Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 24 ಜೂನ್ 2020 (09:01 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮನಸ್ಸಿಗೆ ಆದ ಗಾಯ ಮರೆಯಲು ಕಷ್ಟವಾಗಬಹುದು. ಆದರೆ ಅನಿವಾರ್ಯವಾಗಿ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಮೇಲಧಿಕಾರಿಗಳ ಕಿರಿ ಕಿರಿಗೆ ತಕ್ಕ ಉತ್ತರ ಕೊಡಲಿದ್ದೀರಿ. ಹಣಕಾಸಿನ ಖರ್ಚು ವೆಚ್ಚದ ಬಗ್ಗೆ ಜಾಗ್ರತೆಯಿರಲಿ.

ವೃಷಭ: ಅವಿವಾಹಿತರಿಗೆ ಶೀಘ‍್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ನಿರುದ್ಯೋಗಿಗಳಿಗೆ ಸಾಕಷ್ಟು ಅವಕಾಶಗಳು ಎದುರಾಗಲಿವೆ. ಜಾಣ್ಮೆಯಿಂದ ಬಳಸಿಕೊಳ್ಳಬೇಕು. ಹಳೇ ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.

ಮಿಥುನ: ವೃತ್ತಿರಂಗದಲ್ಲಿ ಶತ್ರುಕಾಟ ತಪ್ಪಲಿದೆ. ನಿಮ್ಮ ಕೆಲಸಗಳನ್ನು ನಿರೀಕ್ಷಿತ ರೀತಿಯಲ್ಲಿ ಮಾಡಿ ಮುಗಿಸಲಿದ್ದೀರಿ. ಹಿರಿಯ ಅಧಿಕಾರಿಗಳೊಂದಿಗೆ ಭಿನ್ನಾಭಿಪ್ರಾಯವಾಗಬಹುದು. ತಾಳ್ಮೆಯಿಂದ ನಿಭಾಯಿಸಿ. ಸಂಗಾತಿಯ ಪ್ರೀತಿಗೆ ಭಾಜನರಾಗಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ವಿದ್ಯಾರ್ಥಿಗಳಿಗೆ ಪ್ರಯತ್ನಬಲವಿದ್ದರೆ ಮಾತ್ರ ಯಶಸ್ಸು ಸಾಧ‍್ಯ. ಶಿಕ್ಷಕ ವೃಂದದವರಿಗೆ ಉದ್ಯೋಗದಲ್ಲಿ ಅಡೆತಡೆಗಳು ಸಾಮಾನ್ಯ. ನಿಮ್ಮ ಮಾತೇ ನಡೆಯಬೇಕೆಂಬ ಹಠ ಬಿಟ್ಟರೆ ಉತ್ತಮ. ಕಾರ್ಮಿಕರ ಪರಿಸ್ಥಿತಿ ಸುಧಾರಣೆಯಾಗಲಿದೆ.

ಸಿಂಹ: ಸಾಂಸಾರಿಕವಾಗಿ ನಿಮ್ಮ ಕೆಲವೊಂದು ನಿರ್ಧಾರಗಳು ಕುಟುಂಬ ಸದಸ್ಯರೊಡನೆ ಭಿನ್ನಾಭಿಪ್ರಾಯಕ್ಕೆ ಕಾರಣವಾದೀತು. ಅನವಶ್ಯಕ ಕೋಪ ತಾಪಕ್ಕೆ ಬುದ್ಧಿ ಕೊಟ್ಟು ಆತುರದ ನಿರ್ಧಾರ ಕೈಗೊಳ್ಳಬೇಡಿ. ಕುಲದೇವರ ಪ್ರಾರ್ಥನೆ ಮಾಡಿ ಮುನ್ನಡೆಯಿರಿ.

ಕನ್ಯಾ: ಅಧಿಕ ಧನಾರ್ಜನೆಯ ದುರಾಸೆಯಿಂದ ಅಡ್ಡ ದಾರಿ ಹಿಡಿಯಬೇಡಿ. ಕೆಟ್ಟ ಸ್ನೇಹ ಸಂಗದಿಂದ ದೂರವಿರುವುದೇ ಉತ್ತಮ. ವ್ಯಾಪಾರ, ವ್ಯವಹಾರದಲ್ಲಿ ತಕ್ಕ ಮಟ್ಟಿಗಿನ ಲಾಭ ಕಂಡುಬರಲಿದೆ. ಅವಿವಾಹಿತರಿಗೆ ಯೋಗ್ಯ ಸಂಬಂಧ ಕೂಡಿಬರಲಿದೆ.

