Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 23 ಜೂನ್ 2020 (09:12 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಇಷ್ಟು ದಿನ ಮಾಡಿದ್ದ ಪ್ರಾಮಾಣಿಕ ಕೆಲಸಗಳಿಗೆ ಬೆಲೆ ಸಿಗದೇ ಮನಸ್ಸಿಗೆ ಹತಾಶೆಯಾಗಬಹುದು. ಮೇಲಧಿಕಾರಿಗಳ ಕಿರಿ ಕಿರಿ ಮನಸ್ಸಿಗೆ ಹಿಂಸೆ ನೀಡಬಹುದು. ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಕಾರ್ಯರಂಗದಲ್ಲಿ ಶತ್ರುಗಳ ಉಪಟಳ ಅಧಿಕವಾಗಲಿದೆ. ನಿಮ್ಮ ಆತ್ಮಸ್ಥೈರ್ಯವೇ ನಿಮಗೆ ಶ್ರೀರಕ್ಷೆಯಾಗಲಿದೆ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ಸಂಗಾತಿಯ ಸಹಕಾರ ಸಿಗುವುದು.

ಮಿಥುನ: ನಿರೀಕ್ಷಿತ ರೀತಿಯಲ್ಲಿ ಕೆಲಸಗಳು ಸಾಗುವುದರಿಂದ ಮನಸ್ಸಿಗೆ ನೆಮ್ಮದಿಯಾಗುವುದು. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗುವುದು. ಅವಿವಾಹಿತರ ವಿವಾಹ ಮಾತುಕತೆಗಳು ಮುಂದೂಡಿಕೆಯಾಗಲಿವೆ. ಪ್ರೇಮಿಗಳಿಗೆ ಶುಭ ದಿನವಾಗಲಿದೆ.

ಕರ್ಕಟಕ: ಇಷ್ಟ ಮಿತ್ರರೊಂದಿಗೆ ಭೋಜನ, ಯಾತ್ರೆ ಮಾಡುವ ಯೋಗವಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಸಾಮಾಜಿಕವಾಗಿ ನಿಮ್ಮ ಕೆಲಸಗಳಿಗೆ ಜನಮನ್ನಣೆ ಸಿಗುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ಸಿಂಹ: ವಿದ್ಯಾರ್ಥಿಗಳಿಗೆ ತಮ್ಮ ಕ್ರಿಯಾಶೀಲತೆ ಪ್ರಕಟಿಸಲು ಉತ್ತಮ ವೇದಿಕೆ ಸಿಗಲಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಅನುಕೂಲವಾಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ವ್ಯಾಪಾರ, ವ್ಯವಹಾರಗಳಲ್ಲಿ ಮುನ್ನಡೆ ಸಾಧಿಸಲಿದ್ದೀರಿ.

ಕನ್ಯಾ: ಧನಾದಾಯವು ಉತ್ತಮವಾಗಿರಲಿದ್ದು, ಅಂದುಕೊಂಡ ಕೆಲಸ ಮಾಡಿ ಮುಗಿಸಲಿದ್ದೀರಿ. ಮಹಿಳೆಯರಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗಲಿದೆ. ನಿರುದ್ಯೋಗಿಗಳಿಗೆ ಕೊಂಚ ನಿರಾಸೆಯಾದರೂ ಸ್ವ ವೃತ್ತಿಯಿಂದ ಲಾಭ ಗಳಿಸಬಹುದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ತುಲಾ: ವೃತ್ತಿರಂಗದಲ್ಲಿ ನಿಮ್ಮ ಕೆಲಸಗಳಿಗೆ ಅಡ್ಡಿ ಮಾಡುವವರಿಂದ ನೆಮ್ಮದಿ ಹಾಳಾಗುವುದು. ಪರಿಶ್ರಮಕ್ಕೆ ತಕ್ಕ ಫಲ ಸಿಗದೇ ನಿರಾಸೆಯಾದೀತು. ಮಹಿಳೆಯರಿಗೆ ಚಿನ್ನಾಭರಣಗಳನ್ನು ರಕ್ಷಿಸುವ ಹೊಣೆಗಾರಿಕೆಯಿರಲಿದೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮಪಡಬೇಕು.

ವೃಶ್ಚಿಕ: ನಿರುದ್ಯೋಗಿಗಳಿಗೆ ಅಚ್ಚರಿಯ ಫಲಿತಾಂಶ ಸಿಗುವುದು. ವ್ಯಾಪಾರಿ ವರ್ಗದವರಿಗೆ ಹಿಂದೆ ಮಾಡಿದ್ದ ಹೂಡಿಕೆಯ ಲಾಭ ಇಂದು ಕಂಡುಬರಲಿದೆ. ಕೌಟುಂಬಿಕವಾಗಿ ಬಂಧು ಮಿತ್ರರ ಆಗಮನದಿಂದ ಸಂತಸವಾಗಲಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಎಚ್ಚರಿಕೆಯಿರಲಿ.

ಧನು: ಸಾಂಸಾರಿಕ ಸಮಸ್ಯೆಗಳೇನೇ ಇದ್ದರೂ ಮರೆತು ಮುನ್ನಡೆಯಬೇಕು. ಉದ್ಯೋಗ ರಂಗದಲ್ಲಿ ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಅವಕಾಶ ಸಿಗಲಿದೆ. ನೆರೆಹೊರೆಯವರ ಮಾತಿನಿಂದ ಪ್ರಲೋಭನೆಗೊಳಗಾಗಬೇಡಿ. ಸಂಗಾತಿಯ ಮಾತಿಗೆ ಕಿವಿಗೊಡಿ.

ಮಕರ: ನಯವಾದ ಮಾತಿನಿಂದ ಮರುಳು ಮಾಡುವವರ ಬಗ್ಗೆ ಎಚ್ಚರಿಕೆಯಿರಲಿ. ಹಣಕಾಸಿನ ವಿಚಾರದಲ್ಲಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಮನೋಕಾಮನೆಗಳನ್ನು ಈಡೇರಿಸಲು ಹೆಚ್ಚಿನ ಪರಿಶ್ರಮ ಪಡಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ವಾಹನ, ಯಂತ್ರಾದಿಗಳ ಕೆಲಸ ಮಾಡುವವರಿಗೆ ಇಂದು ಮಹತ್ವದ ದಿನ. ಹೊಸ ನಿರ್ಧಾರ ಕೈಗೊಳ್ಳುವ ಮುನ್ನ ಸಂಗಾತಿಯೊಡನೆ ಚರ್ಚಿಸುವುದು ಒಳಿತು. ಅನಿರೀಕ್ಷಿತ ಖರ್ಚುಗಳು ಎದುರಾದೀತು. ನಿರುದ್ಯೋಗಿಗಳಿಗೆ ಇನ್ನಷ್ಟು ಪ್ರಯತ್ನ ಪಡಲೇಬೇಕಾಗುತ್ತದೆ.

ಮೀನ: ಸ್ವ ವೃತ್ತಿಯವರಿಗೆ ಲಾಭ ಕೈಗೆ ಬರಲಿದೆ. ಆದಾಯಕ್ಕೆ ಕೊರತೆಯಿರದು, ಆದರೆ ಅನಿರೀಕ್ಷಿತ ಖರ್ಚುಗಳೂ ಕಂಡುಬಂದೀತು. ವಾಸಸ್ಥಳ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ಹಿರಿಯರಿಗೆ ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು. ಎಚ್ಚರಿಕೆ.

Share this Story:

Follow Webdunia kannada

ಮುಂದಿನ ಸುದ್ದಿ

ಮನೆಗೆ ಜರಿ ಬಂದಾಗ ಹೀಗೆ ಮಾಡಿ