Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 3 ಜುಲೈ 2020 (08:59 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಚಿಂತೆಗೆ ಕಾರಣವಾಗಲಿದೆ. ಅಧಿಕಾರಿ ವರ್ಗದವರಿಗೆ ಮೇಲಿನ ಹಂತಕ್ಕೆ ಬಡ್ತಿ ಸಿಗುವ ಸಾಧ‍್ಯತೆಯಿದೆ. ನವವಿವಾಹಿತರಿಗೆ ಸಂತಾನ ಫಲ ಸೂಚನೆ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರುವುದು.

ವೃಷಭ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ಪರ ಊರಿಗೆ ಪ್ರಯಾಣ ಮಾಡಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗುವುದು. ಮನಸ್ಸಿಗೆ ಹಿಡಿಸುವ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಿ.

ಮಿಥುನ: ಯೋಗ್ಯ ವಯಸ್ಕರು ಶೀಘ್ರ ಮನಸ್ಸಿಗೆ ಹಿಡಿಸಿದ ಸಂಬಂಧ ಕಂಡುಕೊಳ್ಳಲಿದ್ದಾರೆ. ಪ್ರೇಮಿಗಳಿಗೆ ಉಸಿರುಕಟ್ಟಿಸುವ ವಾತಾವರಣವಿರುವುದು. ಹಿರಿಯರ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ವೃತ್ತಿ ರಂಗದಲ್ಲಿ ಸಹೋದ್ಯೋಗಿಗಳ ಕಿರಿ ಕಿರಿ ಇದ್ದರೂ ಯಶಸ್ಸಿಗೆ ತೊಂದರೆಯಾಗದು.

ಕರ್ಕಟಕ: ಕೃಷಿಕರಿಗೆ ತಮ್ಮ ವ್ಯವಹಾರದಲ್ಲಿ ಅಡೆತಡೆಗಳು ಎದುರಾದೀತು. ವ್ಯಾಪಾರಿಗಳು ತಕ್ಕಮಟ್ಟಿಗಿನ ಲಾಭ ಕಂಡುಕೊಳ್ಳಲಿದ್ದಾರೆ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ಹಿರಿಯರಿಗೆ ಆರೋಗ್ಯ ಸಮಸ್ಯೆ ಕಂಡುಬಂದೀತು.

ಸಿಂಹ: ಪೋಷಕರಿಗೆ ಮಕ್ಕಳ ಭವಿಷ್ಯಕ್ಕಾಗಿ ಧನವ್ಯಯ ಮಾಡಬೇಕಾಗುತ್ತದೆ. ನೂತನ ವೃತ್ತಿಯವರಿಗೆ ಮುನ್ನಡೆಯ ಯೋಗವಿದೆ. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗಾವಕಾಶಕ್ಕಾಗಿ ಕಾಯಬೇಕಾಗುತ್ತದೆ. ದುಡುಕು ವರ್ತನೆಯಿಂದ ಕಾರ್ಯ ಹಾಳು ಮಾಡಿಕೊಳ್ಳಬೇಡಿ.

ಕನ್ಯಾ: ನ್ಯಾಯಾಲಯದ ಕಾರ್ಯ ಕಲಾಪಗಳಲ್ಲಿ ಜಯ ನಿಮ್ಮದಾಗುವುದು. ಸರಕಾರಿ ಉದ್ಯೋಗಸ್ಥರಿಗೆ ಕಾರ್ಯಭಾರ ಹೆಚ್ಚಾಗಲಿದೆ. ಜಠರ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ನಿಮ್ಮ ರಹಸ್ಯಗಳು ಹೊರಬೀಳಲಿವೆ.

ತುಲಾ: ವ್ಯಾಪಾರಿಗಳಿಗೆ  ವ್ಯವಹಾರಗಳು ಲಾಭದಾಯಕವಾಗಲಿದೆ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಾಗದು. ಆದರೆ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ ಭವಿಷ್ಯದ ಯೋಜನೆಗೆ ಹಣ ಕೂಡಿಡುವುದು ಉತ್ತಮ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ವೃಶ್ಚಿಕ: ಹಿರಿಯರಿಗೆ ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಬರಲಿದೆ. ಕೌಟುಂಬಿಕವಾಗಿ ಅನಗತ್ಯ ಖರ್ಚು ವೆಚ್ಚಗಳು ಎದುರಾಗಬಹುದು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ದೇವತಾ ಪ್ರಾರ್ಥನೆ ಮಾಡಿ.

ಧನು: ಮಕ್ಕಳ ವಿದ್ಯಾಭ್ಯಾಸ ವಿಚಾರದಲ್ಲಿ ಸಂತಸದ ವಾರ್ತೆ ಕೇಳಿಬರಲಿದೆ. ಸಾಮಾಜಿಕವಾಗಿ ಉತ್ತಮ ಸ್ಥಾನಮಾನ ಪಡೆಯಲಿದ್ದೀರಿ. ಯಂತ್ರೋಪಕರಣ ಕೆಲಸ ಮಾಡುವವರಿಗೆ ಹಿನ್ನಡೆಯಾದೀತು. ಭೂ ಸಂಬಂಧೀ ವ್ಯವಹಾರದಲ್ಲಿ ಲಾಭ ಗಳಿಸಲಿದ್ದೀರಿ.

ಮಕರ: ಕ್ರಯ-ವಿಕ್ರಯ ವ್ಯವಹಾರಗಳು ಕೈ ಹಿಡಿಯಲಿವೆ. ಆದರೆ ದುಡುಕು ಮಾತು, ವರ್ತನೆಯಿಂದ ಪಶ್ಚಾತ್ತಾಪ ಪಡುವಂತಾದೀತು, ಎಚ್ಚರಿಕೆಯಿಂದಿರಿ. ದಂಪತಿಗಳ ನಡುವೆ ವಿರಸ ತೋರಿಬಂದೀತು. ಹಿತಶತ್ರುಗಳಿಂದ ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸಿ.

ಕುಂಭ: ನವವಿವಾಹಿತರಿಗೆ ಸಂತಾನ ಫಲ ಸೂಚನೆ ದೊರೆಯಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನಡೆಸಲು ಸಿದ್ಧತೆ ನಡೆಸಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು. ಮಹಿಳೆಯರಿಗೆ ಅನಿರೀಕ್ಷಿತ ಉಡುಗೊರೆ ಸಿಗಲಿದೆ. ಚಿಂತೆ ಬೇಡ.

ಮೀನ: ಹಳೇ ಬಾಕಿ ವಸೂಲಾತಿ ಚಿಂತೆ ಕಾಡುವುದು. ಮನೆ ರಿಪೇರಿ ಕೆಲಸಗಳಿಗೆ ಮುಂದಾಗಲಿದ್ದೀರಿ. ಸಂಗಾತಿಯ ಮನದಾಸೆ ಪೂರೈಸಲಿದ್ದೀರಿ. ಹಿರಿಯರಿಗೆ ಪುಣ್ಯ ಕ್ಷೇತ್ರ ಸಂದರ್ಶನ ಯೋಗವಿದೆ. ನ್ಯಾಯಾಲಯದ ಕಾರ್ಯ ಕಲಾಪಗಳು ನಿಮ್ಮ ಪರವಾಗಿರಲಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗಂಡ-ಹೆಂಡತಿ ಸಂಬಂಧ ಚೆನ್ನಾಗಿರಬೇಕೆಂದರೆ ಬೆಡ್ ರೂಂನಲ್ಲಿ ಈ ಚಿತ್ರ ಹಾಕಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments