Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 21 ಜೂನ್ 2020 (08:39 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವ್ಯಾಪಾರ ವ್ಯವಹಾರದಲ್ಲಿ ಲಾಭವಿಲ್ಲದಿದ್ದರೂ ನಷ್ಟವಾಗದು. ಕೆಳ ಹಂತದ ನೌಕರರಿಗೆ ಉದ್ಯೋಗ ಉಳಿಸಿಕೊಳ್ಳುವ ಚಿಂತೆ ಎದುರಾಗಲಿದೆ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ತೊಂದರೆಗಳನ್ನು ಎದುರಿಸಬೇಕಾದೀತು. ಮಿತ್ರರ ಸಹಕಾರ ಸಿಗಲಿದೆ.

ವೃಷಭ: ಆರ್ಥಿಕವಾಗಿ ಅನಿರೀಕ್ಷಿತವಾಗಿ ಎದುರಾಗುವ ಖರ್ಚು ವೆಚ್ಚಗಳು ತಲೆಬಿಸಿಗೆ ಕಾರಣವಾಗಲಿದೆ. ಕೃಷಿ ಕಾರ್ಯಗಳಿಂದ ಉತ್ತಮ ಆದಾಯ ನಿರೀಕ್ಷಿಸಬಹುದು. ವಿದ್ಯಾರ್ಥಿಗಳು ಶ್ರಮವಹಿಸಿ ಅಭ್ಯಸಿಸಿದರೆ ಮಾತ್ರ ಉತ್ತಮ ಫಲ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಒಳಿತಾಗುವುದು. ಕೋರ್ಟು ಕಚೇರಿ ವ್ಯವಹಾರಗಳಿಗೆ ಲೆಕ್ಕಪತ್ರಗಳ ಸಿದ್ಧತೆ ಮಾಡಲಿದ್ದೀರಿ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಕರ್ಕಟಕ: ದೂರ ಪ್ರಯಾಣವನ್ನು ಅನಿವಾರ್ಯವಾಗಿ ಮುಂದೂಡಬೇಕಾಗುತ್ತದೆ. ಕರ್ತವ್ಯಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಿ. ಹಿರಿಯರ ದೇಹಾರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕಾಗುತ್ತದೆ. ಶುಭ ಮಂಗಲ ಕಾರ್ಯದಲ್ಲಿ ಭಾಗಿಯಾಗಲಿದ್ದೀರಿ.

ಸಿಂಹ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಕೆಟ್ಟ ಜನರ ಸಹವಾಸ ಮುಂದೆ ತೊಂದರೆ ತಂದೊಡ್ಡಲಿದೆ. ಷೇರು ಬಂಡವಾಳ ಹೂಡಿಕೆಯಲ್ಲಿ ಲಾಭ ಕಂಡುಬರಲಿದೆ. ಅವಿವಾಹಿತರಿಗೆ ವಿವಾಹ ಮಾತುಕತೆಗಳಲ್ಲಿ ಮುನ್ನಡೆ ಕಂಡುಬರಲಿದೆ.  

ಕನ್ಯಾ: ಭೂಮಿ, ವಾಹನ ಖರೀದಿಗೆ ಇದು ಸಕಾಲವಾಗಿರಲಿದೆ. ಆದರೆ ಹೊಸದಾಗಿ ಯಾರಿಗೂ ಸಾಲ ಕೊಡಲು ಹೋಗಬೇಡಿ. ಮಹಿಳೆಯರಿಂದ ಸಹಾಯ ಸಿಗಲಿದೆ. ಸಂಗಾತಿಗೆ ಉಡುಗೊರೆ ಕೊಡಲಿದ್ದೀರಿ. ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯವಿದೆ.

ತುಲಾ: ಕೌಟುಂಬಿಕ ಜೀವನದಲ್ಲಿ ನೆಮ್ಮದಿ ಸಿಗಲಿದೆ. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು. ಆದರೆ ನಾಲಿಗೆ ಚಪಲದಿಂದ ದೇಹಾರೋಗ್ಯ ಕೆಡಿಸಿಕೊಳ್ಳಬೇಡಿ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ.

