Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 4 ಜುಲೈ 2020 (08:57 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಯವಾಗಿ ಮಾತನಾಡುತ್ತಾ ಬರುವವರ ಬಗ್ಗೆ ಎಚ್ಚರಿಕೆಯಿಂದಿರಿ. ನಿಮ್ಮ ಒಳ್ಳೆತನದ ದುರುಪಯೋಗವಾಗದಂತೆ ಎಚ್ಚರಿಕೆ ವಹಿಸಿ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳಾಗಬಹುದು. ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ. ವಿದ್ಯಾರ್ಥಿಗಳಿಗೆ ಮುನ್ನಡೆ.

ವೃಷಭ: ಸಾಹಿತಿಗಳಿಗೆ, ಕಲಾ ಕ್ಷೇತ್ರದಲ್ಲಿರವವರಿಗೆ ಮುನ್ನಡೆ, ಕೀರ್ತಿ ಸಂಪಾದಿಸುವ ಯೋಗವಿದೆ. ಕಾರ್ಯಕ್ಷೇತ್ರದಲ್ಲಿ ಅದೃಷ್ಟ ನಿಮ್ಮ ಪಾಲಿಗೆ ಬರಲಿದೆ. ನಿರುದ್ಯೋಗಿಗಳು ಸರಿಯಾದ ಅವಕಾಶಗಳನ್ನು ಜಾಣತನದಿಂದ ಆಯ್ದುಕೊಳ್ಳಬೇಕು. ಹಳೆಯ ಮಿತ್ರರ ಭೇಟಿ ಸಂಭವ.

ಮಿಥುನ: ಮನೋನಿಗ್ರಹ ಮಾಡದೇ ಇದ್ದರೆ ಸಂಕಷ್ಟ ತಪ್ಪಿದ್ದಲ್ಲ. ಕೆಟ್ಟ ಸ್ನೇಹ ಸಂಗದಿಂದ ದೂರವಿರುವುದೇ ಉತ್ತಮ. ಉದ್ಯೋಗದಲ್ಲಿ ಅಭಿವೃದ್ಧಿ ಕಂಡುಬಂದರೂ ಎಚ್ಚರಿಕೆಯ ಹೆಜ್ಜೆಯಿಡುವುದು ಸೂಕ್ತ. ಸಂಗಾತಿಯ ಮನಸ್ಸಿಗೆ ಇಷ್ಟವಾಗುವ ಕೆಲಸ ಮಾಡಲಿದ್ದೀರಿ.

ಕರ್ಕಟಕ: ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಬಂದೀತು. ನಾಲಿಗೆ ಚಪಲಕ್ಕೆ ಕಡಿವಾಣ ಹಾಕಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಉಂಟಾಗಬಹುದು. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ.

ಸಿಂಹ: ಕಾರ್ಯರಂಗದಲ್ಲಿ ತಾಪತ್ರಯಗಳು ತಪ್ಪಿದ್ದಲ್ಲ. ಹಣಕಾಸಿನ ಪರಿಸ್ಥಿತಿ ಸರಿಪಡಿಸಲು ಮುಂದಾಗುವಿರಿ. ಧನಗಳಿಕೆಗೆ ನಾನಾ ಮಾರ್ಗ ಕಂಡುಕೊಳ್ಳಲಿದ್ದೀರಿ. ಹಿರಿಯರ ಸಲಹೆಯನ್ನು ಪಾಲಿಸದಲ್ಲಿ ಉತ್ತಮ. ಕೃಷಿಕರಿಗೆ ವ್ಯವಹಾರಗಳು ಸುಸ್ರೂತ್ರವಾಗಲಿದೆ.

ಕನ್ಯಾ: ತಾಳ್ಮೆಯಿಂದ ನಡೆದುಕೊಂಡಲ್ಲಿ ಉದ್ಯೋಗ ಕ್ಷೇತ್ರದಲ್ಲಿ ನೀವು ಅಂದುಕೊಂಡ ಘಟ್ಟ ತಲುಪಲಿದ್ದೀರಿ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಅನೇಕ ಸಮಸ್ಯೆಗಳು ಬಂದರೂ ಸಂಗಾತಿಯ ಸಹಕಾರದಿಂದ ಪರಿಹರಿಸುವಿರಿ.

