Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 14 ಜೂನ್ 2020 (09:01 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ಮನೋಬಲಕ್ಕೆ ಧಕ್ಕೆ ತರುವ ಕೆಲವು ಘಟನೆಗಳಿಂದ ಭವಿಷ್ಯದ ಬಗ್ಗೆ ಆತಂಕ ಮೂಡಬಹುದು. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಅನಗತ್ಯ ಯೋಚನೆಗಳಿಗೆ ಕಡಿವಾಣ ಹಾಕುವುದು ಒಳಿತು. ದೇವತಾ ಪ್ರಾರ್ಥನೆಯಿಂದ ನೆಮ್ಮದಿ.

ವೃಷಭ: ಕಾರ್ಯಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗಬಹುದು. ಅನಗತ್ಯ ಮನಸ್ತಾಪಗಳು, ಕೋಪ ತಾಪಗಳಿಗೆ ಕಡಿವಾಣ ಹಾಕಿ. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಮುನ್ನಡೆಯಿರುತ್ತದೆ. ಅವಿವಾಹಿತರಿಗೆ ಶೀಘ‍್ರ ಕಂಕಣ ಬಲ ಕೂಡಿಬರಲಿದೆ.

ಮಿಥುನ: ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳ ಬಗ್ಗೆ ಹೆಚ್ಚಿನ ಜಾಗ್ರತೆ ಅಗತ್ಯ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಉದಾಸೀನ ಪ್ರವೃತ್ತಿ ಕಂಡುಬರಬಹುದು. ವೈವಾಹಿಕ ಪ್ರಸ್ತಾಪಗಳಿಗೆ ಅಡಚಣೆ ಉಂಟಾಗಬಹುದು. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ.

ಕರ್ಕಟಕ: ದೂರ ಸಂಚಾರದಲ್ಲಿ ಅಡೆತಡೆಗಳು ಉಂಟಾಗಬಹುದು. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ಲಭಿಸಲಿವೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಸಿಂಹ: ವ್ಯಾಪಾರ, ವ್ಯವಹಾರದಲ್ಲಿ ಹೆಚ್ಚಿನ ಲಾಭ ಕಂಡುಬಂದರೂ ಒಂದು ರೀತಿಯ ಮಾನಸಿಕ ಅಸಮಾಧಾನವಿದ್ದೇ ಇರುತ್ತದೆ. ಸಂಗಾತಿಯೊಂದಿಗೆ ಮನಸ್ಸಿನ ಭಾವನೆ ಹಂಚಿಕೊಳ್ಳಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ.

ಕನ್ಯಾ: ಉದ್ಯೋಗದ ಬಗ್ಗೆ ಚಿಂತೆಯಾಗಲಿದೆ. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆ ತರಲು ನಾನಾ ಮಾರ್ಗಗಳನ್ನು ಹುಡುಕಾಡಲಿದ್ದೀರಿ. ಮಕ್ಕಳಿಂದ ಸಂತಸವಾಗಲಿದೆ. ವೃತ್ತಿರಂಗದಲ್ಲಿ ಹಿತಶತ್ರುಗಳ ಕಾಟವಿರಲಿದೆ. ಕಿರು ಸಂಚಾರ ಮಾಡಬೇಕಾಗುತ್ತದೆ.

ತುಲಾ: ಕೌಟುಂಬಿಕವಾಗಿ ಆಗಾಗ ಖರ್ಚು ವೆಚ್ಚಗಳುಂಟಾಗಬಹುದು. ಗೃಹ ಬಳಕೆ ವಸ್ತುಗಳ ಖರೀದಿಗೆ ಓಡಾಟ ನಡೆಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲಿದೆ. ಹೊಸ ಯೋಜನೆಗಳಿಗೆ ಕೈ ಹಾಕಲು ಕೆಲವು ದಿನಗಳು ಕಾಯುವುದು ಒಳಿತು.

