Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 16 ಜುಲೈ 2020 (08:57 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನೂತನ ದಂಪತಿಗಳಿಗೆ ಸಂತಾನಫಲ ಸೂಚನೆ ಸಿಗಲಿದೆ. ತಂದೆ-ಮಕ್ಕಳೊಡನೆ ಭಿನ್ನಾಭಿಪ್ರಾಯ ಮೂಡಬಹುದು. ತಾಳ್ಮೆ, ಸಂಯಮದಿಂದ ವರ್ತಿಸಿ. ಗೃಹಿಣಿಯರಿಗೆ ಕಾರ್ಯದೊತ್ತಡದಿಂದ ದೇಹ ಹೈರಾಣಾಗಬಹುದು. ವಿದ್ಯಾರ್ಥಿಗಳಿಗೆ ಮುನ್ನಡೆ.

ವೃಷಭ: ವೃತ್ತಿರಂಗದಲ್ಲಿ ಎಂದೋ ಬಯಸಿದ್ದ ಉನ್ನತ ಸ್ಥಾನ ಮಾನ ಕೊನೆಗೂ ಕೈಗುಟುಕುವ ಕಾಲ ಬರಲಿದೆ. ಯಂತ್ರೋಪಕರಣ ಕೆಲಸ ಮಾಡುವವರಿಗೆ ಹಿನ್ನಡೆಯಾದೀತು. ಅವಿವಾಹಿತರಿಗೆ ವಿವಾಹ ಭಾಗ್ಯವಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ತಾತ್ಕಾಲಿಕ ವೃತ್ತಿಯವರಿಗೆ ಮುನ್ನಡೆಯ ಯೋಗವಿದೆ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ರೈತಾಪಿ ವರ್ಗದವರ ಮೊಗದಲ್ಲಿ ಸಂತಸ ಮೂಡಲಿದೆ. ವ್ಯಾಪಾರ ವ್ಯವಹಾರಗಳು ಸುಗಮವಾಗಿ ನೆರವೇರಲಿದೆ. ಇಷ್ಟ ದೇವರ ಪ್ರಾರ್ಥನೆ ಮಾಡಿ.

ಕರ್ಕಟಕ: ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಹಣಕಾಸಿನ ಮುಗ್ಗಟ್ಟು ತಲೆದೋರಲಿವೆ. ಮಕ್ಕಳಿಗೆ ಸಂತೋಷದಾಯಕ ದಿನವಾಗಿರಲಿದೆ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಸಹಕಾರದ ಕೊರತೆ ಕಂಡುಬರಲಿದೆ. ತಾಳ್ಮೆಯಿರಲಿ.

ಸಿಂಹ: ಇತರರ ಮಾತಿಗೆ ಕಿವಿಗೊಟ್ಟು ಸಂಗಾತಿಯೊಂದಿಗೆ ಮನಸ್ತಾಪ ತಂದುಕೊಳ್ಳಬೇಡಿ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ಉನ್ನತ ವ್ಯಾಸಂಗಕ್ಕಾಗಿ ವಿದ್ಯಾರ್ಥಿಗಳು ಅನ್ಯ ಸ್ಥಳಗಳಿಗೆ ಪ್ರಯಾಣ ಮಾಡಬೇಕಾದೀತು. ಸಂಚಾರದಲ್ಲಿ ಎಚ್ಚರಿಕೆಯಿರಲಿ.

ಕನ್ಯಾ: ಕಟ್ಟಡ ಇತ್ಯಾದಿ ನಿರ್ಮಾಣ ಕಾರ್ಯಗಳಿಗೆ ಚಾಲನೆ ನೀಡಿದ್ದರೆ ಅರ್ಧಕ್ಕೇ ಸ್ಥಗಿತಗೊಳಿಸಬೇಕಾಗುತ್ತದೆ. ವಿಘ್ನಗಳ ನಿವಾರಣೆಗೆ ಕುಲದೇವರ ಪ್ರಾರ್ಥನೆ ಮಾಡಿ. ಹಿರಿಯರಿಗೆ ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು. ತಾಳ್ಮೆಯಿರಲಿ.

ತುಲಾ: ಹಿಂದೆ ಮಾಡಿದ್ದ ಹೂಡಿಕೆಗಳು ಇಂದು ಫಲ ನೀಡಲಿವೆ. ಗೃಹ ನಿರ್ಮಾಣ, ರಿಪೇರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಸ್ಥಿರ ಸೊತ್ತುಗಳ ಖರೀದಿ-ವಿಕ್ರಯ ವ್ಯವಹಾರ ನಡೆಸಲಿದ್ದೀರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಹೊಸ ಚಿಂತನೆಗಳು ಮೂಡಲಿವೆ.

ವೃಶ್ಚಿಕ: ನೆರೆಹೊರೆಯವರ ಮಾತಿಗೆ ಮರುಳಾಗಿ ವ್ಯವಹಾರದಲ್ಲಿ ಕೈ ಹಾಕಿದರೆ ನಷ್ಟ ಅನುಭವಿಸಬೇಕಾದೀತು. ಯಾವುದೇ ವ್ಯವಹಾರದಲ್ಲಿ ಕೈ ಹಾಕುವ ಮೊದಲು ಸಂಗಾತಿಯ ಜತೆ ಪರಾಮರ್ಶೆ ನಡೆಸಿ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಒದಗಿ ಬರಲಿವೆ.

ಧನು: ಪಾಲು ಬಂಡವಾಳ ಹೂಡಿಕೆ ವ್ಯವಹಾರಗಳಿಗೆ ಇದು ಸಕಲಾವಲ್ಲ. ಅಪರಿಚತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಬೇಕು. ವಿಲಾಸೀ ಜೀವನಕ್ಕೆ ಕಡಿವಾಣ ಹಾಕಬೇಕಿದೆ. ವೃತ್ತಿರಂಗದಲ್ಲಿ ಲೆಕ್ಕಾಚಾರದ ಹೆಜ್ಜೆಯಿಟ್ಟರೆ ಮುಂದೆ ಯಶಸ್ಸು.

ಮಕರ: ಕೆಲಸದಲ್ಲಿ ಮೇಲಧಿಕಾರಿಗಳ ಪ್ರಶಂಸೆಯಿಂದ ಸಂತಸವಾಗಲಿದೆ. ಆದರೆ ಮೈಮರೆತರೆ ದೊಡ್ಡ ಪ್ರಮಾದ ಎದುರಿಸಬೇಕಾದೀತು. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ತೆರೆದುಕೊಳ್ಳಲಿದೆ. ಪಾಲಿಗೆ ಬಂದ ಅವಕಾಶಗಳನ್ನು ಬಳಸಿಕೊಳ್ಳಬೇಕು.

ಕುಂಭ: ದುಡುಕು ಬುದ್ಧಿಯಿಂದ ಕೂಡಿಟ್ಟ ಹಣ ಕಳೆದುಕೊಳ್ಳಬೇಕಾದೀತು. ಹಿರಿಯರಿಗೆ ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು. ಆಸ್ಪತ್ರೆಗೆ ಅಲೆದಾಟ ತಪ್ಪದು. ನೀರಿಗಾಗಿ ನೆರೆಹೊರೆಯವರೊಂದಿಗೆ ವಾಗ್ವಾದಗಳಾದೀತು. ದೇವತಾ ಪ್ರಾರ್ಥನೆ ಮಾಡಿ.

ಮೀನ: ಸ್ವಾಭಿಮಾನಕ್ಕೆ ಧಕ್ಕೆ ತರುವ ಘಟನೆಗಳಾದೀತು. ವಾಹನ ಸವಾರರಿಗೆ ಸ್ವಲ್ಪದರಲ್ಲೇ ಅಪಘಾತ ಭಯವಿದೆ. ಉದ್ಯೋಗದಲ್ಲಿ ಬಡ್ತಿ ಸಂಭವವಿದೆ. ಆದರೆ ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ವ್ಯಾಪಾರಿಗಳಿಗೆ ಲಾಭಗಳಾಗಲಿವೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಯಶಸ್ಸು ಸಿಗಬೇಕಾದರೆ ವೈಶಾಖ ಮಾಸದಲ್ಲಿ ಈ ಕೆಲಸ ಮಾಡಬೇಕು

ಮುಂದಿನ ಸುದ್ದಿ
Show comments