Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 9 ಜುಲೈ 2020 (08:56 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನಕ್ಕಾಗಿ ಕೆಲವು ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ನಿಮ್ಮ ಮಾತಿನಿಂದ ಇತರರಿಗೆ ನೋವಾಗದಂತೆ ನೋಡಿಕೊಳ್ಳಿ. ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ. ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ.

ವೃಷಭ: ವ್ಯಾಪಾರಿಗಳಿಗೆ ನಷ್ಟವಾಗುತ್ತಿದ್ದ ವ್ಯವಹಾರದಲ್ಲಿ ಕೊಂಚ ಮಟ್ಟಿಗಿನ ಸುಧಾರಣೆ ಕಂಡುಬಂದೀತು. ಧನ ಗಳಿಕೆಗೆ ನಾನಾ ಮಾರ್ಗಗಳು ಗೋಚರವಾಗಲಿದೆ. ಮನೆ ರಿಪೇರಿ ಕೆಲಸಗಳಿಗೆ ಮುಂದಾಗಲಿದ್ದೀರಿ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರಲಿವೆ.

ಮಿಥುನ: ಹೊಸ ಉದ್ಯೋಗ ಪಡೆಯಬೇಕೆನ್ನುವ ನಿಮ್ಮ ಕನಸುಗಳಿಗೆ ಅಡೆತಡೆಗಳು ಎದುರಾದೀತು. ಹೊಸ ಮಿತ್ರರ ಸಂಪಾದನೆ ಮಾಡಲಿದ್ದೀರಿ. ಯಾವುದೇ ನಿರ್ಧಾರ ತೆಗೆದುಕೊಳ್ಳುವುದಕ್ಕಿಂತ ಮೊದಲು ಸಂಗಾತಿಯ ಸಲಹೆಗೆ ಕಿವಿಗೊಡಿ.

ಕರ್ಕಟಕ: ವೃತ್ತಿರಂಗದಲ್ಲಿ ಉನ್ನತ ಸ್ಥಾನ ಗಳಿಸುವ ಅವಕಾಶ ಎದುರಾಗಲಿದೆ. ನಯವಾದ ಮಾತುಗಳನ್ನಾಡಿ ನಿಮ್ಮನ್ನು ವಂಚಿಸುವವರು ಇರುತ್ತಾರೆ, ಎಚ್ಚರಿಕೆಯಿರಲಿ. ಮಹಿಳೆಯರಿಗೆ ಗೃಹ ಕೃತ್ಯಗಳಿಂದ ಬಿಡುವು ಸಿಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ಸಿಂಹ: ಜೀವನದಲ್ಲಿ ಸುಖ ದುಃಖ ಎರಡೂ ಸಮನಾಗಿರುತ್ತದೆ. ಎಲ್ಲವನ್ನೂ ಎದುರಿಸುವ ಮನಸ್ಥಿತಿ ಬೆಳೆಸಿಕೊಳ್ಳಬೇಕು. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗಬಹುದು, ಎಚ್ಚರಿಕೆ ಅಗತ್ಯ. ಕಿರು ಸಂಚಾರ ಮಾಡುವಿರಿ.

ಕನ್ಯಾ: ಕೈಗೆ ಬಂದ ವಸ್ತು ಬಾಯಿಗೆ ಬರದ ಸ್ಥಿತಿ ನಿಮ್ಮದಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಹಿತಶತ್ರುಗಳಿಂದಾಗಿ ಉನ್ನತ ಸ್ಥಾನ ಮಾನ ಕೈ ತಪ್ಪಿಹೋಗಬಹುದು. ನಿಮ್ಮ ದುಃಖಗಳನ್ನು ಸಂಗಾತಿಯ ಜತೆ ಹಂಚಿಕೊಳ್ಳಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ದೈವಾನುಕೂಲದಿಂದ ಇಂದು ಎಷ್ಟೇ ಅಡೆತಡೆಗಳಿದ್ದರೂ ನೀವು ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ವೃತ್ತಿರಂಗದಲ್ಲಿ ಕಾರ್ಯ ಸಾಧನೆಗಾಗಿ ಓಡಾಟ ನಡೆಸಬೇಕಾಗುತ್ತದೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು.

ವೃಶ್ಚಿಕ: ಇತರರ ಕೆಲಸಗಳನ್ನು ನೀವು ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಲಿದೆ. ಆದರೆ ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ. ಕೌಟುಂಬಿಕವಾಗಿ ಸಂಗಾತಿ, ಮಕ್ಕಳೊಂದಿಗೆ ಸಂತೋಷದ ಕ್ಷಣ ಅನುಭವಿಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಧನು: ದೇಹಾರೋಗ್ಯದ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಕಂಡುಕೊಳ್ಳಲಿದ್ದೀರಿ. ಸಂಗಾತಿಯ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಮುನ್ನಡೆ ಕಂಡುಬರಲಿದೆ. ನಿರುದ್ಯೋಗಿಗಳು ಹೊಸ ಉದ್ಯೋಗಾವಕಾಶವನ್ನು ಕಂಡುಕೊಳ್ಳಲಿದ್ದಾರೆ.

ಮಕರ: ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಮೂಡಿಬರಲಿದೆ. ಸಾಧು ಸಂತರ ಭೇಟಿ ಸಂಭವ. ಕೌಟುಂಬಿಕವಾಗಿ ನಿರ್ಧಾರ ತೆಗೆದುಕೊಳ್ಳುವಾಗ ಇತರರ ಭಾವನೆಗಳಿಗೆ ಬೆಲೆಕೊಡಿ. ಆಕಸ್ಮಿಕವಾಗಿ ಧನ ಲಾಭ ಪಡೆಯಲಿದ್ದೀರಿ. ಋಣಾತ್ಮಕ ಚಿಂತೆಗಳಿಗೆ ಕಡಿವಾಣ ಹಾಕಿ.

ಕುಂಭ: ನಿಮ್ಮ ವೃತ್ತಿಪರತೆಯಿಂದ ಸಂಭಾವ್ಯ ಅಪಾಯ ತಪ್ಪಿಹೋಗುವುದು. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗುವಿರಿ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಕ್ಷುಲ್ಲುಕ ವಿಚಾರಗಳಿಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮೀನ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ಹಲವು ದಿನಗಳಿಂದ ಯೋಚನೆ ಮಾಡುತ್ತಿದ್ದ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಕಾರ್ಯಗಳು ವಿಳಂಬ ಗತಿಯಲ್ಲಿ ಸಾಗಿದರೂ ಅಂತಿಮ ಜಯ ಸಿಗುವುದು.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗಂಡ-ಹೆಂಡತಿ ಸಂಬಂಧ ಚೆನ್ನಾಗಿರಬೇಕೆಂದರೆ ಬೆಡ್ ರೂಂನಲ್ಲಿ ಈ ಚಿತ್ರ ಹಾಕಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments