Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 1 ಜುಲೈ 2020 (08:47 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ  ಕ್ರಿಯಾಶೀಲ ಚಿಂತನೆಗಳು ಉದ್ಯೋಗ ಕ್ಷೇತ್ರದಲ್ಲಿ ಸಮಸ್ಯೆಗಳನ್ನು ನಿವಾರಿಸಲು ಸಹಾಯವಾಗಲಿದೆ. ಎಂದೋ ಮಾಡಿದ ಉಪಕಾರ ಇಂದು ಉಪಯೋಗಕ್ಕೆ ಬರಲಿದೆ. ಅವಿವಾಹಿತರು ಶೀಘ್ರ ಕಂಕಣ ಭಾಗ್ಯ ಪಡೆಯಲಿದ್ದಾರೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಷಭ: ನೀವು ಹಿಂದೆ ಮಾಡಿದ ತಪ್ಪುಗಳಿಗೆ ಇಂದು ಕೊರಗುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಹೊಸ ಕೆಲಸಗಳಿಗೆ ಕೈ ಹಾಕಲು ಸೂಕ್ತ ದಿನ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಕೆಟ್ಟ ಸ್ನೇಹ ಸಂಗದಿಂದ ದೂರವಿರುವುದೇ ಉತ್ತಮ.

ಮಿಥುನ: ದೈವಾನುಗ್ರಹದಿಂದ ಕಾರ್ಯಕ್ಷೇತ್ರದಲ್ಲಿ ಉತ್ತಮ ಫಲ ಪಡೆಯುವಿರಿ. ಧಾರ್ಮಿಕ ಕಾರ್ಯದಲ್ಲಿ ಶ್ರದ್ಧೆ ಮೂಡಲಿದೆ. ಹಿರಿಯರ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆ ನೀಡಲಿದ್ದೀರಿ. ಹಿತಶತ್ರುಗಳ ಉಪಟಳದಿಂದ ಮುಕ್ತರಾಗುವಿರಿ.

ಕರ್ಕಟಕ: ವ್ಯಾಪಾರಿ ವರ್ಗದವರಿಗೆ ಸ್ವಲ್ಪ ಮಟ್ಟಿಗಿನ ಚೇತರಿಕೆ ಕಂಡುಬಂದು ನೆಮ್ಮದಿ ಮೂಡಲಿದೆ. ಕೃಷಿಕರಿಗೆ ವ್ಯವಹಾರಗಳಿಗೆ ಅಡ್ಡಿ ಎದುರಾಗಲಿವೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಮುನ್ನಡೆ.

ಸಿಂಹ: ಕೋರ್ಟು ಕಚೇರಿ ವ್ಯವಹಾರಗಳಿಗೆ ಓಡಾಟ ನಡೆಸಬೇಕಾಗುತ್ತದೆ. ಸರಕಾರಿ ಉದ್ಯೋಗಿಗಳಿಗೆ ಅಧಿಕ ಕಾರ್ಯದೊತ್ತಡವಿರಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಚಿಂತನೆ ನಡೆಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಉದ್ದೇಶಿತ ಗುರಿಯತ್ತ ಸಾಗುವಾಗ ಅಡೆತಡೆಗಳು ಸಾಮಾನ್ಯ. ಬೇಡದ ಮಾತುಗಳಿಗೆ ಕಿವಿಗೊಡಬೇಕಿಲ್ಲ. ಆದರೆ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಸಂಗಾತಿಯ ಮಾತನ್ನು ಪಾಲಿಸಬೇಕಾಗುತ್ತದೆ. ಮಕ್ಕಳಿಂದ ಸಂತೋಷ ಸಿಗಲಿದೆ. ಅಭಿವೃದ್ಧಿ ಕಂಡುಬರುವುದು.

ತುಲಾ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ನೆರವಿನಿಂದ ಬರುವಂತಹ ಸಮಸ್ಯೆಗಳನ್ನು ಎದುರಿಸುವಿರಿ. ಆತ್ಮೀಯರ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ಆರೋಗ್ಯ ಸಮಸ್ಯೆಗಳು ಕಂಡುಬಂದೀತು, ಎಚ್ಚರಿಕೆ ಅಗತ್ಯ. ಕಿರು ಸಂಚಾರ ಮಾಡಬೇಕಾಗಬಹುದು.

ವೃಶ್ಚಿಕ: ಎಷ್ಟೋ ದಿನದಿಂದ ಕೂಡಿಟ್ಟುಕೊಂಡಿದ್ದ ಅಮೂಲ್ಯ ವಸ್ತುಗಳನ್ನು ಕಳೆದುಕೊಂಡ ಸಂಕಟ ಅನುಭವಿಸಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಿ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗಲಿದೆ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ.

ಧನು: ಸಾಂಸಾರಿಕವಾಗಿ ನೆಮ್ಮದಿಯ ವಾತಾವರಣವಿರಲಿದೆ. ಶಿಕ್ಷಕ ವರ್ಗದವರಿಗೆ ಉದ್ಯೋಗದಲ್ಲಿ ಮುನ್ನಡೆಯ ಯೋಗವಿದೆ. ಹೊಸ ಸವಾಲುಗಳಿಗೆ ಸಿದ್ಧರಾಗಬೇಕಾಗುತ್ತದೆ. ವಿದ್ಯಾರ್ಥಿಗಳು ಏಕಾಗ್ರತೆಯ ಕೊರತೆ ಅನುಭವಿಸುವರು. ದೇವರ ಪ್ರಾರ್ಥನೆ ಮರೆಯದಿರಿ.

ಮಕರ: ಮಾನಸಿಕವಾಗಿ ಋಣಾತ್ಮಕ ಚಿಂತನೆಗಳನ್ನು ಬಿಟ್ಟು ಆತ್ಮಸ್ಥೈರ್ಯದಿಂದ ಮುನ್ನಡೆದಲ್ಲಿ ಯಶಸ್ಸು ನಿಮ್ಮದಾಗುವುದು. ಹಣಕಾಸಿನ ವಿಚಾರದಲ್ಲಿ ಭವಿಷ್ಯದ ಯೋಜನೆ ರೂಪಿಸಲಿದ್ದೀರಿ. ಕೌಟುಂಬಿಕವಾಗಿ ಪರಸ್ಪರ ಪ್ರೀತಿ ವಿಶ್ವಾಸವಿರುವುದರಿಂದ ನೆಮ್ಮದಿ ಇರಲಿದೆ.

ಕುಂಭ: ವ್ಯಾಪಾರ ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದೆ. ವಾಹನ ಸವಾರರಿಗೆ ಚಾಲನೆಯಲ್ಲಿ ಎಚ್ಚರಿಕೆ ಅಗತ್ಯ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ಹೊಂದಾಣಿಕೆಯ ಮನೋಭಾವವಿರಲಿ.

ಮೀನ: ಅನಗತ್ಯವಾಗಿ ನಿಮ್ಮ ಬಗ್ಗೆ ಚಾಡಿ ಹೇಳುವವರನ್ನು ಅಲಕ್ಷಿಸುವುದು ಉತ್ತಮ. ವೃತ್ತಿರಂಗದಲ್ಲಿ ಹಿತಶತ್ರುಗಳ ಸಂಚು ಬಯಲಾಗಲಿದೆ. ಕೌಟುಂಬಿಕವಾಗಿ ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