ವೃಶ್ಚಿಕ: ಪ್ರಯತ್ನಬಲವಿಲ್ಲದೇ ಯಾವ ಕೆಲಸವೂ ನಡೆಯದು. ಮಾನಸಿಕವಾಗಿ ಋಣಾತ್ಮಕ ಚಿಂತೆಗಳನ್ನು ಬದಿಗೊತ್ತಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಿ. ವಿದ್ಯಾರ್ಥಿಗಳಿಗೆ ಹೊಸ ವಿಚಾರಗಳನ್ನು ಕಲಿಯುವ ಅವಕಾಶ ಸಿಗಲಿದೆ. ವ್ಯಾಪಾರಿಗಳು ಪ್ರಗತಿ ಕಾಣಲಿದ್ದಾರೆ.

ಧನು: ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಹಣಕಾಸಿನ ಬಗ್ಗೆ ಎಚ್ಚರಿಕೆಯಿಂದಿರಿ. ನಿಮ್ಮ ಮುಗ್ಧತೆಯನ್ನು ಸ್ವಲಾಭಕ್ಕೆ ಬಳಸಿಕೊಳ್ಳುವ ಜನರಿರುತ್ತಾರೆ. ಅಧಿಕ ಒಡಾಟದಿಂದ ದೇಹಾಯಾಸವಾದೀತು. ಗೃಹ ಬಳಕೆ ವಸ್ತುಗಳ ಖರೀದಿ ಮಾಡಲಿದ್ದೀರಿ.

ಮಕರ: ಸಂಗಾತಿಯ ಸಲಹೆಗಳಿಗೆ ಕಿವಿಗೊಡದೇ ಮನಸ್ತಾಪವಾಗುವ ಸಾಧ‍್ಯತೆಯಿದೆ. ತಾಳ್ಮೆಯಿಂದ ವರ್ತಿಸಿ. ನೀವು ನಂಬಿಕೊಂಡಿದ್ದವರಿಂದಲೇ ವಂಚನೆಗೊಳಗಾಗುವ ಭೀತಿಯಿದೆ. ವ್ಯಾಪಾರ, ವ್ಯವಹಾರಗಳಲ್ಲಿ ಹೂಡಿಕೆ ಮಾಡಲು ಕೆಲವು ದಿನ ಕಾಯುವುದು ಒಳಿತು.

ಕುಂಭ: ಮೇಲಧಿಕಾರಿಗಳ ಕಿರಿ ಕಿರಿ ಅಸಹನೀಯವಾಗಲಿದೆ. ಸಾಂಸಾರಿಕವಾಗಿ ಬಂಧು ಜನರ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಮೂಡಲಿದೆ. ಹಳೆಯ ಯೋಜನೆಗಳಿಗೆ ಮರು ಚಾಲನೆ ನೀಡಲಿದ್ದೀರಿ. ಮಕ್ಕಳ ಬಗ್ಗೆ ಎಚ್ಚರಿಕೆಯಿರಲಿ.

ಮೀನ: ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗಲಿದ್ದಾರೆ. ವೃತ್ತಿರಂಗದಲ್ಲಿ ಪ್ರತಿಸ್ಪರ್ಧಿಗಳು ಹುಟ್ಟಿಕೊಳ್ಳಲಿದ್ದಾರೆ. ಅನಿರೀಕ್ಷಿತವಾಗಿ ಮುಂಬಡ್ತಿಯ ಯೋಗವಿದೆ. ಕೃಷಿಕರು ಉತ್ತಮ ಫಲ ಪಡೆಯಲಿದ್ದಾರೆ. ಆರೋಗ್ಯದ ಬಗ್ಗೆ ಕಾಳಜಿವಹಿಸಿ.

Share this Story:

Follow Webdunia kannada

ಮುಂದಿನ ಸುದ್ದಿ

ಗ್ರಹಣ ದೋಷ ನಿವಾರಣೆಯಾಗಲು ಗ್ರಹಣ ಮುಗಿದ ಬಳಿಕ ಸ್ನಾನ ಮಾಡುವಾಗ ಹೀಗೆ ಹೇಳಿ