Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 23 ಜೂನ್ 2020 (09:12 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಇಷ್ಟು ದಿನ ಮಾಡಿದ್ದ ಪ್ರಾಮಾಣಿಕ ಕೆಲಸಗಳಿಗೆ ಬೆಲೆ ಸಿಗದೇ ಮನಸ್ಸಿಗೆ ಹತಾಶೆಯಾಗಬಹುದು. ಮೇಲಧಿಕಾರಿಗಳ ಕಿರಿ ಕಿರಿ ಮನಸ್ಸಿಗೆ ಹಿಂಸೆ ನೀಡಬಹುದು. ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಕಾರ್ಯರಂಗದಲ್ಲಿ ಶತ್ರುಗಳ ಉಪಟಳ ಅಧಿಕವಾಗಲಿದೆ. ನಿಮ್ಮ ಆತ್ಮಸ್ಥೈರ್ಯವೇ ನಿಮಗೆ ಶ್ರೀರಕ್ಷೆಯಾಗಲಿದೆ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ಸಂಗಾತಿಯ ಸಹಕಾರ ಸಿಗುವುದು.

ಮಿಥುನ: ನಿರೀಕ್ಷಿತ ರೀತಿಯಲ್ಲಿ ಕೆಲಸಗಳು ಸಾಗುವುದರಿಂದ ಮನಸ್ಸಿಗೆ ನೆಮ್ಮದಿಯಾಗುವುದು. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗುವುದು. ಅವಿವಾಹಿತರ ವಿವಾಹ ಮಾತುಕತೆಗಳು ಮುಂದೂಡಿಕೆಯಾಗಲಿವೆ. ಪ್ರೇಮಿಗಳಿಗೆ ಶುಭ ದಿನವಾಗಲಿದೆ.

ಕರ್ಕಟಕ: ಇಷ್ಟ ಮಿತ್ರರೊಂದಿಗೆ ಭೋಜನ, ಯಾತ್ರೆ ಮಾಡುವ ಯೋಗವಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಸಾಮಾಜಿಕವಾಗಿ ನಿಮ್ಮ ಕೆಲಸಗಳಿಗೆ ಜನಮನ್ನಣೆ ಸಿಗುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ಸಿಂಹ: ವಿದ್ಯಾರ್ಥಿಗಳಿಗೆ ತಮ್ಮ ಕ್ರಿಯಾಶೀಲತೆ ಪ್ರಕಟಿಸಲು ಉತ್ತಮ ವೇದಿಕೆ ಸಿಗಲಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಅನುಕೂಲವಾಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ವ್ಯಾಪಾರ, ವ್ಯವಹಾರಗಳಲ್ಲಿ ಮುನ್ನಡೆ ಸಾಧಿಸಲಿದ್ದೀರಿ.

ಕನ್ಯಾ: ಧನಾದಾಯವು ಉತ್ತಮವಾಗಿರಲಿದ್ದು, ಅಂದುಕೊಂಡ ಕೆಲಸ ಮಾಡಿ ಮುಗಿಸಲಿದ್ದೀರಿ. ಮಹಿಳೆಯರಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗಲಿದೆ. ನಿರುದ್ಯೋಗಿಗಳಿಗೆ ಕೊಂಚ ನಿರಾಸೆಯಾದರೂ ಸ್ವ ವೃತ್ತಿಯಿಂದ ಲಾಭ ಗಳಿಸಬಹುದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ತುಲಾ: ವೃತ್ತಿರಂಗದಲ್ಲಿ ನಿಮ್ಮ ಕೆಲಸಗಳಿಗೆ ಅಡ್ಡಿ ಮಾಡುವವರಿಂದ ನೆಮ್ಮದಿ ಹಾಳಾಗುವುದು. ಪರಿಶ್ರಮಕ್ಕೆ ತಕ್ಕ ಫಲ ಸಿಗದೇ ನಿರಾಸೆಯಾದೀತು. ಮಹಿಳೆಯರಿಗೆ ಚಿನ್ನಾಭರಣಗಳನ್ನು ರಕ್ಷಿಸುವ ಹೊಣೆಗಾರಿಕೆಯಿರಲಿದೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮಪಡಬೇಕು.

ವೃಶ್ಚಿಕ: ನಿರುದ್ಯೋಗಿಗಳಿಗೆ ಅಚ್ಚರಿಯ ಫಲಿತಾಂಶ ಸಿಗುವುದು. ವ್ಯಾಪಾರಿ ವರ್ಗದವರಿಗೆ ಹಿಂದೆ ಮಾಡಿದ್ದ ಹೂಡಿಕೆಯ ಲಾಭ ಇಂದು ಕಂಡುಬರಲಿದೆ. ಕೌಟುಂಬಿಕವಾಗಿ ಬಂಧು ಮಿತ್ರರ ಆಗಮನದಿಂದ ಸಂತಸವಾಗಲಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಎಚ್ಚರಿಕೆಯಿರಲಿ.

ಧನು: ಸಾಂಸಾರಿಕ ಸಮಸ್ಯೆಗಳೇನೇ ಇದ್ದರೂ ಮರೆತು ಮುನ್ನಡೆಯಬೇಕು. ಉದ್ಯೋಗ ರಂಗದಲ್ಲಿ ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಅವಕಾಶ ಸಿಗಲಿದೆ. ನೆರೆಹೊರೆಯವರ ಮಾತಿನಿಂದ ಪ್ರಲೋಭನೆಗೊಳಗಾಗಬೇಡಿ. ಸಂಗಾತಿಯ ಮಾತಿಗೆ ಕಿವಿಗೊಡಿ.

ಮಕರ: ನಯವಾದ ಮಾತಿನಿಂದ ಮರುಳು ಮಾಡುವವರ ಬಗ್ಗೆ ಎಚ್ಚರಿಕೆಯಿರಲಿ. ಹಣಕಾಸಿನ ವಿಚಾರದಲ್ಲಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಮನೋಕಾಮನೆಗಳನ್ನು ಈಡೇರಿಸಲು ಹೆಚ್ಚಿನ ಪರಿಶ್ರಮ ಪಡಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ವಾಹನ, ಯಂತ್ರಾದಿಗಳ ಕೆಲಸ ಮಾಡುವವರಿಗೆ ಇಂದು ಮಹತ್ವದ ದಿನ. ಹೊಸ ನಿರ್ಧಾರ ಕೈಗೊಳ್ಳುವ ಮುನ್ನ ಸಂಗಾತಿಯೊಡನೆ ಚರ್ಚಿಸುವುದು ಒಳಿತು. ಅನಿರೀಕ್ಷಿತ ಖರ್ಚುಗಳು ಎದುರಾದೀತು. ನಿರುದ್ಯೋಗಿಗಳಿಗೆ ಇನ್ನಷ್ಟು ಪ್ರಯತ್ನ ಪಡಲೇಬೇಕಾಗುತ್ತದೆ.

ಮೀನ: ಸ್ವ ವೃತ್ತಿಯವರಿಗೆ ಲಾಭ ಕೈಗೆ ಬರಲಿದೆ. ಆದಾಯಕ್ಕೆ ಕೊರತೆಯಿರದು, ಆದರೆ ಅನಿರೀಕ್ಷಿತ ಖರ್ಚುಗಳೂ ಕಂಡುಬಂದೀತು. ವಾಸಸ್ಥಳ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ಹಿರಿಯರಿಗೆ ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು. ಎಚ್ಚರಿಕೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments