Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 17 ಜುಲೈ 2020 (08:59 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೃತ್ತಿರಂಗದಲ್ಲಿ ಹೆಚ್ಚಿನ ಹೊಣೆಗಾರಿಕೆ ನಿಮ್ಮ ಮೇಲೆ ಬೀಳಲಿದೆ. ಜಾಣತನದಿಂದ ನಿಭಾಯಿಸಿ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ. ಅವಿವಾಹಿತರಿಗೆ ವಿವಾಹ ಮಾತುಕತೆಗಳಲ್ಲಿ ಮುನ್ನಡೆ ಸಿಗಲಿದೆ. ಹೊಸ ಆರೋಗ್ಯ ಸಮಸ್ಯೆಗಳು ತಲೆನೋವು ತರಲಿದೆ.

ವೃಷಭ: ರೈತಾಪಿ ವರ್ಗದವರ ಮುಖದಲ್ಲಿ ಸಂತೋಷ ಕಾಣಲಿದೆ. ಆಪ್ತರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ದೂರ ಪ್ರಯಾಣ ಮಾಡಬೇಕಾಗಬಹುದು. ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಒಳಿತಾಗಲಿದೆ.

ಮಿಥುನ: ಮನಸ್ಸಿಗೆ ಇಷ್ಟವಾಗುವವರನ್ನು ಭೇಟಿಯಾಗಲು ನೂರೆಂಟು ಅಡ್ಡಿ ಆತಂಕಗಳು ಎದುರಾಗಲಿವೆ. ಮಾನಸಿಕವಾಗಿ ಋಣಾತ್ಮಕ ಯೋಚನೆಗಳನ್ನು ಬಿಟ್ಟು ಬಿಡಿ. ಬಯಸಿದ್ದು ಸಿಗಬೇಕಾದರೆ ತ್ಯಾಗವೂ ಜತೆಗೇ ಮಾಡಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದ್ದು, ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಾಗದು. ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಸಿಂಹ: ಪ್ರೀತಿ ಪಾತ್ರರೊಂದಿಗೆ ಸುಮಧುರ ಕ್ಷಣ ಕಳೆಯಲು ನೂರೆಂಟು ವಿಘ್ನಗಳು ಎದುರಾದೀತು. ಪ್ರೇಮಿಗಳಿಗೆ ಅಗಲುವಿಕೆಯ ನೋವು ಕಾಡಲಿದೆ. ಆಕಸ್ಮಿಕವಾಗಿ ಧನಲಾಭವಾಗಲಿದೆ. ವೃತ್ತಿರಂಗದಲ್ಲಿ ಸ್ಥಾನ ಪಲ್ಲಟವಾಗುವ ಸಾಧ್ಯತೆಯಿದೆ.

ಕನ್ಯಾ: ಕಾರ್ಯರಂಗದಲ್ಲಿ ನಿಮ್ಮ ಕಾರ್ಯಸಾಧನೆಯಾಗಬೇಕಾದರೆ ಕೆಲವು ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಧರ್ಮ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ನೂತನ ದಂಪತಿಗೆ ಸಂತಸದ ದಿನ.

ತುಲಾ: ವ್ಯಾಪಾರಿಗಳು ವ್ಯವಹಾರದಲ್ಲಿ ನಷ್ಟ ಅನುಭವಿಸಬೇಕಾಗುತ್ತದೆ. ಧನ ಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಧಾರ್ಮಿಕ ಕಾರ್ಯಗಳನ್ನು ನೆರವೇರಿಸಲಿದ್ದೀರಿ. ಮನೆಗೆ ಬಂಧು ಮಿತ್ರರ ಆಗಮನವಾಗಲಿದ್ದು, ಸಂತಸವಿರಲಿದೆ.

ವೃಶ್ಚಿಕ: ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗಬಹುದು. ಕೋರ್ಟು ಕಚೇರಿ ಕಲಾಪಗಳಲ್ಲಿ ಮುನ್ನಡೆ ಸಿಗಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ.

ಧನು: ಮನಸ್ಸಿಗೆ ಖುಷಿ ಕೊಡುವ ಕೆಲಸ ಮಾಡಲಿದ್ದೀರಿ. ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲತೆ ಬೆಳಕಿಗೆ ಬರಲಿದೆ. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗುವಿರಿ. ವಿದ್ಯಾರ್ಥಿಗಳಿಗೆ ಉದಾಸೀನ ಪ್ರವೃತ್ತಿಯಿಂದ ಹಿನ್ನಡೆ ಅನುಭವಿಸಲಿದ್ದೀರಿ.

ಮಕರ: ನಿಮ್ಮ ಅಜಾಗರೂಕತೆಗೆ ತಕ್ಕ ಬೆಲೆ ತೆರಬೇಕಾದೀತು. ವೃತ್ತಿರಂಗದಲ್ಲಿ ಹಿತಶತ್ರುಗಳ ಕಾಟವಿರಲಿದೆ. ಮೈ ಎಲ್ಲಾ ಎಚ್ಚರವಾಗಿ ಕೆಲಸ ಮಾಡಬೇಕಾಗುತ್ತದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ಕಿರು ಓಡಾಟ ನಡೆಸಬೇಕಾಗುತ್ತದೆ.

ಕುಂಭ: ಮಹಿಳೆಯರಿಗೆ ವೃತ್ತಿರಂಗದಲ್ಲಿ ಮುನ್ನಡೆಗೆ ಅವಕಾಶ ದೊರೆಯಲಿದೆ. ಆದರೆ ಬೇರೆಯವರ ವಿಚಾರದಲ್ಲಿ ಮೂಗು ತೂರಿಸಲು ಹೋದರೆ ಅಪವಾದ ಮೈಮೇಲೆ ಬರಬಹುದು. ತಾಳ್ಮೆಯಿಂದ ವರ್ತಿಸಿ. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ.

ಮೀನ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ದೊರೆಯುವುದರಿಂದ ಸಮಸ್ಯೆಗಳನ್ನು ಬಗೆಹರಿಸುವುದು ಸುಲಭವೆನಿಸಲಿದೆ. ಮನೆಯಲ್ಲಿ ನಡೆಯಬೇಕಿದ್ದ ಶುಭ ಮಂಗಲ ಕಾರ್ಯಗಳನ್ನು ಅನಿವಾರ್ಯವಾಗಿ ಮುಂದೂಡಬೇಕಾದೀತು. ದೇವತಾ ಪ್ರಾರ್ಥನೆ ಮಾಡಿ.

Share this Story:

Follow Webdunia kannada

ಮುಂದಿನ ಸುದ್ದಿ

ನಿಮ್ಮ ಮನೆಯಲ್ಲಿ ಸಮೃದ್ಧಿ, ಐಶ್ವರ್ಯ ಶಾಶ್ವತವಾಗಿರಬೇಕೆಂದರೆ ಹಾಲು ಉಕ್ಕುವ ವೇಳೆ ಹೀಗೆ ಮಾಡಿ