Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 2 ಜುಲೈ 2020 (09:03 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅವಕಾಶಗಳು ಎಲ್ಲ ಕಡೆ ಇರಲಿವೆ. ಅದನ್ನು ಬಳಸಿಕೊಳ್ಳುವ ಜಾಣತನ ಬೇಕಷ್ಟೇ. ಅದೃಷ್ಟದ ಬೆಂಬಲದಿಂದ ಬಯಸಿದ್ದು ಕೈಗೆ ಬರಲಿವೆ. ದೂರ ಸಂಚಾರವನ್ನು ಮುಂದೂಡಬೇಕಾದ ಪರಿಸ್ಥಿತಿ ಬರಲಿದೆ. ಪ್ರೇಮಿಗಳಿಗೆ ಹಿರಿಯರ ಒಪ್ಪಿಗೆ ಸಿಗಲಿದೆ.

ವೃಷಭ: ಮುಕ್ತ ಮನಸ್ಸಿನಿಂದ ನೋಡಿದರೆ ಸಮಸ್ಯೆಗಳ ಪರಿಹಾರಕ್ಕೆ ದಾರಿ ಸಿಗುವುದು. ನಿಮ್ಮ ಆತ್ಮಸ್ಥೈರ್ಯದಿಂದಲೇ ಕಷ್ಟದ ಕೆಲಸಗಳನ್ನೂ ಮಾಡಿ ಮುಗಿಸುವಿರಿ. ವ್ಯವಹಾರದಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಸಾಂಸಾರಿಕವಾಗಿ ತಾಳ್ಮೆ ಅಗತ್ಯ.

ಮಿಥುನ: ಉದ್ಯೋಗದಲ್ಲಿ ಬರುವ ಸಣ್ಣ ಪುಟ್ಟ ಸಮಸ್ಯೆಗಳನ್ನು ಅಲಕ್ಷಿಸಿದರೆ ಮುಂದೆ ಸಮಸ್ಯೆ ದೊಡ್ಡದಾಗಬಹುದು. ಸ್ನೇಹಿತರ ಸಮಯೋಚಿತ ಸಲಹೆ ಉಪಯೋಗಕ್ಕೆ ಬರುವುದು. ಹಣಕಾಸಿನ ಮುಗ್ಗಟ್ಟು ಎದುರಾಗಬಹುದು. ಎಚ್ಚರಿಕೆ ಅಗತ್ಯ. ದೇವಾಲಯ ಸಂದರ್ಶಿಸುವ ಸಾಧ್ಯತೆಯಿದೆ.

ಕರ್ಕಟಕ: ಮಾತಿನ ಮೇಲೆ ನಿಗಾ ಇರಲಿ. ಸಂಯಮ ಕಳೆದುಕೊಂಡರೆ ಕಾರ್ಯ ಹಾಳಾಗುವುದು. ಪೋಷಕರ ಸಲಹೆಗಳು ಇಷ್ಟವಾಗದೇ ಹೋಗಬಹುದು. ಅನಿರೀಕ್ಷಿತವಾಗಿ ಖರ್ಚು ವೆಚ್ಚಗಳು ಕಂಡುಬರಲಿವೆ. ಉದ್ಯೋಗದಲ್ಲಿ ಬದಲಾವಣೆಗೆ ಚಿಂತನೆ ನಡೆಸುವಿರಿ.

ಸಿಂಹ: ಯಾವುದೇ ಯೋಜನೆ ಮಾಡುವುದಕ್ಕೂ ಮೊದಲು ದೂರದೃಷ್ಟಿಯಿಂದ ಯೋಚನೆ ಮಾಡುವುದು ಉತ್ತಮ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಆರ್ಥಿಕವಾಗಿ ಕೈಗೆ ಬಂದಿದ್ದು ಬಾಯಿಗೆ ಬರದ ಅನುಭವವಾಗಲಿದೆ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕರ್ತವ್ಯ ಪ್ರಜ್ಞೆಯಿಂದ ಬರುವಂತಹ ಸಮಸ್ಯೆಗಳನ್ನು ನಿವಾರಿಸುವಿರಿ. ಹಂತ ಹಂತವಾಗಿ ಅಭಿವೃದ್ಧಿ ಅನುಭವಕ್ಕೆ ಬರಲಿದೆ. ಸರಕಾರಿ ಉದ್ಯೋಗಿಗಳಿಗೆ ವರ್ಗಾವಣೆಯ ಭೀತಿಯಿದೆ. ಭಾವನಾತ್ಮಕವಾಗಿ ಕಾಡುವ ಹಳೇ ವಿಚಾರಗಳಿಂದ ಮನಸ್ಸು ಬೇಸರದಲ್ಲಿರುವುದು.

ತುಲಾ: ನಿಮ್ಮ ದುಡುಕು ಮಾತಿನಿಂದ ಜತೆಗಿದ್ದವರ ಮನಸ್ಸಿಗೆ ನೋವುಂಟಾಗಬಹುದು. ಧನಾದಾಯ ಹೆಚ್ಚಿಸಲು ಹೊಸ ಮಾರ್ಗಗಳನ್ನು ಕಂಡುಕೊಳ್ಳುವಿರಿ. ವಿವೇಚನೆಯಿಂದ ಹೆಜ್ಜೆಯಿಡಿ. ಅವಿವಾಹಿತರಿಗೆ ಹೊಸ ವಿವಾಹ ಸಂಬಂಧಗಳು ಬರಲಿವೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ಹಣಕಾಸಿನ ವಿಚಾರದಲ್ಲಿ ಅಧಿಕ ಖರ್ಚು ವೆಚ್ಚಗಳು ಚಿಂತೆಗೀಡುಮಾಡಲಿವೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸುವಿರಿ. ಅವಿವಾಹಿತರು ಉತ್ತಮ ಸಂಬಂಧಕ್ಕಾಗಿ ಇನ್ನೂ ಕೆಲ ಕಾಲ ಕಾಯುವುದು ಒಳಿತು. ನಯವಂಚಕರು ನಿಮ್ಮ ಜೀವನದಲ್ಲಿ ಮೂಗು ತೂರಿಸಲು ಅವಕಾಶ ಮಾಡಿಕೊಡಬೇಡಿ.

ಧನು: ಎಲ್ಲಾ ಪ್ರಯತ್ನದಲ್ಲಿ ಸೋಲುತ್ತೀರಿ ಎಂದಾಗಲೇ ಯಾವುದೋ ಹುಲ್ಲು ಕಡ್ಡಿಯ ಆಸರೆ ಸಿಗಲಿದೆ. ಸಂಗಾತಿಯ ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಸಾಂಸಾರಿಕವಾಗಿ ಹೊಸ ಸವಾಲುಗಳಿಗೆ ಸಿದ್ಧರಾಗಿ. ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ.

ಮಕರ: ಸಂಘಟಿತ ಪ್ರಯತ್ನದಿಂದ ಉದ್ಯೋಗದಲ್ಲಿ ಯಶಸ್ಸು ಮುನ್ನಡೆ ಸಿಗಲಿದೆ. ಕೌಟುಂಬಿಕವಾಗಿ ಇದುವರೆಗೆ ಇದ್ದ ಭಿನ್ನಾಭಿಪ್ರಾಯಗಳು ಹಂತ ಹಂತವಾಗಿ ನಿವಾರಣೆಯಾಗಲಿದೆ. ಬಂಧು ಮಿತ್ರರ ಮಾತುಗಳಿಂದ ಮುಜುಗರಕ್ಕೀಡಾಗುವಿರಿ. ಸಂಯಮದಿಂದ ವರ್ತಿಸಿ.

ಕುಂಭ: ಇಂದು ನಿಮಗೆ ಮಿಶ್ರಫಲ ಉಂಟಾಗಲಿದೆ. ಮಾನಸಿಕವಾಗಿ ಋಣಾತ್ಮಕ ಚಿಂತೆಗಳಿಂದ ಹೈರಾಣಾಗುವಿರಿ. ಉದ್ಯೋಗದಲ್ಲಿ ವಿಶ್ರಾಂತಿಗೆ ಮನಸ್ಸು ಬಯಸುವುದು. ಆದರೆ ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಕಿರು ಸಂಚಾರ ಮಾಡಬೇಕಾಗುತ್ತದೆ.

ಮೀನ: ವಿದ್ಯಾರ್ಥಿಗಳಲ್ಲಿ ಕಲಿಯುವ ಆಸಕ್ತಿ, ಕುತೂಹಲ ಹೆಚ್ಚಲಿದೆ. ಉದ್ಯೋಗ ಕ್ಷೇತ್ರದಲ್ಲಿ ವಿನಾಕಾರಣ ತಪ್ಪಿತಸ್ಥರಾಗಬೇಕಾಗುತ್ತದೆ. ಸಾಂಸಾರಿಕವಾಗಿ ಸಂಗಾತಿಯ ಸಹಕಾರ ಸಿಗಲಿದೆ. ಆರ್ಥಿಕವಾಗಿ ಆದಾಯದಷ್ಟೇ ಖರ್ಚೂ ಇರಲಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗಂಡ-ಹೆಂಡತಿ ಸಂಬಂಧ ಚೆನ್ನಾಗಿರಬೇಕೆಂದರೆ ಬೆಡ್ ರೂಂನಲ್ಲಿ ಈ ಚಿತ್ರ ಹಾಕಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments