Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 11 ಜುಲೈ 2020 (09:17 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 

ಮೇಷ: ಯಾವುದೇ ಕೆಲಸ ಕಾರ್ಯಗಳಿಗೆ ಅಧಿಕ ಪರಿಶ್ರಮ ಹಾಕಲೇಬೇಕಾಗುತ್ತದೆ. ಇದರಿಂದ ಕೊಂಚ ನಿರಾಸೆಯಾದರೂ ಅಂತಿಮ ಜಯ ನಿಮ್ಮದಾಗುವುದು. ಕಾರ್ಯಕ್ಷೇತ್ರದಲ್ಲಿ ನಿಮ್ಮ ಸ್ಥಾನಕ್ಕೆ ಯಾರೂ ಧಕ್ಕೆ ತರಲಾಗದು. ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ.

ವೃಷಭ: ನೆರೆಹೊರೆಯವರನ್ನು ಮೆಚ್ಚಿಸಲು ಹೋಗಿ ನೀವೇ ತೊಂದರೆಗೆ ಸಿಕ್ಕಿ ಹಾಕಿಕೊಳ್ಳಲಿದ್ದೀರಿ. ವೃತ್ತಿರಂಗದಲ್ಲಿ ಉತ್ತಮ ಅವಕಾಶವನ್ನು ಕೈ ಚೆಲ್ಲಿ ನಿರಾಸೆ ಅನುಭವಿಸಬೇಕಾದೀತು. ಎಚ್ಚರಿಕೆಯಿಂದ ಹೆಜ್ಜೆಯಿಡಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಕೆಲವು ದಿನ ಕಾಯುವುದು ಒಳಿತು.

ಮಿಥುನ: ಯೋಗ್ಯ ವಯಸ್ಕರಿಗೆ ವಿವಾಹ ಪ್ರಸ್ತಾಪಗಳು ಬರಲಿವೆ. ಸರಿಯಾಗಿ ಯೋಚಿಸಿ ಹೆಜ್ಜೆಯಿಡುವುದು ಮುಖ್ಯ. ವಾಮ ಮಾರ್ಗದಿಂದ ಧನ ಗಳಿಕೆಗೆ ಮುಂದಾದರೆ ತೊಂದರೆ ತಪ್ಪಿದ್ದಲ್ಲ. ಕ್ರೀಡಾಪಟುಗಳಿಗೆ ಪ್ರೋತ್ಸಾಹ ದೊರೆಯುವುದು. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.

ಕರ್ಕಟಕ: ಇಷ್ಟು ದಿನ ನೀವು ಮುಚ್ಚಿಟ್ಟುಕೊಂಡಿದ್ದ ರಹಸ್ಯಗಳು ಹೊರಬೀಳಲಿವೆ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು. ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ.

ಸಿಂಹ: ನಿಮ್ಮ ಅಸ್ಪಷ್ಟ ನಿರ್ಧಾರಗಳಿಂದಾಗಿ ವೃತ್ತಿರಂಗದಲ್ಲಿ ಎಡವಿ ಬೀಳುವ ಸಂಭವವಿದೆ. ಹಿರಿಯರ ಸಲಹೆಗಳನ್ನು ಪಾಲಿಸಿ. ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ತಿರುವುಗಳು ಎದುರಾದೀತು. ಧರ್ಮ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ.

ಕನ್ಯಾ: ದಾಂಪತ್ಯದಲ್ಲಿ ಸಣ್ಣ ಪುಟ್ಟ ಅಭಿಪ್ರಾಯ ಬೇಧ ಸಾಮಾನ್ಯ. ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುವ ತಾಳ್ಮೆ ಅಗತ್ಯ. ಕೆಟ್ಟ ಸ್ನೇಹಿತರ ಸಂಗದಿಂದ ದೂರವಿರಿ. ಮಕ್ಕಳೊಂದಿಗೆ ಸಂತೋಷದ ಕಾಲ ಕಳೆಯುವಿರಿ. ತಾಂತ್ರಿಕ ವೃತ್ತಿಯವರಿಗೆ ಬಿಡುವಿಲ್ಲದ ಕೆಲಸ.

ತುಲಾ: ರಾಜಕೀಯವಾಗಿ ಉತ್ತಮ ಸ್ಥಾನ ಮಾನಕ್ಕೆ ಹೋರಾಟವೇ ನಡೆಸಬೇಕಾಗಬಹುದು. ಎಚ್ಚರಿಕೆಯ ಹೆಜ್ಜೆಯಿಡುವುದು ಮುಖ್ಯ. ಆದಾಯಕ್ಕೂ ಮೀರಿ ಖರ್ಚುಗಳಾಗಲಿದ್ದು, ಚಿಂತೆಯಾಗಲಿದೆ. ಕ್ರಿಯಾತ್ಮಕ ಕೆಲಸಗಳಿಗೆ ಚಾಲನೆ ನೀಡಿ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ನಿಮ್ಮ ಸತತ ಪ್ರಯತ್ನಕ್ಕೆ ತಕ್ಕ ಫಲ ಸಿಕ್ಕೇ ಸಿಗುತ್ತದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ಸರಕಾರಿ ಕೆಲಸಕ್ಕಾಗಿ ಪ್ರಯತ್ನ ಮುಂದುವರಿಸಲಿದ್ದೀರಿ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ದಿನದಂತ್ಯಕ್ಕೆ ಅಚ್ಚರಿ.

ಧನು: ನಿಮ್ಮ ಕಷ್ಟಗಳನ್ನು ಬೇರೆಯವರೊಂದಿಗೆ ಹಂಚಿಕೊಳ್ಳುವುದರಿಂದ ಸಮಾಧಾನಗೊಳ್ಳಲಿದ್ದೀರಿ. ಕೋರ್ಟು ಕಚೇರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ಮಕರ: ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಳ್ಳುವುದನ್ನು ಬಿಡಿ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದೆ. ಹೊಸ ವಾಹನ ಖರೀದಿಗೆ ಇದು ಸಕಾಲ. ನವದಂಪತಿಗಳು ಸುಂದರ ಕ್ಷಣ ಕಳೆಯಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಕುಂಭ: ನಿಮ್ಮ ಅವಸರದ ನಿರ್ಧಾರದಿಂದ ಕಾರ್ಯಹಾನಿಯಾದೀತು. ಮನೆಗೆ ನೆಂಟರಿಷ್ಟರ ಆಗಮನವಾಗಲಿದ್ದು, ಸಂಭ್ರಮ ಮನೆ ಮಾಡಲಿದೆ. ಹಿತಶತ್ರುಗಳ ಬಗ್ಗೆ ಹೆಚ್ಚು ಚಿಂತೆ ಮಾಡಬೇಕಾಗಿಲ್ಲ. ಆರ್ಥಿಕವಾಗಿ ಹೆಚ್ಚಿನ ಎಚ್ಚರಿಕೆಯ ಹೆಜ್ಜೆಯಿಡುವುದು ಸೂಕ್ತ.

ಮೀನ: ಮಹಿಳೆಯರಿಗೆ ಉದ್ಯೋಗದಲ್ಲಿ ಉನ್ನತ ಸ್ಥಾನ ಮಾನದ ಭಾಗ್ಯವಿದೆ. ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳುವುದು ಮುಖ್ಯ. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆ ವಹಿಸಬೇಕು. ಅನಿವಾರ್ಯವಾಗಿ ಸಂಚಾರ ಮಾಡಬೇಕಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ನೀವು ಮಾಡುವ ಈ ತಪ್ಪಿನಿಂದ ನಕರಾತ್ಮಕ ಶಕ್ತಿಗಳು ಮನೆಗೆ ಪ್ರವೇಶಿಸುತ್ತವೆ