Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 14 ಜುಲೈ 2020 (08:59 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಮಸ್ಯೆಗಳು ಮೇಲೆ ತೋರಿಬಂದಷ್ಟು ಸುಲಭವೆನಿಸದು. ಕಠಿಣ ಪರಿಶ್ರಮದಿಂದ ಅಂದುಕೊಂಡ ಗುರಿ ಸಾಧನೆ ಮಾಡುವಿರಿ. ಹಳೆಯ ಮಿತ್ರರಿಂದ ಸಹಾಯವಾಗಲಿದೆ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ಎಚ್ಚರಿಕೆ ಅಗತ್ಯ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಆಸ್ತಿ ಸಂಬಂಧ ವ್ಯವಹಾರಗಳಿಂದ ಲಾಭ ಪಡೆಯಬಹುದು. ಆದರೆ ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ವಾಹನ ಸವಾರರಿಗೆ ಚಾಲೆನಯಲ್ಲಿ ಎಚ್ಚರಿಕೆ ಅಗತ್ಯ. ದಾಂಪತ್ಯದಲ್ಲಿ ಹೊಂದಾಣಿಕೆಯಿಂದ ನಡೆದುಕೊಳ್ಳಿ.

ಮಿಥುನ: ಹಣಕಾಸಿನ ಅಡಚಣೆಗಳು ಕಂಡುಬಂದೀತು. ಆದರೂ ವೃತ್ತಿರಂಗದಲ್ಲಿ ಸಮಾಧಾನಕರ  ವಾತಾವರಣವಿರಲಿದೆ. ದೂರ ಪ್ರಯಾಣ ಅನಿವಾರ್ಯವಾಗಿ ಮುಂದೂಡಬೇಕಾಗುತ್ತದೆ. ಉದ್ಯಮಿಗಳಿಗೆ ತಕ್ಕ ಮಟ್ಟಿಗಿನ ಲಾಭ ಕಂಡುಬರಲಿದೆ. ಅವಸರದ ತೀರ್ಮಾನ ಬೇಡ.

ಕರ್ಕಟಕ: ನಿಮ್ಮ ಕೌಶಲ್ಯ ಪ್ರದರ್ಶಿಸಲು ಇದು ಸೂಕ್ತ ಸಮಯ. ಆದರೆ ನಿರ್ಧಾರ ತೆಗೆದುಕೊಳ್ಳುವಾಗ ಸಾಕಷ್ಟು ಯೋಚನೆ ಮಾಡಿ ಮುಂದಡಿಯಿಡಿ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದರಿಂದ ಖರ್ಚಿನ ಬಗ್ಗೆ ಚಿಂತೆ ಮಾಡಬೇಕಾಗಿಲ್ಲ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಪ್ರೀತಿ ಪಾತ್ರರಿಂದ ದೂರವಾಗುವ ನೋವು, ಬೇಸರ ಕಾಡಲಿದೆ. ಉದ್ಯೋಗದ ಬಗ್ಗೆ ಚಿಂತೆ ಕಾಡಲಿದೆ. ಧನ ಗಳಿಕೆಗೆ ನಾನಾ ಮಾರ್ಗಗಳನ್ನು ಹುಡುಕಾಡಲಿದ್ದೀರಿ. ಮಹಿಳೆಯರು ಗೃಹಕೃತ್ಯಗಳಲ್ಲಿ ಮುಳುಗಿಹೋಗಲಿದ್ದಾರೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರುವುದು.

ಕನ್ಯಾ: ಚಿಂತಿತ ಕಾರ್ಯಗಳನ್ನು ಕಾರ್ಯ ರೂಪಕ್ಕೆ ತರಲು ಅಡೆತಡೆಗಳು ಬಂದೀತು. ದೇಹಾರೋಗ್ಯದ ಬಗ್ಗೆ ಚಿಂತೆಯಾದೀತು. ಮಾನಸಿಕವಾಗಿ ಋಣಾತ್ಮಕ ಚಿಂತೆಗಳನ್ನು ಬಿಡಿ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಮೂಡಲಿದೆ.

ತುಲಾ: ದೈವಾನುಕೂಲದಿಂದ ವ್ಯವಹಾರಗಳು ಕೈ ಹಿಡಿಯಲಿದ್ದು, ಉದ್ಯೋಗದಲ್ಲಿ ಉತ್ತಮ ಸ್ಥಾನ ಮಾನ ಪಡೆಯಲಿದ್ದೀರಿ. ಅವಿವಾಹಿತರ ವಿವಾಹ ಮಾತುಕತೆಗಳು ಮುಂದೂಡಿಕೆಯಾಗಬಹುದು. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗವಿದೆ.

ವೃಶ್ಚಿಕ: ವೃತ್ತಿ ಜೀವನದಲ್ಲಿ ಶಿಸ್ತು ಇಟ್ಟುಕೊಂಡರೆ ಯಾರಿಗೂ ಹೆದರಬೇಕಾಗಿಲ್ಲ. ನಿಮ್ಮ ಕ್ರಿಯಾತ್ಮಕ ಯೋಚನೆಗಳಿಂದ ಬರುವಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಪರಸ್ಥಳಗಳಿಗೆ ಪ್ರಯಾಣ ಮಾಡಬೇಕಾಗುತ್ತದೆ. ಎಚ್ಚರಿಕೆ ಅಗತ್ಯ.

ಧನು: ಅವಿವಾಹಿತರಿಗೆ ತೀವ್ರ ಪ್ರಯತ್ನಪಟ್ಟರೆ ಮಾತ್ರ ಸೂಕ್ತ ವಿವಾಹ ಸಂಬಂಧಗಳು ಕೂಡಿಬರಬಹುದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ಸಿಗಲಿವೆ. ಮಾತಿನ ಮೇಲೆ ನಿಗಾ ಇರಲಿ. ಸಂಗಾತಿಯಿಂದ ಅನಿರೀಕ್ಷಿತ ಉಡುಗೊರೆ ಸಿಗಬಹುದು. ಚಿಂತೆ ಬೇಡ.

ಮಕರ: ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಹಣ ಗಳಿಕೆಯ ಮಾರ್ಗಗಳು ಗೋಚರವಾಗಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಸಿಗಲಿದೆ. ವೃತ್ತಿರಂಗದಲ್ಲಿ ಉನ್ನತ ಸ್ಥಾನಕ್ಕೇರುವ ಅವಕಾಶವಿದೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶ ಬಳಸಿಕೊಳ್ಳಬೇಕು.

ಕುಂಭ: ಆರ್ಥಿಕವಾಗಿ ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಗೃಹ ರಿಪೇರಿ ಇತ್ಯಾದಿ ಕೆಲಸಗಳಿಗೆ ಚಾಲನೆ ನೀಡಲು ಇದು ಸಕಾಲ. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆ ವಹಿಸಬೇಕು. ಕುಲದೇವರಿಗೆ ಸಲ್ಲಿಸಬೇಕಾದ ಹರಕೆ ತೀರಿಸಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮೀನ: ಸಾರ್ವಜನಿಕವಾಗಿ ನೀವು ಕೈಗೊಂಡ ಉತ್ತಮ ಕೆಲಸಗಳು ಗುರುತಿಸಲ್ಪಡುವುದು. ಪ್ರೇಮಿಗಳಿಗೆ ಮನೆಯವರಿಂದ ವಿರೋಧ ವ್ಯಕ್ತವಾದೀತು. ವೃತ್ತಿರಂಗದಲ್ಲಿ ಆಲಸ್ಯತನದಿಂದ ಕೆಲಸಗಳಲ್ಲಿ ನಿರಾಸಕ್ತಿ ಮೂಡಲಿದೆ. ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಯಶಸ್ಸು ಸಿಗಬೇಕಾದರೆ ವೈಶಾಖ ಮಾಸದಲ್ಲಿ ಈ ಕೆಲಸ ಮಾಡಬೇಕು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments