Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 17 ಜೂನ್ 2020 (08:46 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನ ಯೋಗವಿದೆ. ಸಾಮಾಜಿಕವಾಗಿ ಉತ್ತಮ ಸ್ಥಾನ ಮಾನ ಗಳಿಸುವ ಅವಕಾಶವಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ದೊರೆಯಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ವೃಷಭ: ಕೃಷಿಕರಿಗೆ ವ್ಯವಹಾರಕ್ಕೆ ಉತ್ತೇಜನ ಸಿಗಲಿದೆ. ಆರ್ಥಿಕವಾಗಿ ಅಧಿಕ ಧನಲಾಭವಾಗಲಿದೆ. ಲೆಕ್ಕ ಪತ್ರಗಳ ಬಗ್ಗೆ ಜಾಗ್ರತೆಯಿರಲಿ. ಕೌಟುಂಬಿಕವಾಗಿ ಜವಾಬ್ಧಾರಿ ಹೆಚ್ಚಲಿದೆ. ವ್ಯಾಪಾರಿಗಳಿಗೆ ಅಭಿವೃದ್ಧಿ ಕಂಡುಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಅನಿರೀಕ್ಷಿತವಾಗಿ ಹಳೆಯ ಮಿತ್ರರನ್ನು ಭೇಟಿಯಾದ ಸಂತಸ ಕಂಡುಬರಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ವಾಹನ ಸಂಚಾರ ಮಾಡುವ ಜಾಗ್ರತೆ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಆರ್ಥಿಕವಾಗಿ ಖರ್ಚು ವೆಚ್ಚ ಮಾಡುವಾಗ ಎಚ್ಚರವಿರಲಿ. ದಾಂಪತ್ಯದಲ್ಲಿ ಕಲಹಗಳಾಗದಂತೆ ಎಚ್ಚರಿಕೆ ವಹಿಸಿ. ವಿದ್ಯಾರ್ಥಿಗಳಿಗೆ ಪ್ರಯತ್ನ ಬಲಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದತ್ತ ಮನಸ್ಸಾಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಸಿಂಹ: ಸಾಂಸಾರಿಕವಾಗಿ ನೆಮ್ಮದಿಯ ದಿನಗಳಿವು. ಕುಟುಂಬ ಸದಸ್ಯರೊಂದಿಗೆ ಸಂತೋಷದ ಕ್ಷಣ ಕಳೆಯಲಿದ್ದೀರಿ. ಆರ್ಥಿಕವಾಗಿ ಧನಪ್ರಾಪ್ತಿಯಾಗಲಿರುವುದರಿಂದ ಅಂದುಕೊಂಡ ಕೆಲಸ ನೆರವೇರಿಸಲಿದ್ದೀರಿ. ಕಿರು ಸಂಚಾರದಿಂದ ಕಾರ್ಯಪ್ರಾಪ್ತಿ.

ಕನ್ಯಾ: ಉದ್ಯೋಗ ಭದ್ರತೆಯ ಅಪಾಯ ಎದುರಾಗಲಿದೆ. ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯಲು ಮುಂದಾಗಲಿದ್ದೀರಿ. ಅನವಶ್ಯಕ ಮಾತುಗಳಿಂದ ಕಲಹವಾದೀತು. ಮಾತಿನ ಮೇಲೆ ನಿಗಾ ಇರಲಿ. ಸಂಗಾತಿಯ ಅಭಿಪ್ರಾಯಗಳಿಗೆ ಬೆಲೆಕೊಡಿ.

ತುಲಾ: ಕಾರ್ಯಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗಲಿದೆ. ಕೌಟುಂಬಿಕವಾಗಿ ಇದುವರೆಗೆ ಇದ್ದ ಅಸಮಾಧಾನಗಳು ದೂರವಾಗಲಿದೆ. ಅನಗತ್ಯ ವಿಚಾರಗಳಿಗೆ ತಲೆಕಡಿಸಿಕೊಳ್ಳುವುದು ಬೇಕಾಗಿಲ್ಲ. ಬಂಧು ಜನರ ಭೇಟಿಯಾಗಲಿದ್ದೀರಿ.

ವೃಶ್ಚಿಕ: ಕಾರ್ಯಕ್ಷೇತ್ರದಲ್ಲಿ ನಿಧಾನಗತಿಯಲ್ಲಿ ಕೆಲಸ ಕಾರ್ಯಗಳು ನಡೆಯಲಿವೆ. ನಿರಾಶೆ ಬೇಡ. ಸರಕಾರಿ ಕೆಲಸಗಳಲ್ಲಿ ಮುನ್ನಡೆ ಸಿಗಲಿದೆ. ದೇವತಾ ಕಾರ್ಯಗಳಲ್ಲಿ ಆಸಕ್ತಿ ಮೂಡಲಿದೆ. ಗೃಹ ಬಳಕೆ ವಸ್ತುಗಳ ಖರೀದಿಗೆ ಹಣ ಖರ್ಚು ಮಾಡಲಿದ್ದೀರಿ.

ಧನು: ಕಷ್ಟದ ಸಮಯದಲ್ಲಿ ನೆರೆಹೊರೆಯವರಿಂದ ಸಹಾಯ ಸಿಗಲಿದೆ. ವಿದ್ಯಾರ್ಥಿಗಳಿಗೆ ಭವಿಷ್ಯದ ಬಗ್ಗೆ ಆತಂಕವಾಗಬಹುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಆರ್ಥಿಕವಾಗಿ ಜಾಗ್ರತೆ ಮಾಡುವುದು ಉತ್ತಮ. ಹೂಡಿಕೆ ವ್ಯವಹಾರಕ್ಕೆ ಕೆಲವು ದಿನ ಕಾಯಿರಿ.

ಮಕರ: ವ್ಯಾಪಾರ ವ್ಯವಹಾರಗಳು ನಿರೀಕ್ಷಿತ ಮಟ್ಟದಲ್ಲಿ ಲಾಭ ತಂದುಕೊಡಲಿವೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ಉತ್ತಮವಾಗಲಿದೆ. ಸಾಮಾಜಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ಮನೋಕಾಮನೆಗಳನ್ನು ಪೂರೈಸಲು ಇಷ್ಟದೇವರ ಪ್ರಾರ್ಥನೆ ಮಾಡುವಿರಿ.

ಕುಂಭ: ಅಂದುಕೊಂಡಿದ್ದೆಲ್ಲಾ ನಡೆಯದು ಎಂಬ ಸತ್ಯ ಮನಗಾಣುವಿರಿ. ಕೆಲಸದಲ್ಲಿ ಒಂದು ರೀತಿಯ ನಿರುತ್ಸಾಹ ಕಂಡುಬರಲಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ.

ಮೀನ: ದೈವಾನುಗ್ರಹದಿಂದ ನೀವು ಅಂದುಕೊಂಡ ಕೆಲಸ ಕಾರ್ಯಗಳು ಸುಗಮವಾಗಿ ನೆರವೇರಲಿದೆ. ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ. ಸಕಾಲದಲ್ಲಿ ಸಂಗಾತಿಯು ನೀಡುವ ಸಲಹೆಗಳು ಉಪಯುಕ್ತವೆನಿಸಲಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮನೆಯ ಆವರಣದಲ್ಲಿ ಶಮಿ ವೃಕ್ಷವಿದ್ದರೆ ಈ ಎಲ್ಲಾ ಫಲ ನಿಮ್ಮದಾಗಲಿದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