ವೃಶ್ಚಿಕ: ಕಾರ್ಯಕ್ಷೇತ್ರದಲ್ಲಿ ಶಾಂತಿ, ಸಮಾಧಾನದಿಂದ ಮುಂದುವರಿದರೆ ಎದುರಾಗುವ ಸಮಸ್ಯೆಗಳಿಗೆ ಪರಿಹಾರವೂ ಸಿಗಲಿದೆ. ಪ್ರೇಮಿಗಳಿಗೆ ಮನೆಯವರ ವಿರೋಧ ವ್ಯಕ್ತವಾಗಲಿದೆ. ದಾಯಾದಿ ಕಲಹಗಳಿಗೆ ಹಿರಿಯರ ಮಧ್ಯಸ್ಥಿಕೆಯಿಂದ ಪರಿಹಾರ ಸಿಗಲಿದೆ.

ಧನು: ನೆರೆಹೊರೆಯವರು ನಿಮ್ಮ ಗುಟ್ಟು ತಿಳಿಯಲು ಕಾದಿರುತ್ತಾರೆ. ಎಚ್ಚರಿಕೆಯಿಂದ ವರ್ತಿಸಿ. ಮಾತಿನ ಮೇಲೆ ನಿಗಾ ಇರಲಿ. ಬಂಧುಮಿತ್ರರ ಪ್ರೀತಿಗೆ ಪಾತ್ರರಾಗಲಿದ್ದೀರಿ. ಅನಿರೀಕ್ಷಿತವಾಗಿ ಹಳೆಯ ಮಿತ್ರನ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ದಿನದಂತ್ಯಕ್ಕೆ ನೆಮ್ಮದಿಯ ಸುದ್ದಿ.

ಮಕರ: ಸಾಂಸಾರಿಕವಾಗಿ ಮಡದಿ ಮಕ್ಕಳ ಸಹಕಾರದಿಂದ ಕೆಲಸಗಳು ಪೂರ್ತಿಯಾಗಲಿವೆ. ವ್ಯಾಪಾರ ವ್ಯವಹಾರದಲ್ಲಿ ಉನ್ನತಾವಕಾಶಗಳು ಬಂದಾಗ ಕಣ‍್ಮುಚ್ಚಿ ಕೂರಬೇಡಿ. ಸರಕಾರಿ ಅಧಿಕಾರಿಗಳಿಗೆ ಬಿಡುವಿಲ್ಲದ ಕೆಲಸದಿಂದ ದೇಹ ಹೈರಾಣಾಗಬಹುದು.

ಕುಂಭ: ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಬಂದು ಒಂದು ರೀತಿಯ ನಿರುತ್ಸಾಹ ಕಾಡಲಿದೆ. ಆರ್ಥಿಕವಾಗಿ ಬಾಕಿ ಹಣ ಪಾವತಿ ಚಿಂತೆ ಕಾಡುವುದು.  ಮಕ್ಕಳ ವಿಚಾರದಲ್ಲಿ ಸಂತಸದ ವಾರ್ತೆ ಕೇಳಲಿದ್ದೀರಿ. ಅವಿವಾಹಿತರಿಗೆ ಶೀಘ‍್ರ ಕಂಕಣ ಬಲ ಕೂಡಿಬರಲಿದೆ.

ಮೀನ: ನಿಮ್ಮ ವೈಯಕ್ತಿಕ ವಿಚಾರದಲ್ಲಿ ಇನ್ನೊಬ್ಬರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಮಡದಿಯ ಸಹಕಾರವಿರುವುದರಿಂದ ನೆಮ್ಮದಿಯಿರಲಿದೆ. ಆರ್ಥಿಕವಾಗಿ ಋಣಬಾಧೆಯಿಂದ ಮುಕ್ತರಾಗಲಿದ್ದೀರಿ. ಆದಾಯಕ್ಕೆ ತಕ್ಕ ಅಭಿವೃದ್ಧಿ ನಿರೀಕ್ಷಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments