Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 20 ಜೂನ್ 2020 (07:20 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮಾನ ಹಾನಿಯಾಗುವಂತಹ ಪ್ರಸಂಗಗಳು ಎದುರಾದೀತು. ತಾಳ್ಮೆ, ಸಂಯಮದಿಂದ ನಡೆದುಕೊಳ್ಳಿ. ಆರ್ಥಿಕವಾಗಿ ಕಷ್ಟನಷ್ಟಗಳಿಗೆ ಇಂದೇ ಸಿದ್ಧರಾಗಿ. ಕೆಳ ಹಂತದ ನೌಕರರಿಗೆ ಬಡ್ತಿ ಯೋಗವಿದೆ. ಆಪ್ತರಿಂದ ದೂರವಾದ ನೋವು ಕಾಡಲಿದೆ. ಚಿಂತೆ ಮಾಡಬೇಡಿ.

ವೃಷಭ: ಷೇರು ಬಂಡವಾಳ ಹೂಡಿಕೆ ಮಾಡಿದವರಿಗೆ ಲಾಭ ಸಿಗುವ ಸಾಧ್ಯತೆಯಿದೆ. ನಾನಾ ಮೂಲಗಳಿಂದ ಆದಾಯ ಹರಿದುಬರುವುದರಿಂದ ಹಣಕಾಸಿಗೆ ತೊಂದರೆಯಿರದು. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಿ. ದುಡುಕಿನ ವರ್ತನೆ ಬೇಡ.

ಮಿಥುನ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಅವಿವಾಹಿತ ಪುರುಷರಿಗೆ ಯೋಗ್ಯ ಕನ್ಯಾಮಣಿಗಳು ಸಿಗಲಿದ್ದಾರೆ. ವೃತ್ತಿರಂಗದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಕರ್ಕಟಕ: ಕೋರ್ಟು ಕಚೇರಿ ವ್ಯವಹಾರಗಳಿಗೆ ಅಲೆದಾಡಬೇಕಾದೀತಾದರೂ ಅಂತಿಮವಾಗಿ ಜಯ ನಿಮ್ಮದಾಗಲಿದೆ. ಹಿರಿಯರ ಮಾತಿಗೆ ಮನ್ನಣೆ ನೀಡಿ. ಲೆಕ್ಕಪತ್ರಗಳ ಬಗ್ಗೆ ಸರಿಯಾದ ನಿಗಾ ವಹಿಸಿ. ಆದಾಯ ವೃದ್ಧಿಗೆ ನಾನಾ ಮಾರ್ಗ ಯೋಚಿಸಲಿದ್ದೀರಿ.

ಸಿಂಹ: ಎಂದೋ ಕೂಡಿಟ್ಟ ಹಣ ಇಂದು ಸದ್ವಿನಿಯೋಗವಾಗಲಿದೆ. ಮಕ್ಕಳ ಭವಿಷ್ಯಕ್ಕೆ ತಕ್ಕ  ಯೋಜನೆ ರೂಪಿಸಲಿದ್ದೀರಿ. ಹೊಸ ವಾಹನ ಖರೀದಿ ಮಾಡುವ ಯೋಗವಿದೆ. ಆದರೆ ಅನಗತ್ಯ ವಿವಾದಗಳಲ್ಲಿ ಮೂಗು ತೂರಿಸಲು ಹೋಗಬೇಡಿ. ತಾಳ್ಮೆಯಿರಲಿ.

