Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 15 ಜೂನ್ 2020 (08:41 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮನೆಗೆ ಬೇಕಾದ ಹೊಸ ವಸ್ತುಗಳ ಖರೀದಿ ಮಾಡಲಿದ್ದೀರಿ. ಮಕ್ಕಳ ವಿದ್ಯಾಭ‍್ಯಾಸದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಲಿದ್ದೀರಿ. ಕೃಷಿಕರಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ದಿನದಂತ್ಯಕ್ಕೆ ಕಿರು ಸಂಚಾರ ಮಾಡಬೇಕಾಗುತ್ತದೆ. ದೇವರ ಪ್ರಾರ್ಥನೆ ಮಾಡಿ.

ವೃಷಭ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಮಿಥುನ: ವೃತ್ತಿರಂಗದಲ್ಲಿ ಅವಸರದ ನಿರ್ಧಾರದಿಂದ ಅವಘಡಗಳಾಗುವ ಸಾಧ‍್ಯತೆಯಿದೆ. ಉದ್ಯಮಗಳಲ್ಲಿ ತೊಡಗಿಸಿಕೊಂಡವರಿಗೆ ಆದಾಯ ವೃದ್ಧಿಯಾಗಲಿದೆ. ಹಿರಿಯರ ಮಾತಿಗೆ ಕಿವಿಗೊಡಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ಹೊಸ ವ್ಯಾಪಾರ, ವ್ಯವಹಾರಗಳು ಹೊಸ ನಿರೀಕ್ಷೆ ಉಂಟು ಮಾಡಲಿದೆ. ಆಶಾದಾಯಕ ವಾತಾವರಣವಿರಲಿದೆ. ಕೌಟುಂಬಿಕವಾಗಿ ಸಂತೋಷವಿರಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ಕೆಳಹಂತದ ನೌಕರರಿಗೆ ಮುನ್ನಡೆಯ ಯೋಗವಿದೆ.

ಸಿಂಹ: ಸಾಂಸಾರಿಕವಾಗಿ ಗೃಹಿಣಿಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ. ಅನಿರೀಕ್ಷಿತವಾಗಿ ಧನಲಾಭವಾಗುವ ಯೋಗವಿದೆ. ಆದರೆ ಯಾರಿಗೂ ಇಂದು ಸಾಲ ಕೊಡಲು ಹೋಗಬೇಡಿ. ಖರ್ಚು ವೆಚ್ಚಗಳಿಗೆ ಕಡಿವಾಣವಿರಲಿ. ಮಿತ್ರರ ಭೇಟಿಯಾಗಲಿದ್ದೀರಿ.

ಕನ್ಯಾ: ಕಷ್ಟವಾದರೂ ಅಂತಿಮವಾಗಿ ಕಾರ್ಯಪ್ರಾಪ್ತಿಯಾದ ಸಂತೋಷ ಸಿಗಲಿದೆ. ಶಿಕ್ಷಣ ಕ್ಷೇತ್ರದಲ್ಲಿರುವವರಿಗೆ ಅತಂತ್ರ ಸ್ಥಿತಿ ಎದುರಾಗಲಿದೆ. ಆರ್ಥಿಕ ಪರಿಸ್ಥಿತಿ ಕಷ್ಟವಾಗಿರುವುದರಿಂದ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಕುಲದೇವರ ಪ್ರಾರ್ಥನೆ ಮಾಡಿ.

ತುಲಾ: ವಿದ್ಯಾರ್ಥಿಗಳಿಗೆ ಶೈಕ್ಷಣಿಕ ರಂಗದಲ್ಲಿ ಪ್ರಗತಿಯ ಯೋಗವಿದೆ. ಹೊಸ ಅವಕಾಶಗಳನ್ನು ಸಶಕ್ತವಾಗಿ ಬಳಸಿಕೊಳ್ಳಬೇಕು. ನಿರುದ್ಯೋಗಿಗಳು ಸ್ವಯಂ ಉದ್ಯೋಗದಿಂದ ಲಾಭ ಪಡೆಯಲಿದ್ದಾರೆ. ಆಗಾಗ ಖರ್ಚು ವೆಚ್ಚಗಳು ಕಂಡುಬರಲಿವೆ.

ವೃಶ್ಚಿಕ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಇದು ಸಕಾಲ. ವೃತ್ತಿರಂಗದಲ್ಲಿ ಅನಗತ್ಯ ವಾದ ವಿವಾದಗಳಾಗದಂತೆ ಎಚ್ಚರಿಕೆ ವಹಿಸಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ದಿನದಂತ್ಯಕ್ಕೆ ನೆಮ್ಮದಿ ಸಿಗಲಿದೆ.

ಧನು: ಮಿತ್ರರ ಸಹಾಯದಿಂದ ಹೊಸ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಕೌಟುಂಬಿಕ ಕಲಹವಾಗದಂತೆ ಎಚ್ಚರಿಕೆ ವಹಿಸಿ. ಮಾತಿನ ಮೇಲೆ ನಿಗಾ ಇರಲಿ. ಸಂಗಾತಿಯ ಮಾತಿಗೆ ಬೆಲೆಕೊಡಬೇಕಾಗುತ್ತದೆ. ಚಿನ್ನಾಭರಣಗಳನ್ನು ಜೋಪಾನವಾಗಿಡುವ ಜವಾಬ್ಧಾರಿಯಿರುತ್ತದೆ.

ಮಕರ: ಅನಿರೀಕ್ಷಿತವಾದ ಬದಲಾವಣೆಯಿಂದ ಕಾರ್ಯಕ್ಷೇತ್ರದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಂಡುಬರಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲಿದ್ದೀರಿ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.

ಕುಂಭ: ವೃತ್ತಿರಂಗದಲ್ಲಿ ನಿಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರುವ ಪ್ರಸಂಗಗಳು ಎದುರಾದೀತು. ಮನೆಯಲ್ಲಿ ಶಾಂತಿ ಕದಡುವ ಘಟನೆಗಳು ನಡೆದೀತು. ತಾಳ್ಮೆ, ಸಂಯಮ ಅಗತ್ಯ. ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು. ಹಿರಿಯರಿಂದ ಉಡುಗೊರೆ ಸಿಗಲಿದೆ.

ಮೀನ: ನಿಮ್ಮನ್ನು ಇದುವರೆಗೆ ಬಹುವಾಗಿ ಕಾಡುತ್ತಿದ್ದ ಸಮಸ್ಯೆಗಳಿಗೆ ಒಂದು ರೀತಿಯ ಪರಿಹಾರ ಸಿಗಲಿದೆ. ಸಾಂಸಾರಿಕವಾಗಿ ಸಂಗಾತಿಯ ಪ್ರೀತಿಗೆ ಭಾಜನರಾಗಲಿದ್ದೀರಿ. ಸರಕಾರಿ ವೃತ್ತಿಯವರಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗಲಿದೆ. ಅನಿರೀಕ್ಷಿತ ಧನಲಾಭವಾಗಲಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮನೆಯ ಆವರಣದಲ್ಲಿ ಶಮಿ ವೃಕ್ಷವಿದ್ದರೆ ಈ ಎಲ್ಲಾ ಫಲ ನಿಮ್ಮದಾಗಲಿದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments