Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 22 ಜುಲೈ 2020 (08:40 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡ ಹೆಚ್ಚುವುದು. ಕುಟುಂಬ ಮತ್ತು ವೃತ್ತಿ ಜೀವನ ಸರಿದೂಗಿಸಿಕೊಂಡು ಹೋಗುವುದು ಸವಾಲೆನಿಸಲಿದೆ. ತಾಳ್ಮೆ, ಸಂಯಮ ಅಗತ್ಯ. ಪ್ರೀತಿ ಪಾತ್ರರೊಂದಿಗೆ ದುಃಖ ಹಂಚಿಕೊಳ್ಳಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಷಭ: ಖರ್ಚು ವೆಚ್ಚಗಳ ವಿಚಾರದಲ್ಲಿ ಕೊಂಚ ಬಿಗಿ ಅಗತ್ಯ. ಯಾರಿಗೂ ಸಾಲ ಕೊಡಲು ಹೋಗಬೇಡಿ, ಕೊಟ್ಟರೆ ಮರಳಿ ಬಾರದು. ವೃತ್ತಿರಂಗದಲ್ಲಿ ಸದವಕಾಶಗಳನ್ನು ಹಾಳುಮಾಡಬೇಡಿ. ಅವಿವಾಹಿತರಿಗೆ ಯೋಗ್ಯ ವಿವಾಹ ಪ್ರಸ್ತಾಪಗಳು ಬರಲಿವೆ.

ಮಿಥುನ: ವೃತ್ತಿ ಜೀವನದಲ್ಲಿ ಕಷ್ಟ ಬಂದಾಗ ಹಿಂಜರಿಯದೇ ಆತ್ಮವಿಶ್ವಾಸದಿಂದ ಎದುರಿಸಿ. ನಿಮ್ಮ ಯೋಚನೆಗಳಿಗೆ ಪ್ರಾಮುಖ್ಯತೆ ಸಿಗಲಿದೆ. ಗೃಹ ನವೀಕರಣ ಕೆಲಸಗಳಿಗೆ ಖರ್ಚು ಮಾಡಲಿದ್ದೀರಿ. ವಾಹನ ಖರೀದಿ ಸ್ವಲ್ಪ ದಿನ ಮುಂದೂಡುವುದು ಒಳಿತು.

ಕರ್ಕಟಕ: ಅಲ್ಪರ ಸಂಗದಿಂದ ಮಾನ ಭಂಗ ಎಂಬುದನ್ನು ಮರೆಯಬೇಡಿ. ಯೋಗ್ಯ ಸ್ನೇಹಿತರನ್ನು ಸಂಪಾದಿಸಿ. ಅಪರಿಚಿತರೊಂದಿಗೆ ವ್ಯವಹಾರ ಬೇಡ. ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಸಿಂಹ: ವ್ಯಾಪಾರ, ವ್ಯವಹಾರಗಳಲ್ಲಿ ನಿಮಗೆ ಅನುಕೂಲಕರ ವಾತಾವರಣವಿರಲಿದೆ. ಗೃಹ ಸಂಬಂಧೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಹಿರಿಯರಿಗೆ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಕಂಡುಬಂದೀತು. ಚಿಂತೆ ಬೇಡ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ಕನ್ಯಾ: ಎಷ್ಟೋ ದಿನದಿಂದ ಅಂದುಕೊಂಡಿದ್ದ ಕೆಲಸಗಳು ಇಂದು ಸುಲಭವಾಗಿ ನೆರವೇರಲಿದೆ. ಬೇರೆಯವರ ದುಃಖಗಳಿಗೆ ಹೆಗಲುಗೊಡಲಿದ್ದೀರಿ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗುವುದು.

ತುಲಾ: ರಾಜಕೀಯ ರಂಗದಲ್ಲಿರುವವರಿಗೆ ಬದಲಾವಣೆಗೆ ಅವಕಾಶ ದೊರೆಯಲಿದೆ. ಹೂಡಿಕೆ ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದೆ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಮಾಡಿಕೊಡಬೇಡಿ. ಕಿರು ಸಂಚಾರ ಮಾಡಬೇಕಾಗುತ್ತದೆ.

ವೃಶ್ಚಿಕ: ಕಾರ್ಯರಂಗದಲ್ಲಿ ಇದುವರೆಗೆ ಇದ್ದ ತೊಡಕುಗಳು ನಿವಾರಣೆಯಾಗಲಿವೆ. ಆತ್ಮೀಯರ ಸಹಕಾರದಿಂದ ಕಾರ್ಯರಂಗದಲ್ಲಿ ಉತ್ತಮ ಸಾಧನೆ ಮಾಡಲಿದ್ದೀರಿ. ವಿಶ್ವಾಸ ವಂಚಕರ ಮುಖವಾಡ ಕಳಚಿ ಬೀಳಲಿದೆ. ದೇವತಾ ಪ್ರಾರ್ಥನೆ ಮಾಡಿ.

ಧನು: ದೇಹಾರೋಗ್ಯದಲ್ಲಿ ಹೆಚ್ಚಿನ ಕಾಳಜಿ ಅಗತ್ಯ. ಕೋರ್ಚು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಗಳಿಸಲಿದ್ದೀರಿ. ಮಹಿಳೆಯರಿಂದ ಶುಭ ಫಲಗಳು ಸಿಗಲಿವೆ. ಕೌಟುಂಬಿಕವಾಗಿ ಹೆಚ್ಚಿನ ಹೊಣೆಗಾರಿಕೆ ಹೆಗಲಿಗೆ ಬೀಳಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ.

ಮಕರ: ಒಳ್ಳೆಯ ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಆದರೆ ಅದನ್ನು ನಿಭಾಯಿಸಲು ಅಡೆತಡೆಗಳಿ ಬಂದೀತು. ಎಚ್ಚರಿಕೆಯಿಂದ ನಿಭಾಯಿಸಿ. ಸಾಂಸಾರಿಕವಾಗಿ ಮೆಚ್ಚಿನವರೊಂದಿಗೆ ಕಳೆಯಲು ಸಮಯದ ಅಭಾವ ಕಂಡುಬಂದೀತು.


ಕುಂಭ: ಹಣಕಾಸಿನ ವಿಚಾರವಾಗಿ ಆತ್ಮೀಯರೊಂದಿಗೆ ಸಂಘರ್ಷವಾದೀತು. ಎಚ್ಚರಿಕೆಯಿಂದಿರಿ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಭವಿಷ್ಯದ ಯೋಜನೆಗಳಿಗೆ ಚಾಲನೆ ನೀಡಲಿದ್ದೀರಿ. ಸಂಗಾತಿಯ ಸಹಕಾರ ಸಿಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ಮೀನ: ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಹಿತಶತ್ರುಗಳ ನಯವಾದ ಮಾತಿಗೆ ಮರುಳಾಗಬೇಡಿ. ಮಹಿಳೆಯರಿಗೆ ತವರಿನಿಂದ ಅನಿರೀಕ್ಷಿತ ಉಡುಗೊರೆ ಸಿಗಲಿದೆ. ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹನುಮಾನ್ ಚಾಲೀಸಾ ಓದುವುದರ ಲಾಭಗಳು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ ಈ ಒಂದು ವಸ್ತು ತಂದಿಟ್ಟರೆ ಲಕ್ಷ್ಮಿ ನಿಮ್ಮ ಮನೆಗೆ ಬರುತ್ತಾಳೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರು ಗ್ರಹ ದೋಷ ನಿವಾರಣೆಗೆ ಏನು ಮಾಡಬೇಕು

ಮುಂದಿನ ಸುದ್ದಿ
Show comments