Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 13 ಜುಲೈ 2020 (09:07 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಂಸಾರಿಕವಾಗಿ ಬೇಡದ ವಿಚಾರಕ್ಕೆ ತಲೆಕೆಡಿಸಿಕೊಳ್ಳುವುದಕ್ಕಿಂತ ಮೌನವಾಗಿರುವುದೇ ಉತ್ತಮ ಎಂಬುದನ್ನು ಮನಗಾಣುವಿರಿ. ಮೇಲಧಿಕಾರಿಗಳೊಂದಿಗೆ ಸಂಘರ್ಷ ನಡೆಯಬಹುದು. ಕಾಲಕ್ಕೆ ತಕ್ಕಂತೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ.

ವೃಷಭ: ನಿಮ್ಮ ಸ್ವ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ‍್ಯತೆಯಿದೆ. ದೂರ ಸಂಚಾರಗಳನ್ನು ಅನಿವಾರ್ಯವಾಗಿ ಮುಂದೂಡಬೇಕಾಗುತ್ತದೆ.  ವಿದ್ಯಾರ್ಥಿಗಳು ಉತ್ತಮ ಫಲ ಕಾಣಲಿದ್ದಾರೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಕೆಲಸ ಕಾರ್ಯದಲ್ಲಿ ಇನ್ನೂ ಹೆಚ್ಚಿನ ಶ್ರದ್ಧೆಯಿಂದ ನಿಭಾಯಿಸಬೇಕಾದ ಅವಶ್ಯಕತೆಯಿದೆ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲು ಹಾತೊರೆಯುವಿರಿ. ಮಹಿಳೆಯರಿಗೆ ಆಕಸ್ಮಿಕ ಧನಲಾಭವಾಗಲಿದೆ. ನಿರುದ್ಯೋಗಿಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಕರ್ಕಟಕ: ಕೌಟುಂಬಿಕವಾಗಿ ಉತ್ತಮ ಸಮಯ ನಿಮ್ಮದಾಗಲಿದೆ. ಯೋಗ್ಯ ವಯಸ್ಕರು ಕಂಕಣ ಬಲ ಪಡೆಯಲಿದ್ದಾರೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ ಬರಲಿದೆ.

ಸಿಂಹ: ಬರುವಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡರೆ ಉತ್ತಮ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕೀತು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಖರೀದಿ ಪ್ರಕ್ರಿಯೆಗಾಗಿ ಧನವ್ಯಯವಾಗಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಕನ್ಯಾ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಕೆಲವೊಂದು ನಿರ್ಧಾರಗಳು ಸಹೋದ್ಯೋಗಿಗಳ ಅಸಮಾಧಾನಕ್ಕೆ ಕಾರಣವಾಗಬಹುದು. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಿದರೂ ಜಯ ನಿಮ್ಮದಾಗಲಿದೆ. ಸಂಗಾತಿಯ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳಬೇಕು.

ತುಲಾ: ಇಷ್ಟು ದಿನದಿಂದ ಕಾಯುತ್ತಿದ್ದ ವಸ್ತು, ಫಲಿತಾಂಶ ನಿಮಗೆ ಸಿಗಲಿದೆ. ಅವಿವಾಹಿತರಿಗೆ ಅಡಚಣೆಗಳಿದ್ದರೂ ವೈವಾಹಿಕ ಭಾಗ್ಯವಿದೆ. ಶುಭ ಮಂಗಲ ಕಾರ್ಯಗಳನ್ನು ಮುಂದೂಡಬೇಕಾಗಬಹುದು.  ಸ್ವಯಂ ವ್ಯವಹಾರ ಮಾಡುವವರಿಗೆ ಉತ್ತಮ ಲಾಭದ ನಿರೀಕ್ಷೆ.

