Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 3 ಜುಲೈ 2020 (08:59 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಚಿಂತೆಗೆ ಕಾರಣವಾಗಲಿದೆ. ಅಧಿಕಾರಿ ವರ್ಗದವರಿಗೆ ಮೇಲಿನ ಹಂತಕ್ಕೆ ಬಡ್ತಿ ಸಿಗುವ ಸಾಧ‍್ಯತೆಯಿದೆ. ನವವಿವಾಹಿತರಿಗೆ ಸಂತಾನ ಫಲ ಸೂಚನೆ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರುವುದು.

ವೃಷಭ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ಪರ ಊರಿಗೆ ಪ್ರಯಾಣ ಮಾಡಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗುವುದು. ಮನಸ್ಸಿಗೆ ಹಿಡಿಸುವ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಿ.

ಮಿಥುನ: ಯೋಗ್ಯ ವಯಸ್ಕರು ಶೀಘ್ರ ಮನಸ್ಸಿಗೆ ಹಿಡಿಸಿದ ಸಂಬಂಧ ಕಂಡುಕೊಳ್ಳಲಿದ್ದಾರೆ. ಪ್ರೇಮಿಗಳಿಗೆ ಉಸಿರುಕಟ್ಟಿಸುವ ವಾತಾವರಣವಿರುವುದು. ಹಿರಿಯರ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ವೃತ್ತಿ ರಂಗದಲ್ಲಿ ಸಹೋದ್ಯೋಗಿಗಳ ಕಿರಿ ಕಿರಿ ಇದ್ದರೂ ಯಶಸ್ಸಿಗೆ ತೊಂದರೆಯಾಗದು.

ಕರ್ಕಟಕ: ಕೃಷಿಕರಿಗೆ ತಮ್ಮ ವ್ಯವಹಾರದಲ್ಲಿ ಅಡೆತಡೆಗಳು ಎದುರಾದೀತು. ವ್ಯಾಪಾರಿಗಳು ತಕ್ಕಮಟ್ಟಿಗಿನ ಲಾಭ ಕಂಡುಕೊಳ್ಳಲಿದ್ದಾರೆ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ಹಿರಿಯರಿಗೆ ಆರೋಗ್ಯ ಸಮಸ್ಯೆ ಕಂಡುಬಂದೀತು.

ಸಿಂಹ: ಪೋಷಕರಿಗೆ ಮಕ್ಕಳ ಭವಿಷ್ಯಕ್ಕಾಗಿ ಧನವ್ಯಯ ಮಾಡಬೇಕಾಗುತ್ತದೆ. ನೂತನ ವೃತ್ತಿಯವರಿಗೆ ಮುನ್ನಡೆಯ ಯೋಗವಿದೆ. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗಾವಕಾಶಕ್ಕಾಗಿ ಕಾಯಬೇಕಾಗುತ್ತದೆ. ದುಡುಕು ವರ್ತನೆಯಿಂದ ಕಾರ್ಯ ಹಾಳು ಮಾಡಿಕೊಳ್ಳಬೇಡಿ.

ಕನ್ಯಾ: ನ್ಯಾಯಾಲಯದ ಕಾರ್ಯ ಕಲಾಪಗಳಲ್ಲಿ ಜಯ ನಿಮ್ಮದಾಗುವುದು. ಸರಕಾರಿ ಉದ್ಯೋಗಸ್ಥರಿಗೆ ಕಾರ್ಯಭಾರ ಹೆಚ್ಚಾಗಲಿದೆ. ಜಠರ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ನಿಮ್ಮ ರಹಸ್ಯಗಳು ಹೊರಬೀಳಲಿವೆ.

ತುಲಾ: ವ್ಯಾಪಾರಿಗಳಿಗೆ  ವ್ಯವಹಾರಗಳು ಲಾಭದಾಯಕವಾಗಲಿದೆ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಾಗದು. ಆದರೆ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ ಭವಿಷ್ಯದ ಯೋಜನೆಗೆ ಹಣ ಕೂಡಿಡುವುದು ಉತ್ತಮ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ವೃಶ್ಚಿಕ: ಹಿರಿಯರಿಗೆ ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಬರಲಿದೆ. ಕೌಟುಂಬಿಕವಾಗಿ ಅನಗತ್ಯ ಖರ್ಚು ವೆಚ್ಚಗಳು ಎದುರಾಗಬಹುದು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ದೇವತಾ ಪ್ರಾರ್ಥನೆ ಮಾಡಿ.

ಧನು: ಮಕ್ಕಳ ವಿದ್ಯಾಭ್ಯಾಸ ವಿಚಾರದಲ್ಲಿ ಸಂತಸದ ವಾರ್ತೆ ಕೇಳಿಬರಲಿದೆ. ಸಾಮಾಜಿಕವಾಗಿ ಉತ್ತಮ ಸ್ಥಾನಮಾನ ಪಡೆಯಲಿದ್ದೀರಿ. ಯಂತ್ರೋಪಕರಣ ಕೆಲಸ ಮಾಡುವವರಿಗೆ ಹಿನ್ನಡೆಯಾದೀತು. ಭೂ ಸಂಬಂಧೀ ವ್ಯವಹಾರದಲ್ಲಿ ಲಾಭ ಗಳಿಸಲಿದ್ದೀರಿ.

ಮಕರ: ಕ್ರಯ-ವಿಕ್ರಯ ವ್ಯವಹಾರಗಳು ಕೈ ಹಿಡಿಯಲಿವೆ. ಆದರೆ ದುಡುಕು ಮಾತು, ವರ್ತನೆಯಿಂದ ಪಶ್ಚಾತ್ತಾಪ ಪಡುವಂತಾದೀತು, ಎಚ್ಚರಿಕೆಯಿಂದಿರಿ. ದಂಪತಿಗಳ ನಡುವೆ ವಿರಸ ತೋರಿಬಂದೀತು. ಹಿತಶತ್ರುಗಳಿಂದ ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸಿ.

ಕುಂಭ: ನವವಿವಾಹಿತರಿಗೆ ಸಂತಾನ ಫಲ ಸೂಚನೆ ದೊರೆಯಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನಡೆಸಲು ಸಿದ್ಧತೆ ನಡೆಸಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು. ಮಹಿಳೆಯರಿಗೆ ಅನಿರೀಕ್ಷಿತ ಉಡುಗೊರೆ ಸಿಗಲಿದೆ. ಚಿಂತೆ ಬೇಡ.

ಮೀನ: ಹಳೇ ಬಾಕಿ ವಸೂಲಾತಿ ಚಿಂತೆ ಕಾಡುವುದು. ಮನೆ ರಿಪೇರಿ ಕೆಲಸಗಳಿಗೆ ಮುಂದಾಗಲಿದ್ದೀರಿ. ಸಂಗಾತಿಯ ಮನದಾಸೆ ಪೂರೈಸಲಿದ್ದೀರಿ. ಹಿರಿಯರಿಗೆ ಪುಣ್ಯ ಕ್ಷೇತ್ರ ಸಂದರ್ಶನ ಯೋಗವಿದೆ. ನ್ಯಾಯಾಲಯದ ಕಾರ್ಯ ಕಲಾಪಗಳು ನಿಮ್ಮ ಪರವಾಗಿರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದೇವರ ಪೂಜೆ ಮಾಡುವಾಗ ಈ ತಪ್ಪನ್ನು ಮಾಡಬೇಡಿ