Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 19 ಜೂನ್ 2020 (08:54 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಗೃಹ ಬಳಕೆ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳು ಅಧಿಕವಾಗಲಿದೆ. ದೂರ ಪ್ರಯಾಣದಿಂದ ಕಾರ್ಯಸಾಧನೆಯಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಅನಗತ್ಯ ವಿಚಾರಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ವಿದ್ಯಾರ್ಥಿಗಳ ಅಭ್ಯಾಸದಲ್ಲಿ ತೊಡಕುಗಳು ಎದುರಾಗಬಹುದು. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಹಿರಿಯರ ಸಲಹೆಗಳನ್ನು ಪಾಲಿಸಿದರೆ ಉತ್ತಮ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ಮಿಥುನ: ನಯವಾಗಿ ಮಾತನಾಡಿಕೊಂಡು ಹತ್ತಿರವಾಗಲು ಬಯಸುವವರು ಇಂದಿಗೆ ಆಪ್ತರೆನಿಸಬಹುದು. ಆದರೆ ಅವರಿಂದ ಮುಂದೆ ತೊಂದರೆ ತಪ್ಪಿದ್ದಲ್ಲ ಎಂಬುದನ್ನು ಮನಗಾಣಿರಿ. ವೃತ್ತಿರಂಗದಲ್ಲಿ ಉನ್ನತಿ ಕಾಣುವಿರಿ. ಕಾರ್ಯನಿಮಿತ್ತ ಕಿರು ಸಂಚಾರ ಮಢಬೇಕಾಗುತ್ತದೆ.

ಕರ್ಕಟಕ: ಬಂಧು ಮಿತ್ರರ ಅಗಲುವಿಕೆಯ ನೋವು ಕಾಡಲಿದೆ. ವಾದ ವಿವಾದಗಳಲ್ಲಿ ಮೇಲುಗೈ ಸಾಧಿಸಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ. ಸಂಗಾತಿಯ ಮನಸ್ಸಿಗೆ ಖುಷಿ ಕೊಡಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ವಿದ್ಯಾರ್ಥಿಗಳ ಅಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ. ಪ್ರೀತಿ ಪಾತ್ರರ ಮನಸ್ಸಿಗೆ ಖುಷಿ ನೀಡಲಿದ್ದೀರಿ. ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲತೆ ಪ್ರಕಟಿಸಲು ಅವಕಾಶ ದೊರೆಯಲಿದೆ.

ಕನ್ಯಾ: ದೇವತಾ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಆರ್ಥಿಕವಾಗಿ ಏರುಪೇರು ಇದ್ದೇ ಇರುತ್ತದೆ. ಹೀಗಾಗಿ ಹೆಚ್ಚಿನ ಧನಾರ್ಜನೆಗೆ ನಾನಾ ಮೂಲಗಳನ್ನು ಕಂಡುಕೊಳ್ಳಲಿದ್ದೀರಿ. ಹಳೆಯ ಮಿತ್ರನ ಭೇಟಿ ಹಳೆಯ ನೆನಪುಗಳನ್ನು ತರಿಸಲಿದೆ. ಇಷ್ಟ ಭೋಜನ ಯೋಗವಿದೆ.

ತುಲಾ: ಸ್ಥಿರಾಸ್ತಿ ಖರೀದಿಗೆ ಮುಂದಾಗಲಿದ್ದೀರಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗಾಗಿ ಧನವ್ಯಯವಾಗಲಿದೆ. ದೂರ ಪ್ರಯಾಣದಲ್ಲಿ ಕಳ್ಳತನದ ಭೀತಿಯಿದೆ. ಅಧಿಕಾರಿ ವರ್ಗದವರಿಗೆ ಉನ್ನತ ಸ್ಥಾನ ಮಾನದ ಯೋಗವಿದೆ. ಆದರೆ ಹಿತಶತ್ರುಗಳ ಬಗ್ಗೆ ಎಚ್ಚರವಿರಲಿ.

ವೃಶ್ಚಿಕ: ನೆರೆಹೊರೆಯವರೊಂದಿಗೆ ನೀರಿಗಾಗಿ ಕಾದಾಟ ನಡೆಯಲಿದೆ.ವೃತ್ತಿರಂಗದಲ್ಲಿ ಅಧಿಕಾರಿ ವರ್ಗದವರಿಂದ ಪ್ರಶಂಸೆ ವ್ಯಕ್ತವಾಗಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ವ್ಯಾಪಾರಿಗಳಿಗೆ ಆದಾಯ ಗಳಿಕೆಗೆ ಮಾರ್ಗ ಸಿಗಲಿದೆ.

ಧನು: ಧಾರ್ಮಿಕ ಕಾರ್ಯಗಳು ನಿರ್ವಿಘ್ನವಾಗಿ ನೆರವೇರಲಿದೆ. ಮನೆಗೆ ಬಂಧು ಮಿತ್ರರ ಆಗಮನವಾಗಲಿದ್ದು, ಸಂತಸ ಸಿಗಲಿದೆ. ಆದರೆ ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ. ಕೆಳ ಹಂತದ ನೌಕರ ವರ್ಗದವರಿಗೆ ಉನ್ನತ ಸ್ಥಾನ ಮಾನದ ಯೋಗವಿದೆ.

ಮಕರ: ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಬದಲಾವಣೆ ಸಿಗಲಿದೆ. ಮಹಿಳೆಯರಿಗೆ ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಎಚ್ಚರಿಕೆ ಅಗತ್ಯ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ವಿವಾಹ ಭಾಗ್ಯವಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕುಂಭ: ಶಿಕ್ಷಣ ಕಾರ್ಯದಲ್ಲಿ ಉದ್ಯೋಗದಲ್ಲಿರುವವರು ಪ್ರಗತಿ ಸಾಧಿಸಲಿದ್ದಾರೆ. ವಾಹನ ಸವಾರರಿಗೆ ಅಪಘಾತದ ಭಯವಿದೆ. ಎಚ್ಚರಿಕೆ ಅಗತ್ಯ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ತೋರಿಬರಲಿದೆ. ಮಾನಸಿಕವಾಗಿ ಋಣಾತ್ಮಕ ಚಿಂತೆಗಳು ಕಾಡಲಿವೆ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಹಿರಿಯರಿಗೆ ಒಂಟಿತನದ ಬೇಸರ ಕಾಡಲಿದೆ. ದೇವಾಲಯ ಸಂದರ್ಶನ ಯೋಗವಿದೆ. ಭೂಮಿ, ಮನೆ ಖರೀದಿ ಯೋಗವಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನಡೆಸಲು ಸಿದ್ಧತೆ ನಡೆಸಲಿದ್ದೀರಿ. ನಿಮ್ಮ ಪ್ರಾಮಾಣಿಕತೆಗೆ ತಕ್ಕ ಬೆಲೆ ಸಿಗುವುದು.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮನೆಯ ಆವರಣದಲ್ಲಿ ಶಮಿ ವೃಕ್ಷವಿದ್ದರೆ ಈ ಎಲ್ಲಾ ಫಲ ನಿಮ್ಮದಾಗಲಿದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments