯದ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಸಿಗಲಿದೆ. ಇಷ್ಟ ಮಿತ್ರರ ಭೇಟಿ ಯೋಗವಿದೆ.

ಕರ್ಕಟಕ: ಕಾರ್ಯರಂಗದಲ್ಲಿ ಉನ್ನತ ಸ್ಥಾನದ ಯೋಗವಿದ್ದರೂ ಹಿತಶತ್ರುಗಳ ಉಪಟಳವಿರಲಿದೆ. ಬಾಕಿ ಹಣ ಪಾವತಿಯಾಗಲಿದ್ದು, ಆರ್ಥಿಕವಾಗಿ ಉನ್ನತಿಯ ಯೋಗವಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಚಿಂತೆ ಬೇಡ.

ಸಿಂಹ: ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಹೊಸ ವ್ಯವಹಾರಗಳಿಗೆ ಬಂಡವಾಳ ಹೂಡಿಕೆ ಮಾಡಲು ಇದು ಸಕಾಲ. ಇಷ್ಟಮಿತ್ರರೊಂದಿಗೆ ಭೋಜನ, ಉತ್ತಮ ಸಮಯ ಕಳೆಯಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಧನವ್ಯಯ ಮಾಡಲಿದ್ದೀರಿ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆಯುಂಟಾಗಲಿದ್ದು, ಭವಿಷ್ಯದ ಬಗ್ಗೆ ಚಿಂತೆಯಾಗಲಿದೆ. ಹಣಕಾಸಿನ ಮುಗ್ಗಟ್ಟು ಎದುರಿಸಲು ಸಿದ್ಧರಾಗಿ. ಸಂಗಾತಿಯ ಸಾಂತ್ವನ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ.

ತುಲಾ: ವ್ಯಾಪಾರ ವ್ಯವಹಾರಗಳಲ್ಲಿ ಹೂಡಿಕೆ ಮಾಡಲಿದ್ದು, ಉತ್ತಮ ಫಲ ಪಡೆಯಲಿದ್ದೀರಿ. ಆದಾಯದಲ್ಲಿ ಕೊಂಚ ಚೇತರಿಕೆ ಕಂಡುಬರಲಿದೆ. ದಾಂಪತ್ಯದಲ್ಲಿ ಸಂತೋಷ ಹೆಚ್ಚಾಗಲಿದೆ. ವಿದ್ಯಾರ್ಥಿಗಳಿಗೆ ಭವಿಷ್ಯದ ಬಗ್ಗೆ ಚಿಂತೆಯಾಗಲಿದೆ. ದೇವತಾ  ಪ್ರಾರ್ಥನೆ ಮಾಡಿ.

ವೃಶ್ಚಿಕ: ಅರ್ಧಕ್ಕೇ ನಿಂತ ಕೆಲಸಗಳಿಗೆ ಮರು ಚಾಲನೆ ನೀಡಲಿದ್ದೀರಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಅವಿವಾಹಿತರಿಗೆ ಶೀಘ‍್ರ ಕಂಕಣ ಬಲ ಕೂಡಿಬರಲಿದೆ. ಮನೆಗೆ ಅನಿರೀಕ್ಷಿತವಾಗಿ ಅತಿಥಿಗಳ ಆಗಮನವಾಗಲಿದ್ದು, ಸಂತಸವಾಗಲಿದೆ.

ಧನು: ನಿಮ್ಮ ಕೆಲವೊಂದು ನಡೆಗಳು ಸಂಗಾತಿಯ ಮುನಿಸಿಗೆ ಕಾರಣವಾದೀತು. ಅನಗತ್ಯ ವಿಚಾರಗಳಲ್ಲಿ ಮೂಗು ತೂರಿಸಲು ಹೋಗಬೇಡಿ. ಆದಾಯ ಕುಂಠಿತವಾಗಲಿದ್ದು, ಉಳಿಕೆ ಬಗ್ಗೆ ಯೋಚನೆ ಮಾಡಬೇಕು. ವೃತ್ತಿರಂಗದಲ್ಲಿ ಆಶಾವಾದಿಗಳಾಗಿ.

ಮಕರ: ವಿದ್ಯಾರ್ಥಿಗಳಿಗೆ ಅಭಿವೃದ್ಧಿಗೆ ಪೂರಕವಾದ ಸನ್ನಿವೇಶ ಒದಗಿಬರಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಸಾಂಸಾರಿಕವಾಗಿ ಸಂತಸವಿರಲಿದೆ. ಮಕ್ಕಳಿಂದ ಶುಭ ಸಮಾಚಾರ ಕೇಳಿಬರಲಿದೆ. ಇಷ್ಟ ಮಿತ್ರರ ಭೇಟಿಯಾಗಲಿದ್ದೀರಿ.

ಕುಂಭ: ಕೆಲಸ ಕಾರ್ಯಗಳು ನೀವು ಅಂದುಕೊಂಡಂತೇ ನಡೆಯದೇ ಇದ್ದಾಗ ಕೋಪ, ತಾಪಗಳುಂಟಾಗುವುದು ಸಹಜ. ಆದರೆ ದುಡುಕಿನ ನಿರ್ಧಾರದಿಂದ ಕಾರ್ಯಹಾನಿಯಾಗಬಹುದು. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ತಾಳ್ಮೆಯಿರಲಿ.

ಮೀನ: ಮಹಿಳೆಯರಿಗೆ ಇಂದು ತಾಳ್ಮೆ ಪರೀಕ್ಷಿಸುವ ಘಟನೆಗಳನ್ನು ಎದುರಿಸಬೇಕಾಗುತ್ತದೆ. ಹಿರಿಯರ ಸಲಹೆಗೆ ಕಿವಿಗೊಡುವುದು ಮುಖ್ಯ. ವೃತ್ತಿರಂಗದಲ್ಲಿ ಹೆಚ್ಚಿನ ಜವಾಬ್ಧಾರಿ ಹೊರಲು ಸಿದ್ಧರಾಗಬೇಕಾಗುತ್ತದೆ. ವ್ಯಾಪಾರಿಗಳಿಗೆ ಮುನ್ನಡೆಯಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ಈ ವಸ್ತುಗಳನ್ನು ಮನೆಗೆ ತರಬೇಡಿ

ದೀಪ ಹಚ್ಚುವಾಗ ಗೊತ್ತಿಲ್ಲದೆ ಈ ತಪ್ಪು ಮಾಡಬೇಡಿ, ಶ್ರೇಯಸ್ಸಲ್ಲ

ಪವರ್ ಫುಲ್ ಸರಸ್ವತಿ ಮಂತ್ರ ಕನ್ನಡದಲ್ಲಿ ಇಲ್ಲಿದೆ

ಮಕರ ಸಂಕ್ರಾಂತಿ ನಾಳೆಯಾ, ನಾಡಿದ್ದಾ.. ಕನ್ ಫ್ಯೂಷನ್ ಬೇಡ ಇಲ್ಲಿ ನೋಡಿ

ಏಕಾದಶಮುಖ ಹನುಮತ್ಕವಚ ಸ್ತೋತ್ರಂ ಕನ್ನಡದಲ್ಲಿ

ಮುಂದಿನ ಸುದ್ದಿ
Show comments