ವೃಶ್ಚಿಕ: ವೃತ್ತಿರಂಗದಲ್ಲಿ ಅಭಿಪ್ರಾಯ ಬೇಧ ಕಲಹಕ್ಕೆ ದಾರಿಯಾದೀತು. ತಾಳ್ಮೆ, ಸಂಯಮದಿಂದ ನಡೆದುಕೊಳ್ಳುವುದು ಮುಖ್ಯ.  ಕೌಟುಂಬಿಕ ವಿಚಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳುವಾಗ ಸಂಗಾತಿಯ ಸಲಹೆ ಪಡೆಯಿರಿ. ಮಕ್ಕಳಿಂದ ಸಂತಸ ಸಿಗಲಿದೆ.

ಧನು: ವೃತ್ತಿರಂಗದಲ್ಲಿ ಇನ್ನಷ್ಟು ಹೆಚ್ಚು ಜವಾಬ್ಧಾರಿಯುತವಾಗಿ ಕೆಲಸ ಮಾಡಬೇಕಾಗುತ್ತದೆ. ನಿಮ್ಮ ಕ್ರಿಯಾತ್ಮಕ ಕೆಲಸಗಳಿಗೆ ಮನ್ನಣೆ ಸಿಗಲಿದೆ. ಕುಟುಂಬ ಸದಸ್ಯರಿಂದ ಮೆಚ್ಚುಗೆ ಪಡೆಯಲಿದ್ದೀರಿ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ.

ಮಕರ: ವೃತ್ತಿರಂಗದಲ್ಲಿ ನಿಮಗೆ ಅರ್ಹ ಸ್ಥಾನ ಸಿಗದೇ ಬೇಸರವಾದೀತು. ಎಲ್ಲದಕ್ಕೂ ಕಾಲ ಕೂಡಿಬರಬೇಕು. ಧಾರ್ಮಿಕ ವಿಚಾರಗಳತ್ತ ಆಸಕ್ತಿ ಮೂಡುವುದು. ಆರ್ಥಿಕವಾಗಿ ಖರ್ಚು ವೆಚ್ಚಗಳಿಗೆ ನಿಯಂತ್ರಣ ಹೇರಬೇಕಾಗಿದೆ. ಕುಲದೇವರ ಪ್ರಾರ್ಥನೆಯಿಂದ ಒಳಿತಾಗುವುದು.

ಕುಂಭ: ತಾಳ್ಮೆ, ಸಹನೆಯಿಂದ ಮುಂದುವರಿದರೆ ವೃತ್ತಿರಂಗವಿರಲಿ, ಕೌಟುಂಬಿಕ ವಿಚಾರವಿರಲಿ ಮೇಲುಗೈ ನಿಮ್ಮದಾಗಲಿದೆ. ನಿರ್ಧಾರಗಳನ್ನು ಕೈಗೊಳ್ಳುವ ಮೊದಲು ಸಂಗಾತಿಯೊಂದಿಗೆ ಪರಾಮರ್ಶೆ ನಡೆಸಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಮೀನ: ಮಹಿಳೆಯರಿಗೆ ಚಿನ್ನಾಭರಣ ಖರೀದಿಯಲ್ಲಿ ವಂಚನೆಗೊಳಗಾಗುವ ಭೀತಿಯಿದೆ. ಅಪರಿಚಿತರೊಂದಿಗೆ ವ್ಯವಹಾರ ಮಾಡುವಾಗ ಎಚ್ಚರಿಕೆಯಿಂದಿರಿ. ವೃತ್ತಿರಂಗದಲ್ಲಿ ಒಂದು ರೀತಿಯ ನಿರಾಸಕ್ತಿ ಮೂಡಲಿದೆ. ಮಾನಸಿಕವಾಗಿ ಋಣಾತ್ಮಕ ಚಿಂತೆಗಳನ್ನು ಬಿಡಿ.

Share this Story:

Follow Webdunia kannada

ಮುಂದಿನ ಸುದ್ದಿ

ಮನೆಯ ಈ ದಿಕ್ಕಿನಲ್ಲಿ ಅಕ್ಕಿ ಇಟ್ಟರೆ ದವಸಧಾನ್ಯಗಳಿಗೆ ಬರ ಬರುವುದಿಲ್ಲ