Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 10 ಜುಲೈ 2020 (08:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅನಗತ್ಯ ವಿಚಾರಗಳಿಗೆ ಹೆಚ್ಚಿನ ಸಮಯ ಹಾಳುಮಾಡಿಕೊಳ್ಳಬೇಡಿ. ಉದ್ಯೋಗ ಕ್ಷೇತ್ರದಲ್ಲಿ ಬಂದ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ. ನಿಮ್ಮ ಕ್ರಿಯಾತ್ಮಕ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ದೇಹಾರೋಗ್ಯದಲ್ಲಿ ಕಾಳಜಿ ಅಗತ್ಯ. ದೇವರ ಪ್ರಾರ್ಥನೆ ಮಾಡಿ.

ವೃಷಭ: ಅಧಿಕಾರಿ ವರ್ಗದವರಿಗೆ ಹೆಚ್ಚಿನ ಜವಾಬ್ಧಾರಿಗಳು ಹೆಗಲಿಗೇರಲಿವೆ. ಕೆಳ ಹಂತದ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾದೀತು. ಸ್ವಯಂ ವ್ಯವಹಾರ ನಡೆಸುವವರಿಗೆ ಮುನ್ನಡೆಯ ಯೋಗವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಪ್ರೀತಿ ಪಾತ್ರರ ಅಗಲುವಿಕೆಯ ನೋವು ಕಾಡಲಿದೆ. ಹೆಚ್ಚಿನ ಸಮಯವನ್ನು ಚಿಂತೆ ಮಾಡುತ್ತಾ ಕುಳಿತರೆ ಯಾವುದೇ ಪ್ರಯೋಜನವಾಗದು. ಆತ್ಮಸ್ಥೈರ್ಯದಿಂದ ಕಾರ್ಯಕ್ಷೇತ್ರದಲ್ಲಿ ಕಾರ್ಯೋನ್ಮುಖವಾಗಬೇಕು. ಹಿತಶತ್ರುಗಳ ಚಾಡಿ ಮಾತುಗಳಿಗೆ ಕಿವಿಗೊಡಬೇಕಿಲ್ಲ.

ಕರ್ಕಟಕ: ಯೋಗ್ಯ ವಯಸ್ಕರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಹಿರಿಯರ ಸಲಹೆಗಳು ಅಪಥ್ಯವೆನಿಸಬಹುದು. ಆದರೆ ಮುಂದೆ ತೊಂದರೆಯಾದಾಗ ಅದು ನಿಮ್ಮ ಉಪಯೋಗಕ್ಕೆ ಬರಲಿದೆ. ಸರಕಾರಿ ಲೆಕ್ಕ ಪತ್ರಗಳ ಬಗ್ಗೆ ನಿಗಾ ವಹಿಸಿ. ವಿದ್ಯಾರ್ಥಿಗಳಿಗೆ ಮುನ್ನಡೆ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ಅನಗತ್ಯ ಕಿರುಕುಳ ಕೊಡುವವರ ಜತೆ ನಿಷ್ಠುರವಾಗಿ ನಡೆದುಕೊಳ್ಳುವುದರಲ್ಲಿ ತಪ್ಪಿಲ್ಲ. ಮಾನಸಿಕವಾಗಿ ಋಣಾತ್ಮಕ ಚಿಂತೆಗಳಿಗೆ ಅವಕಾಶ ಮಾಡಿಕೊಡಬೇಡಿ. ಕಲಾ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗವಿದೆ.

ಕನ್ಯಾ: ಮಕ್ಕಳಿಂದ ಸಂತಸ ಅನುಭವಿಸಲಿದ್ದೀರಿ. ಆದರೆ ಸಂಗಾತಿಯ ಜತೆ ವಿನಾಕಾರಣ ಕಲಹ ಮೈಮೇಲೆಳೆದುಕೊಳ್ಳಬೇಡಿ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಅನಿವಾರ್ಯ ಕಾರಣಗಳಿಗೆ ದೂರ ಸಂಚಾರ ಮಾಡಬೇಕಾಗುತ್ತದೆ. ಎಚ್ಚರಿಕೆಯಿರಲಿ.

ತುಲಾ: ಆರ್ಥಿಕವಾಗಿ ಹಂತ ಹಂತವಾಗಿ ಚೇತರಿಕೆ ಕಂಡುಬರಲಿದ್ದು, ಭೂಮಿ, ಆಸ್ತಿ, ವಾಹನ ಇತ್ಯಾದಿ ಖರೀದಿಗೆ ಮುಂದಾಗಲಿದ್ದೀರಿ. ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸಿ. ನವ ವಿವಾಹಿತರಿಗೆ ಮಧುಚಂದ್ರ ಭಾಗ್ಯ ಕೈ ತಪ್ಪಿಹೋಗಿ ನಿರಾಶೆಯಾಗಬಹುದು.

ವೃಶ್ಚಿಕ: ವೃತ್ತಿರಂಗದಲ್ಲಿ ನಿಮ್ಮ ಏಳಿಗೆಯನ್ನು ತಡೆಯಲು ಯಾರಿಂದಲೂ ಸಾಧ್ಯವಾಗದು. ಆದರೆ ಕ್ಷುಲ್ಲುಕ ಕಾರಣಗಳಿಗೆ ಮಿತ್ರರೊಡನೆ ಘರ್ಷಣೆಗೆ ಇಳಿಯಬೇಡಿ. ಆರ್ಥಿಕ ವಿಚಾರದಲ್ಲಿ ಲೆಕ್ಕಾಚಾರದ ಖರ್ಚು ವೆಚ್ಚಗಳನ್ನು ಮಾಡಬೇಕಾಗುತ್ತದೆ. ತಾಳ್ಮೆಯಿರಲಿ.

ಧನು: ಬೇರೆಯವರ ವಿಚಾರಕ್ಕೆ ಅನಗತ್ಯ ಚಿಂತೆ ಮಾಡುವುದು ಬಿಡಿ. ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ. ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯಲಿದ್ದೀರಿ. ಯೋಗ್ಯ ವಯಸ್ಕರಿಗೆ ಸೂಕ್ತ ಸಂಬಂಧಗಳು ಕೂಡಿಬರಲಿವೆ. ಕುಲದೇವರ ಪ್ರಾರ್ಥನೆ ಮಾಡಿ.

ಮಕರ: ಇದುವರೆಗೆ ನಿಶ್ಚಿತವಾಗಿ ಸಿಗುತ್ತಿದ್ದ ಆದಾಯಕ್ಕೆ ಪೆಟ್ಟು ಬೀಳಲಿದೆ. ಆರ್ಥಿಕವಾಗಿ ಜಾಗರೂಕತೆಯಿಂದ ನಿಭಾಯಿಸುವುದು ಮುಖ್ಯ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶವನ್ನು ಕೈ ಚೆಲ್ಲಬಾರದು.

ಕುಂಭ: ವೃತ್ತಿರಂಗದಲ್ಲಿ ಇದುವರೆಗೆ ಇದ್ದ ತೊಡಕುಗಳು ನಿವಾರಣೆಯಾಗಲಿದೆ. ಮೇಲ್ವರ್ಗದ ಅಧಿಕಾರಿಗಳಿಗೆ ಉನ್ನತ ಹಂತಕ್ಕೇರಲು ಇದುವರೆಗೆ ಇದ್ದ ತೊಂದರೆಗಳು ನಿವಾರಣೆಯಾಗುವುದು. ಮನೆ ಅಥವಾ ವಾಸಸ್ಥಳ ಬದಲಾವಣೆಗೆ ಚಿಂತನೆ ಮಾಡಲಿದ್ದೀರಿ.

ಮೀನ: ಎಷ್ಟೇ ಅಂದುಕೊಂಡರೂ ನೀವು ಅಂದುಕೊಂಡ ರೀತಿಯಲ್ಲಿ ಕೆಲಸ ಸಾಗದೇ ನಿರಾಸೆಯಾಗಬಹುದು. ಆರ್ಥಿಕವಾಗಿ ಲೆಕ್ಕಾಚಾರ ತಲೆಕೆಳೆಗಾಗಬಹುದು. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಹೆಗಲು ಕೊಡಬೇಕಾಗುತ್ತದೆ. ಬಂಧು ಮಿತ್ರರ ಭೇಟಿಯಾಗಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ನಿಮ್ಮ ಮನೆಯಲ್ಲಿ ಅನ್ನದ ಕೊರತೆಯಾಗಬಾರದಂತಿದ್ದರೆ ಪ್ರತಿದಿನ ಅಕ್ಕಿ ತೊಳೆಯುವಾಗ ಹೀಗೆ ಮಾಡಿ