Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 9 ಜುಲೈ 2020 (08:56 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನಕ್ಕಾಗಿ ಕೆಲವು ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ನಿಮ್ಮ ಮಾತಿನಿಂದ ಇತರರಿಗೆ ನೋವಾಗದಂತೆ ನೋಡಿಕೊಳ್ಳಿ. ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ. ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ.

ವೃಷಭ: ವ್ಯಾಪಾರಿಗಳಿಗೆ ನಷ್ಟವಾಗುತ್ತಿದ್ದ ವ್ಯವಹಾರದಲ್ಲಿ ಕೊಂಚ ಮಟ್ಟಿಗಿನ ಸುಧಾರಣೆ ಕಂಡುಬಂದೀತು. ಧನ ಗಳಿಕೆಗೆ ನಾನಾ ಮಾರ್ಗಗಳು ಗೋಚರವಾಗಲಿದೆ. ಮನೆ ರಿಪೇರಿ ಕೆಲಸಗಳಿಗೆ ಮುಂದಾಗಲಿದ್ದೀರಿ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರಲಿವೆ.

ಮಿಥುನ: ಹೊಸ ಉದ್ಯೋಗ ಪಡೆಯಬೇಕೆನ್ನುವ ನಿಮ್ಮ ಕನಸುಗಳಿಗೆ ಅಡೆತಡೆಗಳು ಎದುರಾದೀತು. ಹೊಸ ಮಿತ್ರರ ಸಂಪಾದನೆ ಮಾಡಲಿದ್ದೀರಿ. ಯಾವುದೇ ನಿರ್ಧಾರ ತೆಗೆದುಕೊಳ್ಳುವುದಕ್ಕಿಂತ ಮೊದಲು ಸಂಗಾತಿಯ ಸಲಹೆಗೆ ಕಿವಿಗೊಡಿ.

ಕರ್ಕಟಕ: ವೃತ್ತಿರಂಗದಲ್ಲಿ ಉನ್ನತ ಸ್ಥಾನ ಗಳಿಸುವ ಅವಕಾಶ ಎದುರಾಗಲಿದೆ. ನಯವಾದ ಮಾತುಗಳನ್ನಾಡಿ ನಿಮ್ಮನ್ನು ವಂಚಿಸುವವರು ಇರುತ್ತಾರೆ, ಎಚ್ಚರಿಕೆಯಿರಲಿ. ಮಹಿಳೆಯರಿಗೆ ಗೃಹ ಕೃತ್ಯಗಳಿಂದ ಬಿಡುವು ಸಿಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ಸಿಂಹ: ಜೀವನದಲ್ಲಿ ಸುಖ ದುಃಖ ಎರಡೂ ಸಮನಾಗಿರುತ್ತದೆ. ಎಲ್ಲವನ್ನೂ ಎದುರಿಸುವ ಮನಸ್ಥಿತಿ ಬೆಳೆಸಿಕೊಳ್ಳಬೇಕು. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗಬಹುದು, ಎಚ್ಚರಿಕೆ ಅಗತ್ಯ. ಕಿರು ಸಂಚಾರ ಮಾಡುವಿರಿ.

ಕನ್ಯಾ: ಕೈಗೆ ಬಂದ ವಸ್ತು ಬಾಯಿಗೆ ಬರದ ಸ್ಥಿತಿ ನಿಮ್ಮದಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಹಿತಶತ್ರುಗಳಿಂದಾಗಿ ಉನ್ನತ ಸ್ಥಾನ ಮಾನ ಕೈ ತಪ್ಪಿಹೋಗಬಹುದು. ನಿಮ್ಮ ದುಃಖಗಳನ್ನು ಸಂಗಾತಿಯ ಜತೆ ಹಂಚಿಕೊಳ್ಳಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ದೈವಾನುಕೂಲದಿಂದ ಇಂದು ಎಷ್ಟೇ ಅಡೆತಡೆಗಳಿದ್ದರೂ ನೀವು ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ವೃತ್ತಿರಂಗದಲ್ಲಿ ಕಾರ್ಯ ಸಾಧನೆಗಾಗಿ ಓಡಾಟ ನಡೆಸಬೇಕಾಗುತ್ತದೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು.

ವೃಶ್ಚಿಕ: ಇತರರ ಕೆಲಸಗಳನ್ನು ನೀವು ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಲಿದೆ. ಆದರೆ ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ. ಕೌಟುಂಬಿಕವಾಗಿ ಸಂಗಾತಿ, ಮಕ್ಕಳೊಂದಿಗೆ ಸಂತೋಷದ ಕ್ಷಣ ಅನುಭವಿಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಧನು: ದೇಹಾರೋಗ್ಯದ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಕಂಡುಕೊಳ್ಳಲಿದ್ದೀರಿ. ಸಂಗಾತಿಯ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಮುನ್ನಡೆ ಕಂಡುಬರಲಿದೆ. ನಿರುದ್ಯೋಗಿಗಳು ಹೊಸ ಉದ್ಯೋಗಾವಕಾಶವನ್ನು ಕಂಡುಕೊಳ್ಳಲಿದ್ದಾರೆ.

ಮಕರ: ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಮೂಡಿಬರಲಿದೆ. ಸಾಧು ಸಂತರ ಭೇಟಿ ಸಂಭವ. ಕೌಟುಂಬಿಕವಾಗಿ ನಿರ್ಧಾರ ತೆಗೆದುಕೊಳ್ಳುವಾಗ ಇತರರ ಭಾವನೆಗಳಿಗೆ ಬೆಲೆಕೊಡಿ. ಆಕಸ್ಮಿಕವಾಗಿ ಧನ ಲಾಭ ಪಡೆಯಲಿದ್ದೀರಿ. ಋಣಾತ್ಮಕ ಚಿಂತೆಗಳಿಗೆ ಕಡಿವಾಣ ಹಾಕಿ.

ಕುಂಭ: ನಿಮ್ಮ ವೃತ್ತಿಪರತೆಯಿಂದ ಸಂಭಾವ್ಯ ಅಪಾಯ ತಪ್ಪಿಹೋಗುವುದು. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗುವಿರಿ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಕ್ಷುಲ್ಲುಕ ವಿಚಾರಗಳಿಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮೀನ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ಹಲವು ದಿನಗಳಿಂದ ಯೋಚನೆ ಮಾಡುತ್ತಿದ್ದ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಕಾರ್ಯಗಳು ವಿಳಂಬ ಗತಿಯಲ್ಲಿ ಸಾಗಿದರೂ ಅಂತಿಮ ಜಯ ಸಿಗುವುದು.

Share this Story:

Follow Webdunia kannada

ಮುಂದಿನ ಸುದ್ದಿ

ಹಿರಿಯರ ಈ ಆಚರಣೆಗಳ ಹಿಂದಿರುವ ವೈಜ್ಞಾನಿಕ ಕಾರಣಗಳೇನು ಗೊತ್ತಾ?