Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 26 ಜುಲೈ 2020 (08:43 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕಾರ್ಯರಂಗದಲ್ಲಿ ನಿಮ್ಮ ಕಾರ್ಯಸಾಧನೆಗೆ ತಕ್ಕ ಅವಕಾಶಗಳು ಒದಗಿಬರಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ವ್ಯಾಪಾರೀ ವರ್ಗದವರಿಗೆ ಕೊಂಚ ನಷ್ಟವಾದೀತು. ಆರ್ಥಿಕ ವಿಚಾರಗಳ ಬಗ್ಗೆ ಸರಿಯಾದ ಯೋಜನೆ ಹಾಕಿಕೊಂಡರೆ ಉತ್ತಮ.

ವೃಷಭ: ಪರ ದೂಷಣೆಯಿಂದ ಯಾವುದೇ ಪ್ರಯೋಜನವಾಗದು. ನಿಮ್ಮ ವೈಯಕ್ತಿಕ ಜೀವನ ಸರಿಪಡಿಸಲು ಮುಂದಾಗಬೇಕು. ಸಾಹಿತ್ಯ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದನೆಗೆ ಯೋಗ ಒದಗಿಬರಲಿದೆ. ಹಿರಿಯರಿಗೆ ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು, ಎಚ್ಚರವಾಗಿರಿ.

ಮಿಥುನ: ವೃತ್ತಿರಂಗದಲ್ಲಿ ಕೆಲಸ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಪ್ರತಿಫಲಾಪೇಕ್ಷೆಯಿಲ್ಲದೇ ಮಾಡುವ ಕೆಲಸದ ಫಲ ನಿಮಗೆ ಒದಗಿಬರಲಿದೆ. ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ಸಂಗಾತಿಯೊಂದಿಗೆ ಹೊಂದಾಣಿಕೆಯಿರಲಿ.

ಕರ್ಕಟಕ: ಏಕಾಂಗಿಯಾಗಿ ಕೈಗೊಳ್ಳುವ ನಿರ್ಧಾರಗಳಿಂದ ಕೈ ಸುಟ್ಟುಕೊಳ್ಳುವ ಪರಿಸ್ಥಿತಿ ಎದುರಾದೀತು. ನಿಮ್ಮ ಕೆಲವೊಂದು ಮಾತುಗಳು ಕುಟುಂಬ ಸದಸ್ಯರ ಬೇಸರಕ್ಕೆ ಕಾರಣವಾಗಬಹುದು. ಮಕ್ಕಳಿಗೆ ಶೈಕ್ಷಣಿಕ ರಂಗದಲ್ಲಿ ಅಭಿವೃದ್ಧಿ ಕಂಡುಬರಲಿದೆ.

ಸಿಂಹ: ಯಾವುದೇ ವಿಚಾರಗಳನ್ನು ಪರಾಮರ್ಶಿಸಿ ಮುನ್ನಡೆಯುವುದು ಮುಖ್ಯ. ನಯವಂಚಕರ ಬಗ್ಗೆ ಎಚ್ಚರಿಕೆಯಿಂದಿರಿ. ಹೂಡಿಕೆ ವ್ಯವಹಾರಗಳು ಕೈ ಹಿಡಿಯಲಿವೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ವೈಯಕ್ತಿಕ ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ಇದ್ದರೂ ಅಂತಿಮ ಜಯ ನಿಮ್ಮದಾಗಲಿದೆ. ಗೃಹ ಸಂಬಂಧೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ.

ತುಲಾ: ನಿಮ್ಮ ಕೆಲಸ ಪೂರ್ತಿಯಾಗಲು ಇತರರ ಮುಂದೆ ತಲೆಬಾಗಲೇ ಬೇಕಾಗುತ್ತದೆ. ಸರಕಾರಿ ಕೆಲಸದಲ್ಲಿರುವವರಿಗೆ ಉನ್ನತ ಸ್ಥಾನ ಮಾನಕ್ಕಾಗಿ ಕಾಯಬೇಕಾಗಬಹುದು. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ಮನಸಿನ ಮಾತಿಗೆ ಕಿವಿಗೊಡಿ.

ವೃಶ್ಚಿಕ: ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯಲು ಹೆಣಗಾಡಬೇಕಾಗುತ್ತದೆ. ಕೆಲಸದೊತ್ತಡದಿಂದ ದೇಹಾಯಾಸವಾಗಲಿದೆ. ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ಗಮನ ಹರಿಸಬೇಕಾಗುತ್ತದೆ. ವಿನಾಕಾರಣ ಚಿಂತೆ ಮಾಡಬೇಕಾಗಿಲ್ಲ.

ಧನು: ಸರಿಯಾದ ಯೋಜನೆಯಿದ್ದರೆ ಯಾವುದೇ ಕೆಲಸದಲ್ಲೂ ಯಶಸ್ಸು ಗಳಿಸಬಹುದು. ಸಹೋದರರಿಂದ ಹೆಣ್ಣು ಮಕ್ಕಳಿಗೆ ಉಡುಗೊರೆಯ ಯೋಗವಿದೆ. ಆಸ್ತಿ ವಿವಾದಗಳಿದ್ದರೆ ಹಿರಿಯರ ಮಧ್ಯಸ್ಥಿಕೆಯಲ್ಲಿ ಬಗೆಹರಿಸಿಕೊಳ್ಳಿ. ಯಾರಿಗೂ ಇಂದು ಸಾಲ ಕೊಡಲು ಹೋಗಬೇಡಿ.

ಮಕರ: ಮಿತ್ರರಿಗೆ ಸಹಾಯ ಮಾಡಲು ಹೋಗುವಿರಿ. ಆದರೆ ಆತುರದ ನಿರ್ಧಾರಗಳು ನಿಮಗೇ ತೊಂದರೆ ಉಂಟುಮಾಡಬಹುದು. ಸಂಗಾತಿಯ ಸಲಹೆಗಳಿಗೆ ಕಿವಿಗೊಡಿ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ.

ಕುಂಭ: ವಿಶೇಷ ವ್ಯಕ್ತಿಗಳ ಭೇಟಿಯಾಗುವ ಯೋಗವಿದೆ. ಎಂದೋ ಅಂದುಕೊಂಡಿದ್ದ ಕೆಲಸಗಳನ್ನು ಪೂರ್ತಿ ಮಾಡಲು ಮುಂದಾಗುವಿರಿ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ದೊರೆಯಲಿದೆ. ಕೌಟುಂಬಿಕವಾಗಿ ನೆಮ್ಮದಿ ಸಂತೋಷವಿರಲಿದೆ.

ಮೀನ: ಹಿರಿಯರಿಂದ ಬಂದ ಬಳವಳಿಗಳನ್ನು ಸಂರಕ್ಷಿಸುವ ಹೊಣೆಗಾರಿಕೆ ನಿಮ್ಮ ಮೇಲಿರಲಿದೆ. ಹಳೆಯ ಮಿತ್ರರನ್ನು ಭೇಟಿಯಾದ ಸಂತೋಷ ಸಿಗಲಿದೆ. ಕಾರ್ಯಸಾಧನೆಗೆ ಹೆಚ್ಚಿನ ಪರಿಶ್ರಮ ಪಡಬೇಕಾಗುತ್ತದೆ. ಬಾಕಿ ಹಣ ವಸೂಲಾಗಲಿದ್ದು, ಆರ್ಥಿಕ ಅಡಚಣೆಗಳು ದೂರವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೆಣ್ಣು ಮಕ್ಕಳಿಗೆ ದೇಹದ ಈ ಭಾಗದಲ್ಲಿ ಮಚ್ಚೆ ಇದ್ದರೆ ಅದೃಷ್ಟ