ತುಲಾ: ವೃತ್ತಿರಂಗದಲ್ಲಿ ಉನ್ನತ ಸ್ಥಾನಮಾನಕ್ಕೇರುವ ಅವಕಾಶಗಳು ಒದಗಿಬರಲಿವೆ. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದುಡುಕಿನ ವರ್ತನೆ ತೋರಿ ಸಮಸ್ಯೆ ಮೈಮೇಲೆಳೆದುಕೊಳ್ಳಬೇಡಿ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರ.

ವೃಶ್ಚಿಕ: ಎಂದೋ ಮಾಡಿದ ಒಳ್ಳೆಯ ಕೆಲಸಗಳು ಇಂದು ನಿಮ್ಮ ಕೈಹಿಡಿಯಲಿವೆ. ದಾಂಪತ್ಯದಲ್ಲಿ ಹೊಂದಾಣಿಕೆಯ ಕೊರತೆ ಎದುರಾದೀತು. ಆದರೂ ಸಮಸ್ಯೆ ಪರಿಹಾರವಾಗಲಿದೆ. ವ್ಯಾವಹಾರಿಕವಾಗಿ ಉನ್ನತಿ ಕಂಡುಕೊಳ್ಳಲಿದ್ದೀರಿ. ದೇವತಾ ಪ್ರಾರ್ಥನೆ ಮರೆಯದಿರಿ.

ಧನು: ಭವಿಷ್ಯದ ಯೋಜನೆಗಳಿಗೆ ಇಂದೇ ಹಣ ಕೂಡಿಡಲಿದ್ದೀರಿ. ವ್ಯಾವಹಾರಿಕವಾಗಿ ನಿಮ್ಮ ಹಿತಶತ್ರುಗಳಿಂದ ತೊಂದರೆ ಎದುರಾಗಬಹುದು. ಹಾಗಿದ್ದರೂ ಅಂತಿಮ ಜಯ ನಿಮ್ಮದಾಗಲಿದೆ. ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮಕರ: ಹಲವು ದಿನಗಳಿಂದ ಪ್ರಯತ್ನಿಸುತ್ತಿದ್ದ ಕಾರ್ಯದಲ್ಲಿ ಯಶಸ್ಸು ಕಾಣಲಿದ್ದೀರಿ. ಅನವಶ್ಯಕ ಚಿಂತೆಗಳಿಂದ ಕೆಲಸದಲ್ಲಿ ನಿರುತ್ಸಾಹ ತೋರಿಬಂದೀತು. ಕೆಳ ಹಂತದ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಲಿದೆ. ವಾಸಸ್ಥಳ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ.

ಕುಂಭ: ನಿಮ್ಮ ಕೆಲವೊಂದು ನಿರ್ಧಾರಗಳು ಕುಟುಂಬದಲ್ಲಿ ಅನಗತ್ಯ ಭಿನ್ನಾಭಿಪ್ರಾಯ, ಕಲಹಗಳಿಗೆ ಕಾರಣವಾಗುವುದು. ತಾಳ್ಮೆ, ಸಂಯಮದಿಂದ ವರ್ತಿಸಿ. ಮಹಿಳೆಯರಿಗೆ ಆಕಸ್ಮಿಕ ಧನಲಾಭವಾಗಲಿದೆ. ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬರಬಹುದು, ಎಚ್ಚರ.

ಮೀನ: ಅವಿವಾಹಿತರು ಮನಸ್ಸಿಗೆ ಇಷ್ಟವಾಗುವ ಸಂಬಂಧಗಳು ಬರಲಿದ್ದು, ಶೀಘ್ರದಲ್ಲೇ ವೈವಾಹಿಕ ಬದುಕಿಗೆ ಕಾಲಿಡಲಿದ್ದೀರಿ. ವಿದ್ಯಾರ್ಥಿಗಳಿಗೆ ತಕ್ಕಮಟ್ಟಿಗಿನ ಮುನ್ನಡೆ ಕಂಡುಬರಲಿದೆ. ಸಾಂಸಾರಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