Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 28 ಜೂನ್ 2020 (09:09 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ರಂಗದಲ್ಲಿ ಕೊಂಚ ಸಮಾಧಾನಕರ ವಾರ್ತೆ ಕೇಳಿಬರಲಿದೆ. ಬಹುದಿನಗಳಿಂದ ಬಾಕಿ ಬರಬೇಕಿದ್ದ ಹಣ ಪಾವತಿಯಾಗಲಿದೆ. ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ.

ವೃಷಭ: ವೃತ್ತಿರಂಗದಲ್ಲಿ ನಿಮ್ಮ ಕೆಲಸಕ್ಕೆ ಎದುರಾಗುತ್ತಿದ್ದ ತೊಂದರೆಗಳು ನಿವಾರಣೆಯಾಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಅನಗತ್ಯ ವಿಚಾರಗಳಿಗೆ ತಲೆಕಡಿಸಿಕೊಳ್ಳುವುದು ಬೇಡ. ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿ.

ಮಿಥುನ: ಅಧಿಕ ಧನಲಾಭ ತರುವ ಯೋಜನೆಗಳಿಗೆ ಚಾಲನೆ ನೀಡಲಿದ್ದೀರಿ. ಸ್ನೇಹಿತರ ಸಹಕಾರ ಸಿಗಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ಅಂದುಕೊಂಡ ಕೆಲಸಗಳು ನೆರವೇರಲಿದೆ. ವ್ಯಾಪಾರಿಗಳಿಗೆ ತಕ್ಕ ಮಟ್ಟಿಗೆ ಲಾಭ ಕಂಡುಬರಲಿದೆ. ಕೃಷಿಕರಿಗೆ ಹಾಕಿದ ಬಂಡವಾಳಕ್ಕೆ ಮೋಸವಾಗದು. ವಿದ್ಯಾರ್ಥಿಗಳಿಗೆ ಮುನ್ನಡೆ.

ಸಿಂಹ: ನಿಮ್ಮ ಕೆಲಸಗಳಿಗೆ ಸಾಮಾಜಿಕವಾಗಿ ಜನಮನ್ನಣೆ ಸಿಗಲಿದೆ. ಪ್ರೀತಿ ಪಾತ್ರರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆ ನೀಡಲಿದ್ದೀರಿ. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ದಿನದಂತ್ಯಕ್ಕೆ ಶುಭ ಸುದ್ದಿ ಕೇಳಿಬರಲಿದೆ.

ಕನ್ಯಾ: ಪಾಲು ಬಂಡವಾಳ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಆದರೆ ನಿಮ್ಮ ದುಡುಕುತನದಿಂದ ಸಂಬಂಧ ಹಾಳು ಮಾಡಿಕೊಳ್ಳಬೇಡಿ. ವೈಯಕ್ತಿಕವಾಗಿ ಹಿಂದೆ ಮಾಡಿದ ತಪ್ಪುಗಳನ್ನು ನೆನೆಯುತ್ತಾ ಇಂದು ಸಿಗುವ ಉತ್ತಮ ಅವಕಾಶವನ್ನು ಹಾಳು ಮಾಡಿಕೊಳ್ಳಬೇಡಿ.

ತುಲಾ: ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದೆ. ವಿನಾಕಾರಣ ಬೇರೆಯವರ ವಿಚಾರದಲ್ಲಿ ಮೂಗು ತೂರಿಸಲು ಹೋದರೆ ಅವಮಾನ ಎದುರಿಸಬೇಕಾದೀತು. ವೃತ್ತಿರಂಗದಲ್ಲಿ ಅಭಿವೃದ್ಧಿ ಕಂಡುಬರಲಿದೆ. ಲೆಕ್ಕ ಪತ್ರಗಳ ಬಗ್ಗೆ ನಿಗಾ ಇಟ್ಟುಕೊಳ್ಳುವುದು ಮುಖ್ಯ.

ವೃಶ್ಚಿಕ: ದೂರ ಸಂಚಾರದಿಂದ ಕಾರ್ಯಸಿದ್ಧಿಯಾಗುವುದು. ಆದರೆ ವಾಹನ ಚಾಲನೆ ಮಾಡುವಾಗ ಎಚ್ಚರಿಕೆಯಿರಲಿ. ವೈವಾಹಿಕ ಪ್ರಸ್ತಾಪಗಳು ಬರಲಿವೆ. ಆರ್ಥಿಕವಾಗಿ ಹಣ ಸಂಪಾದನೆಗೆ ನಾನಾ ಮಾರ್ಗಗಳು ತೋರಿಬರಲಿವೆ. ಸರಿಯಾಗಿ ಬಳಸಿಕೊಳ್ಳಿ.

ಧನು: ವೈಯಕ್ತಿಕ ಆರೋಗ್ಯದ ಬಗ್ಗೆ ಉಪೇಕ್ಷೆ ಮಾಡಬೇಡಿ. ವಿದ್ಯಾರ್ಥಿಗಳ ಏಕಾಗ್ರತೆಗೆ ಭಂಗ ತರುವ ಘಟನೆಗಳಾದೀತು. ತಾಳ್ಮೆ ಅಗತ್ಯ. ಕಾರ್ಯಕ್ಷೇತ್ರದಲ್ಲಿ ಅಧಿಕ ಓಡಾಟ ನಡೆಸಬೇಕಾಗುತ್ತದೆ. ಹಿರಿಯರ ಮಾತಿಗೆ ಕಿವಿಗೊಡಬೇಕಾಗುತ್ತದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮಕರ: ಅವಿವಾಹಿತರಿಗೆ ಶೀಘ್ರ ಕಂಕಣ ಭಾಗ್ಯ ಒದಗಿಬರಲಿದೆ. ಅನಿರೀಕ್ಷಿತವಾಗಿ ಮನೆಗೆ ಅತಿಥಿಗಳ ಆಗಮನವಾಗಲಿದ್ದು, ಸಂತಸವಾಗಲಿದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ವ್ಯಾಪಾರ, ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದೆ.

ಕುಂಭ: ಅನವಶ್ಯಕ ಕೆಲಸಗಳಿಗೆ ನಿಮ್ಮ ಅಮೂಲ್ಯ ಸಮಯ ಹಾಳುಮಾಡಿಕೊಳ್ಳಬೇಡಿ. ಸಾಂಸಾರಿಕವಾಗಿ ಸಂಗಾತಿಯ ಅರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಅನಿರೀಕ್ಷಿತವಾಗಿ ಧನಲಾಭವಾಗಲಿದೆ. ಆದರೆ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ಮೀನ: ವಿದ್ಯಾರ್ಥಿಗಳ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ವೃತ್ತಿರಂಗದಲ್ಲಿ ಆಗಾಗ ಕಂಡುಬರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮುಂದಾಗುವಿರಿ. ಮನೆ ಸಾಮಾನು ಖರೀದಿಗೆ ಧನವ್ಯಯ ಮಾಡಲಿದ್ದೀರಿ. ಗೃಹಿಣಿಯರಿಗೆ ಮನಸ್ಸಿಗೆ ಖುಷಿಕೊಡುವ ವಿಚಾರ ಕೇಳಿಬರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಿಮ್ಮ ಒಡವೆಗಳನ್ನು ಗಿರವಿ ಇಡುವಂತೆ ಆಗಬಾರದಂತಿದ್ದರೆ ಈ ತಂತ್ರ ಮಾಡಿ