ಕನ್ಯಾ: ಇನ್ನೊಬ್ಬರಿಗೆ ಸಹಾಯ ಮಾಡಲು ಹೋಗಿ ಕೈ ಸುಟ್ಟುಕೊಳ್ಳುವ ಪ್ರಸಂಗಗಳು ಎದುರಾದೀತು. ಹಣಕಾಸಿನ ವಿಚಾರವಾಗಿ ಎಚ್ಚರಿಕೆ ಹೆಜ್ಜೆಯಿಡಬೇಕು. ಸಾಲ ಪಾವತಿ ಚಿಂತೆಯಾಗಬಹುದು. ಸಂಗಾತಿಯಿಂದ ಸಹಕಾರ ಸಿಗಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ತುಲಾ: ಆಕಸ್ಮಿಕವಾಗಿ ಖರ್ಚು ವೆಚ್ಚಗಳು ಎದುರಾಗಲಿದ್ದು, ಚಿಂತೆಗೆ ಕಾರಣವಾಗಬಹುದು. ಅನ್ಯರ ಸಹಾಯ ಪಡೆಯುವಾಗ ಎಚ್ಚರಿಕೆಯಿರಲಿ. ಹಿರಿಯರಿಗೆ ನಿಮ್ಮ ಅಗತ್ಯ ಕಂಡುಬರಲಿದೆ. ಪ್ರೀತಿ ಪಾತ್ರರಿಗಾಗಿ ಸಮಯ ಮೀಸಲಿಡಿ. ದಾಯಾದಿ ಕಲಹಗಳು ಅಂತ್ಯವಾಗಲಿದೆ.

ವೃಶ್ಚಿಕ: ಕುಟುಂಬ ಸದಸ್ಯರ ಕಷ್ಟಗಳಿಗೆ ಹೆಗಲುಕೊಡಲಿದ್ದೀರಿ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಾಗದು. ಆದರೆ ಖರ್ಚು ವೆಚ್ಚಗಳಿಗೆ ಕಡಿವಾಣವಿರಲಿ. ಹಳೆಯ ಮಿತ್ರನ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಧನು: ಸಾಂಸಾರಿಕವಾಗಿ ಸಂಗಾತಿಯ ಸಹಕಾರದಿಂದ ಎಂತಹದ್ದೇ ಕಷ್ಟವಾದರೂ ಎದುರಿಸುವ ಧೈರ್ಯ ಮಾಡುವಿರಿ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಅವಿವಾಹಿತರಿಗೆ ಶೀಘ‍್ರ ಕಂಕಣ ಬಲ ಕೂಡಿಬರಲಿದೆ.

ಮಕರ: ಆಗಾಗ ಖರ್ಚು ವೆಚ್ಚಗಳಿದ್ದರೂ ಅಂದುಕೊಂಡ ಕೆಲಸಗಳು ನೆರವೇರಿದ ನೆಮ್ಮದಿ ಸಿಗಲಿದೆ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಮಕ್ಕಳ ವಿಚಾರದಲ್ಲಿ ಸಂತಸದ ವಾರ್ತೆ ಕೇಳಿಬರಲಿದೆ. ಅಧಿಕ ಓಡಾಟದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ.

ಕುಂಭ: ನೆರೆಹೊರೆಯವರೊಂದಿಗೆ ಕ್ಷುಲ್ಲುಕ ಕಾರಣಕ್ಕೆ ಮನಸ್ತಾಪ ಮಾಡಿಕೊಳ್ಳಲಿದ್ದೀರಿ. ಮಾತು, ವರ್ತನೆ ಮೇಲೆ ನಿಗಾ ವಹಿಸಿ. ನ್ಯಾಯಾಲಯದ ಕಲಾಪಗಳು ಸುಗಮವಾಗಿ ನೆರವೇರಲಿದೆ. ಬಂಧು ಮಿತ್ರರ ಮಾತುಗಳಿಗೆ ಬೆಲೆ ಕೊಡಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಗೃಹ ಬಳಕೆಯ ವಸ್ತುಗಳ ಖರೀದಿಗಾಗಿ ಹೆಚ್ಚಿನ ಧನ ವ್ಯಯ ಮಾಡಲಿದ್ದೀರಿ. ವ್ಯಾಪಾರ, ವ್ಯವಹಾರಗಳಲ್ಲಿ ಲಾಭವಿಲ್ಲದಿದ್ದರೂ ನಷ್ಟವಾಗದು. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆ ವಹಿಸುವುದು ಸೂಕ್ತ. ಅಪರಿಚಿತರಿಂದಲೂ ಸಹಾಯ ಸಿಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಿಮ್ಮ ಕೆಲಸದಲ್ಲಿ ಗೆಲುವು ಸಿಗಲು ಈ ಒಂದು ವಸ್ತುವನ್ನು ಸದಾಕಾಲ ಜೊತೆಯಲ್ಲಿ ಇಟ್ಟುಕೊಳ್ಳಿ