Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 7 ಜುಲೈ 2020 (08:49 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ದುಂದು ವೆಚ್ಚಗಳಿಂದ ಮುಂದೆ ತೊಂದರೆ ಅನುಭವಿಸಬೇಕಾದೀತು. ಸರಿಯಾದ ಯೋಜನೆಯೊಂದಿಗೆ ಹೆಜ್ಜೆಯಿಡುವುದು ಮುಖ್ಯ. ವೃತ್ತಿರಂಗದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ಮನೆ ಮಾಲಿಕರ ಕಿರಿ ಕಿರಿಯಿಂದ ವಾಸಸ್ಥಳ ಬದಲಾವಣೆಗೆ ಚಿಂತನೆ ಮಾಡಲಿದ್ದೀರಿ.

ವೃಷಭ: ಮನೆ, ಕಟ್ಟಡ ನಿರ್ಮಾಣಕ್ಕೆ ಇದು ಸಕಾಲ. ಆರ್ಥಿಕವಾಗಿ ಸಾಲದ ಹಣ ಪಾವತಿಯಾಗಿ ನೆಮ್ಮದಿಯಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಅವಿವಾಹಿತರ ವಿವಾಹ ಮಾತುಕತೆಗೆ ಅಡ್ಡಿ ಆತಂಕಗಳು ಎದುರಾಗಲಿವೆ.

ಮಿಥುನ: ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ನೆರವೇರಲಿದೆ. ವೃತ್ತಿರಂಗದಲ್ಲಿ ಮೇಲೇರುವ ಅವಕಾಶವಿದೆ. ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಕುಟುಂಬ ಸದಸ್ಯರ ಅಭಿಪ್ರಾಯ ಪಡೆಯಿರಿ. ಯೋಗ್ಯ ವಯಸ್ಕರಿಗೆ ಸೂಕ್ತ ಸಂಬಂಧಗಳು ಕೂಡಿಬರಲಿವೆ.

ಕರ್ಕಟಕ: ಅನಿರೀಕ್ಷಿತವಾಗಿ ದೂರ ಸಂಚಾರ ಮಾಡಬೇಕಾಗುತ್ತದೆ. ವಾಹನ ಸವಾರರು ಎಚ್ಚರಿಕೆಯಿಂದಿರಬೇಕು. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ಧಾರ್ಮಿಕ ಕಾರ್ಯಗಳಿಗಾಗಿ ಧನವ್ಯಯ ಮಾಡಲಿದ್ದೀರಿ.

ಸಿಂಹ: ರಾಜಕೀಯ ವರ್ಗದವರಿಗೆ ಅಪವಾದದ ಭೀತಿಯಿದೆ. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಗೃಹಿಣಿಯರು ಕ್ರಿಯಾತ್ಮಕ ಕೆಲಸಗಳಿಂದ ಸಂತಸ ಕಾಣಲಿದ್ದಾರೆ. ಮಕ್ಕಳ ವಿಚಾರದಲ್ಲಿ ಚಿಂತೆಯಾದೀತು. ಕುಲದೇವರ ಪ್ರಾರ್ಥನೆ ಮಾಡಿ.

ಕನ್ಯಾ: ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗಲಿದ್ದೀರಿ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಕಂಡುಬಂದೀತು. ಆದರೆ ಉಪೇಕ್ಷೆ ಬೇಡ. ವೃತ್ತಿರಂಗದಲ್ಲಿ ಹಿತ ಶತ್ರುಗಳ ತೊಂದರೆ ಕಂಡುಬರಬಹುದು. ತಾಳ್ಮೆಯಿರಲಿ.

ತುಲಾ: ವಾಹನ, ಭೂಮಿ ಖರೀದಿಗೆ ಇದು ಸಕಾಲ. ಆರ್ಥಿಕವಾಗಿ ಹಂತ ಹಂತವಾಗಿ ಚೇತರಿಕೆ ಕಂಡುಬರುವುದು. ಎಷ್ಟೋ ದಿನಗಳಿಂದ ಅಂದುಕೊಂಡಿದ್ದ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಹಳೆಯ ಮಿತ್ರರನ್ನು ಭೇಟಿಯಾಗುವುದರಿಂದ ಸಂತಸವಾಗಲಿದೆ.

ವೃಶ್ಚಿಕ: ವೃತ್ತಿರಂಗದಲ್ಲಿ ಆಶಾಭಾವನೆ ಇಟ್ಟುಕೊಳ್ಳುವುದು ಅಗತ್ಯ. ಕೆಳ ಹಂತದ ನೌಕರರಿಗೆ ಭವಿಷ್ಯದ ಚಿಂತೆಯಾಗಬಹುದು.
ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ನೆರೆಹೊರೆಯವರ ಮಾತುಗಳನ್ನು ಅಲಕ್ಷಿಸುವುದೇ ಉತ್ತಮ. ದೇವತಾ ಪ್ರಾರ್ಥನೆ ಮಾಡಿ.

ಧನು: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಕಂಡುಬರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನಕ್ಕಾಗಿ ಪೈಪೋಟಿ ಎದುರಾಗಲಿದೆ. ಹಿರಿಯರಿಗೆ ಆರೋಗ್ಯ ಸಮಸ್ಯೆ ಚಿಂತೆಗೆ ಕಾರಣವಾಗಬಹುದು. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಮಕರ: ವೃತ್ತಿರಂಗದಲ್ಲಿ ಸ್ಥಾನ ಪಲ್ಲಟ ಸಾಧ್ಯತೆಯಿದೆ. ಇನ್ನೊಬ್ಬರನ್ನು ತೃಪ್ತಿಪಡಿಸಲು ಹೋಗಿ ನೀವೇ ತೊಂದರೆಗೆ ಸಿಕ್ಕಿ ಹಾಕಿಕೊಳ್ಳಲಿದ್ದೀರಿ. ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಓಡಾಟ ನಡೆಸಬೇಕಾಗುತ್ತದೆ.

ಕುಂಭ: ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಹಿನ್ನಡೆಯಾದೀತು. ಲೆಕ್ಕ ಪತ್ರಗಳ ಬಗ್ಗೆ ನಿಗಾ ಇರಲಿ. ಮಕ್ಕಳ ವಿಚಾರದಲ್ಲಿ ಸಂತಸದ ವಾರ್ತೆ ಕೇಳಲಿದ್ದೀರಿ. ವೃತ್ತಿರಂಗದಲ್ಲಿ ನೀವು ಬಯಸದೇ ಇದ್ದ ಭಾಗ್ಯವೊಂದು ಒದಗಿ ಬರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿದೆ.

ಮೀನ: ಮನೆಗೆ ಅನಿರೀಕ್ಷಿತವಾಗಿ ಬಂಧುಮಿತ್ರರ ಆಗಮನವಾಗಲಿದ್ದು, ಖುಷಿಯ ವಾತಾವರಣವಿರುವುದು. ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ನೂತನ ದಂಪತಿಗಳು ಸುಂದರ ಕ್ಷಣ ಕಳೆಯಲಿದ್ದಾರೆ. ಪ್ರೇಮಿಗಳಿಗೆ ನೆಮ್ಮದಿಯ ದಿನ.

Share this Story:

Follow Webdunia kannada

ಮುಂದಿನ ಸುದ್ದಿ

ಹಾಲಿಗೆ ಇದನ್ನು ಬೆರೆಸಿ ಲಕ್ಷ್ಮೀದೇವಿಗೆ ನೈವೇದ್ಯ ಇಟ್ಟರೆ ಹಣದ ಸುರಿಮಳೆ ಹರಿಯುವುದು