ತುಲಾ: ಅಧಿಕಾರಿ ವರ್ಗದವರಿಗೆ ಜವಾಬ್ಧಾರಿಗಳು ಹೆಚ್ಚಲಿವೆ. ಶೈಕ್ಷಣಿಕ ರಂಗದಲ್ಲಿ ಕೆಲಸ ಮಾಡುವವರಿಗೆ ಉನ್ನತ ಸ್ಥಾನ ಮಾನದ ಯೋಗವಿದೆ. ಸಂಗಾತಿಯೊಂದಿಗೆ ಅನವಶ್ಯಕ ಮನಸ್ತಾಪ ಮಾಡಿಕೊಳ್ಳಬೇಡಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ವೃಶ್ಚಿಕ: ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಎಚ್ಚರಿಕೆ ಅಗತ್ಯ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಖರ್ಚು ವೆಚ್ಚವಾದೀತು. ಕೌಟುಂಬಿಕವಾಗಿ ಅನಿರೀಕ್ಷಿತ ಅತಿಥಿಗಳ ಆಗಮನದಿಂದ ಸಂತಸವಾಗಲಿದೆ. ವಾಹನ ಸಂಚಾರದಲ್ಲಿ ಜಾಗ್ರತೆ.

ಧನು: ವೃತ್ತಿರಂಗದಲ್ಲಿ ಗಮನಾರ್ಹ ಬದಲಾವಣೆಗಳಾಗಲಿವೆ. ನಿಮ್ಮ ಸ್ಥಾನಕ್ಕೆ ಮತ್ತೊಬ್ಬರ ಆಗಮನವಾಗಬಹುದು ಅಥವಾ ನಿಮ್ಮ ಕ್ರಿಯಾಶೀಲತೆಗೆ ಪ್ರಶಂಸೆ ವ್ಯಕ್ತವಾಗಬಹುದು. ಅತಿಯಾದ ಚಿಂತೆ ಮಾಡಬೇಡಿ. ಅಧಿಕ ಖರ್ಚು ವೆಚ್ಚಗಳಾಗದಂತೆ ಎಚ್ಚರಿಕೆ ವಹಿಸಿ.

ಮಕರ: ನಿಮ್ಮ ಕಾರ್ಯಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆಗಳಾಗಲಿವೆ. ಆರ್ಥಿಕವಾಗಿ ಬಾಕಿ ಹಣ ಸಂದಾಯವಾಗಲಿದ್ದು, ಹಣಕಾಸಿನ ಪರಿಸ್ಥಿತಿ ಸುಧಾರಣೆಯಾಗಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ಕುಂಭ: ವೃತ್ತಿರಂಗದಲ್ಲಿ ಅನವಶ್ಯಕ ಮನಸ್ತಾಪಗಳಾಗದಂತೆ ಎಚ್ಚರಿಕೆ ವಹಿಸಿ. ಆರ್ಥಿಕವಾಗಿ ಸರಿಯಾದ ಲೆಕ್ಕಾಚಾರವಿಲ್ಲದೇ ಹೆಜ್ಜೆಯಿಟ್ಟರೆ ಮುಂದೆ ತೊಂದರೆಯಾಗಬಹುದು. ಕುಟುಂಬ ಸದಸ್ಯರ ಆರೋಗ್ಯದಲ್ಲಿ ಏರುಪೇರಾಗಬಹುದು. ಎಚ್ಚರಿಕೆ ಅಗತ್ಯ.

ಮೀನ: ದೈವಾನುಗ್ರಹದಿಂದ ನೀವು ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರಲಿದೆ. ಆರ್ಥಿಕ ಅಡಚಣೆಗಳು ಎದುರಾದರೂ ಹೆಚ್ಚಿನ ತೊಂದರೆಯಾಗದು. ಆದರೆ ಯಾವುದರ ಬಗ್ಗೆಯೂ ಉದಾಸೀನತೆ ಬೇಡ. ಬಂಧು ಮಿತ್ರರ ಆಗಮನವಾಗಲಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments