Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 19 ಜೂನ್ 2020 (08:54 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಗೃಹ ಬಳಕೆ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳು ಅಧಿಕವಾಗಲಿದೆ. ದೂರ ಪ್ರಯಾಣದಿಂದ ಕಾರ್ಯಸಾಧನೆಯಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಅನಗತ್ಯ ವಿಚಾರಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ವಿದ್ಯಾರ್ಥಿಗಳ ಅಭ್ಯಾಸದಲ್ಲಿ ತೊಡಕುಗಳು ಎದುರಾಗಬಹುದು. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಹಿರಿಯರ ಸಲಹೆಗಳನ್ನು ಪಾಲಿಸಿದರೆ ಉತ್ತಮ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ಮಿಥುನ: ನಯವಾಗಿ ಮಾತನಾಡಿಕೊಂಡು ಹತ್ತಿರವಾಗಲು ಬಯಸುವವರು ಇಂದಿಗೆ ಆಪ್ತರೆನಿಸಬಹುದು. ಆದರೆ ಅವರಿಂದ ಮುಂದೆ ತೊಂದರೆ ತಪ್ಪಿದ್ದಲ್ಲ ಎಂಬುದನ್ನು ಮನಗಾಣಿರಿ. ವೃತ್ತಿರಂಗದಲ್ಲಿ ಉನ್ನತಿ ಕಾಣುವಿರಿ. ಕಾರ್ಯನಿಮಿತ್ತ ಕಿರು ಸಂಚಾರ ಮಢಬೇಕಾಗುತ್ತದೆ.

ಕರ್ಕಟಕ: ಬಂಧು ಮಿತ್ರರ ಅಗಲುವಿಕೆಯ ನೋವು ಕಾಡಲಿದೆ. ವಾದ ವಿವಾದಗಳಲ್ಲಿ ಮೇಲುಗೈ ಸಾಧಿಸಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ. ಸಂಗಾತಿಯ ಮನಸ್ಸಿಗೆ ಖುಷಿ ಕೊಡಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ವಿದ್ಯಾರ್ಥಿಗಳ ಅಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ. ಪ್ರೀತಿ ಪಾತ್ರರ ಮನಸ್ಸಿಗೆ ಖುಷಿ ನೀಡಲಿದ್ದೀರಿ. ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲತೆ ಪ್ರಕಟಿಸಲು ಅವಕಾಶ ದೊರೆಯಲಿದೆ.

ಕನ್ಯಾ: ದೇವತಾ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಆರ್ಥಿಕವಾಗಿ ಏರುಪೇರು ಇದ್ದೇ ಇರುತ್ತದೆ. ಹೀಗಾಗಿ ಹೆಚ್ಚಿನ ಧನಾರ್ಜನೆಗೆ ನಾನಾ ಮೂಲಗಳನ್ನು ಕಂಡುಕೊಳ್ಳಲಿದ್ದೀರಿ. ಹಳೆಯ ಮಿತ್ರನ ಭೇಟಿ ಹಳೆಯ ನೆನಪುಗಳನ್ನು ತರಿಸಲಿದೆ. ಇಷ್ಟ ಭೋಜನ ಯೋಗವಿದೆ.

ತುಲಾ: ಸ್ಥಿರಾಸ್ತಿ ಖರೀದಿಗೆ ಮುಂದಾಗಲಿದ್ದೀರಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗಾಗಿ ಧನವ್ಯಯವಾಗಲಿದೆ. ದೂರ ಪ್ರಯಾಣದಲ್ಲಿ ಕಳ್ಳತನದ ಭೀತಿಯಿದೆ. ಅಧಿಕಾರಿ ವರ್ಗದವರಿಗೆ ಉನ್ನತ ಸ್ಥಾನ ಮಾನದ ಯೋಗವಿದೆ. ಆದರೆ ಹಿತಶತ್ರುಗಳ ಬಗ್ಗೆ ಎಚ್ಚರವಿರಲಿ.

ವೃಶ್ಚಿಕ: ನೆರೆಹೊರೆಯವರೊಂದಿಗೆ ನೀರಿಗಾಗಿ ಕಾದಾಟ ನಡೆಯಲಿದೆ.ವೃತ್ತಿರಂಗದಲ್ಲಿ ಅಧಿಕಾರಿ ವರ್ಗದವರಿಂದ ಪ್ರಶಂಸೆ ವ್ಯಕ್ತವಾಗಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ವ್ಯಾಪಾರಿಗಳಿಗೆ ಆದಾಯ ಗಳಿಕೆಗೆ ಮಾರ್ಗ ಸಿಗಲಿದೆ.

ಧನು: ಧಾರ್ಮಿಕ ಕಾರ್ಯಗಳು ನಿರ್ವಿಘ್ನವಾಗಿ ನೆರವೇರಲಿದೆ. ಮನೆಗೆ ಬಂಧು ಮಿತ್ರರ ಆಗಮನವಾಗಲಿದ್ದು, ಸಂತಸ ಸಿಗಲಿದೆ. ಆದರೆ ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ. ಕೆಳ ಹಂತದ ನೌಕರ ವರ್ಗದವರಿಗೆ ಉನ್ನತ ಸ್ಥಾನ ಮಾನದ ಯೋಗವಿದೆ.

ಮಕರ: ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಬದಲಾವಣೆ ಸಿಗಲಿದೆ. ಮಹಿಳೆಯರಿಗೆ ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಎಚ್ಚರಿಕೆ ಅಗತ್ಯ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ವಿವಾಹ ಭಾಗ್ಯವಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕುಂಭ: ಶಿಕ್ಷಣ ಕಾರ್ಯದಲ್ಲಿ ಉದ್ಯೋಗದಲ್ಲಿರುವವರು ಪ್ರಗತಿ ಸಾಧಿಸಲಿದ್ದಾರೆ. ವಾಹನ ಸವಾರರಿಗೆ ಅಪಘಾತದ ಭಯವಿದೆ. ಎಚ್ಚರಿಕೆ ಅಗತ್ಯ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ತೋರಿಬರಲಿದೆ. ಮಾನಸಿಕವಾಗಿ ಋಣಾತ್ಮಕ ಚಿಂತೆಗಳು ಕಾಡಲಿವೆ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಹಿರಿಯರಿಗೆ ಒಂಟಿತನದ ಬೇಸರ ಕಾಡಲಿದೆ. ದೇವಾಲಯ ಸಂದರ್ಶನ ಯೋಗವಿದೆ. ಭೂಮಿ, ಮನೆ ಖರೀದಿ ಯೋಗವಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನಡೆಸಲು ಸಿದ್ಧತೆ ನಡೆಸಲಿದ್ದೀರಿ. ನಿಮ್ಮ ಪ್ರಾಮಾಣಿಕತೆಗೆ ತಕ್ಕ ಬೆಲೆ ಸಿಗುವುದು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