Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 8 ಜುಲೈ 2020 (08:59 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳು ಅಧಿಕವಾಗಲಿದ್ದು, ಹಲವು ಕೆಲಸಗಳಿಗೆ ಓಡಾಟ ನಡೆಸಬೇಕಾಗುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಧಾರ್ಮಿಕ ಕಾರ್ಯಗಳನ್ನು ನೆರವೇರಿಸಲು ಸಿದ್ಧತೆ ನಡೆಸುವಿರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನಗಳು ವೃದ್ಧಿಯಾಗಲಿವೆ. ಕೈಗೊಂಡ ಕೆಲಸಗಳಲ್ಲಿ ಯಶಸ್ಸು ಸಿಗುವುದರಿಂದ ನೆಮ್ಮದಿಯಾಗಲಿದೆ. ದಾಂಪತ್ಯ ಸುಖಕ್ಕೆ ಕೊರೆತೆಯಿರದು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ.

ಮಿಥುನ: ಶುಭ ಮಂಗಲ ಕಾರ್ಯಗಳಲ್ಲಿ ವಿಘ್ನಭಯ ಎದುರಾಗಲಿದೆ. ಹಿರಿಯರಿಗೆ ಆರೋಗ್ಯ ಸಮಸ್ಯೆ ಕಂಡುಬರಬಹುದು. ವೃತ್ತಿ ರಂಗದಲ್ಲಿ ಮುಂಬಡ್ತಿ ಪಡೆಯುವ ನಿಮ್ಮ ಕನಸಿಗೆ ತೊಂದರೆ ಎದುರಾಗಲಿದೆ. ದುಡುಕಿನ ನಿರ್ಧಾರ ಕೈಗೊಳ್ಳಲು ಹೋದರೆ ತೊಂದರೆ ತಪ್ಪಿದ್ದಲ್ಲ.

ಕರ್ಕಟಕ: ಯಾವುದೇ ವಿಚಾರವನ್ನೂ ಸಂಗಾತಿಯ ಜತೆ ಚರ್ಚಿಸಿ ಹೆಜ್ಜೆಯಿಡುವುದರಿಂದ ಪರಿಹಾರ ಸಿಗಲಿದೆ. ರಾಜಕೀಯ ರಂಗದಲ್ಲಿರುವವರಿಗೆ ತಟಸ್ಥವಾಗಿರುವುದೇ ಮೇಲು ಅನಿಸಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಬಹುದು.

ಸಿಂಹ: ವಿದ್ಯಾರ್ಥಿಗಳು ಅಭ್ಯಾಸಕ್ಕಾಗಿ ಹೆಚ್ಚಿನ ಸಮಯ ಮೀಸಲಿಡಬೇಕಾಗುತ್ತದೆ. ಆದರೆ ಕೆಟ್ಟ ಸಂಘದ ಸ್ನೇಹದಿಂದ ದೂರವಿರುವುದೇ ಉತ್ತಮ. ವ್ಯಾಪಾರ, ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.

ಕನ್ಯಾ: ನಿಮ್ಮ ಕೆಲವು ದುಡುಕು ಮಾತಿನಿಂದ ಅನಗತ್ಯ ವಾದ ವಿವಾದಗಳು ತೋರಿಬಂದೀತು. ಸಂಯಮವಿರಲಿ. ಗೃಹಿಣಿಯರಿಗೆ ಅನಿರೀಕ್ಷಿತ ಉಡುಗೊರೆ ಸ್ವೀಕರಿಸುವ ಯೋಗ. ಸಾಂಸಾರಿಕವಾಗಿ ಹೊಸ ಜವಾಬ್ಧಾರಿಗಳನ್ನು ಹೊರಬೇಕಾಗಬಹುದು.

ತುಲಾ: ನಿಗದಿತ ಸಮಯದಲ್ಲಿ ಹಣಕಾಸಿನ ವ್ಯವಸ್ಥೆಯಾಗುವುದರಿಂದ ಅಂದುಕೊಂಡ ಕೆಲಸ ಕಾರ್ಯಗಳನ್ನು ಪೂರ್ತಿ ಮಾಡಲಿದ್ದೀರಿ. ಬೇಡದ ವಿಚಾರಕ್ಕೆ ತಲೆಕೆಡಿಸಿಕೊಳ್ಳುವುದು ಬೇಡ. ದಾಂಪತ್ಯದಲ್ಲಿ ಹೊಂದಾಣಿಕೆ ಇರಲಿ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ನಿಮ್ಮ ಮನಸ್ಸಿಗೆ ಹಿಡಿಸಿದ ಕೆಲಸಗಳನ್ನು ಆಸಕ್ತಿಯಿಂದ ಮಾಡಿ ಮುಗಿಸಲಿದ್ದೀರಿ. ರಾಜಕೀಯ ರಂಗದಲ್ಲಿರುವವರಿಗೆ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ದೂರ ಸಂಚಾರ ಮಾಡಬೇಕಾಗಬಹುದು.

ಧನು: ಕೃಷಿಕರಿಗೆ ವ್ಯವಹಾರಕ್ಕೆ ಪೂರಕವಾದ ವಾತಾವರಣ ಒದಗಿಬರಲಿದೆ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚದ ಬಗ್ಗೆ ಎಚ್ಚರಿಕೆಯಿರಲಿ.  ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಮುನ್ನಡೆ ಸಿಗಲಿದೆ. ಕೌಟುಂಬಿಕವಾಗಿ ಸುಖ ಶಾಂತಿ ಇರಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಮಕರ: ಸಕಾಲಿಕವಾಗಿ ಅಂದುಕೊಂಡ ಯೋಜನೆಗಳನ್ನು ಮಾಡಿ ಮುಗಿಸಿದ ಸಂತೃಪ್ತಿ ಸಿಗಲಿದೆ. ವೃತ್ತಿರಂಗದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಗೃಹ ಬಳಕೆ ವಸ್ತುಗಳ ಖರೀದಿ ಮಾಡುವಿರಿ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ನೆರೆಹೊರೆಯವರೊಡನೆ ಎಚ್ಚರಿಕೆಯಿಂದ ವರ್ತಿಸಿ. ಮಾನಸಿಕ ಉದ್ವೇಗಕ್ಕೊಳಗಾಗಿ ಅವಸರದ ನಿರ್ಧಾರ ಕೈಗೊಳ್ಳಲು ಹೋಗಬೇಡಿ. ದೇವತಾ ಕಾರ್ಯಗಳಿಗಾಗಿ ಧನವ್ಯಯವಾಗಲಿದೆ. ನೂತನ ದಂಪತಿಗಳಿಗೆ ಹೊಂದಾಣಿಕೆಯ ಕೊರತೆ ಕಂಡುಬರಲಿದೆ.

ಮೀನ: ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ಧಾರಿ ಹೊರಬೇಕಾಗುತ್ತದೆ. ಬಂಧು ಮಿತ್ರರ ಆಗಮನದಿಂದ ಮನೆಯಲ್ಲಿ ಸಂಭ್ರಮವಿರಲಿದೆ. ಮಹಿಳೆಯರಿಗೆ ತವರಿನ ಕಡೆಯಿಂದ ಉಡುಗೊರೆ ಸಿಗಲಿದೆ. ಸಂತಾನಾಪೇಕ್ಷಿತ ದಂಪತಿಗಳಿಗೆ ಸದ್ಯದಲ್ಲೇ ಶುಭ ಸುದ್ದಿ ಸಿಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