Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 31 ಜುಲೈ 2020 (08:54 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆದಾಯ ವೃದ್ಧಿಗೆ ಸಾಕಷ್ಟು ಅವಕಾಶಗಳು ಒದಗಿಬರಲಿವೆ. ಉದ್ಯೋಗ ಕ್ಷೇತ್ರದಲ್ಲಿ ನಿಮಗೆ ಸಂಬಂಧ ಪಡದ ವಿಚಾರಗಳ ಬಗ್ಗೆ ಅನಗತ್ಯ ಚಿಂತೆ ಬೇಡ. ದೇಹಾರೋಗ್ಯದಲ್ಲಿ ಸುಧಾರಣೆಯಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ. ದೇವತಾ ಕಾರ್ಯದಲ್ಲಿ ಭಾಗಿಯಾಗುವಿರಿ.

ವೃಷಭ: ವೃತ್ತಿರಂಗದಲ್ಲಿ ನಿಮ್ಮ ಕಾಲೆಳೆಯುವವರ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಬೇಕಾಗಿಲ್ಲ. ನಿಮ್ಮ ಕ್ರಿಯಾತ್ಮಕ ಕೆಲಸಗಳಿಗೆ ಪ್ರಶಂಸೆ ವ್ಯಕ್ತವಾಗಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ.

ಮಿಥುನ: ಮನಸ್ಸಿನಲ್ಲಿ ಅಂದುಕೊಂಡಿದ್ದ ಯೋಜನೆಗಳನ್ನು ಕಾರ್ಯಗತಗೊಳಿಸಲು ಇದು ಸಕಾಲ. ಪೂರ್ವಾಪರ ವಿಚಾರಿಸದೇ ಯಾರೊಂದಿಗೂ ಹಣಕಾಸಿನ ವ್ಯವಹಾರ ಬೇಡ. ಮನೆ ರಿಪೇರಿ ಕೆಲಸಗಳಿಗೆ ಮುಂದಾಗಲಿದ್ದೀರಿ. ಸಂಗಾತಿಯ ಸಲಹೆಗಳನ್ನು ಪಾಲಿಸಬೇಕಾಗುತ್ತದೆ.

ಕರ್ಕಟಕ: ಸಾಂಸಾರಿಕವಾಗಿ ಇಷ್ಟಾರ್ಥ ಸಿದ್ಧಿಗಾಗಿ ಕುಲದೇವರ ಪ್ರಾರ್ಥನೆ ನಡೆಸುವಿರಿ. ದಾಂಪತ್ಯ ಸುಖಕ್ಕೆ ಕೊರತೆಯಿರದು. ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗಲಿದ್ದು, ಹಣ ಗಳಿಕೆಗೆ ಬೇರೆ ಮಾರ್ಗದ ಕುರಿತು ಚಿಂತನೆ ನಡೆಸಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ವ್ಯಾಪಾರಿಗಳಿಗೆ ಆದಾಯ ವೃದ್ಧಿಗೆ ಅವಕಾಶ ಸಿಗಲಿದೆ. ನೆರೆಹೊರೆಯವರ ಚಾಡಿ ಮಾತುಗಳಿಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಬಂಧು ಮಿತ್ರರ ಆಗಮನ ಮನೆಯಲ್ಲಿ ಸಂಭ್ರಮದ ವಾತಾವರಣ ಉಂಟುಮಾಡಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಕನ್ಯಾ: ಅಸಾಧ‍್ಯವೆನಿಸಿದ ಸಂಗತಿಗಳನ್ನೂ ನಿಜ ಮಾಡಲು ಹೊರಡುವಿರಿ. ಆತ್ಮವಿಶ್ವಾಸದಿಂದ ಮುನ್ನಡೆದರೆ ಯಶಸ್ಸು ನಿಮ್ಮದಾಗುವುದು. ಮೇಲಧಿಕಾರಿಗಳ ಮನ ಒಲಿಸುವ ಕೆಲಸ ಮಾಡಬೇಕಾಗುತ್ತದೆ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ.

ತುಲಾ: ಹಣಕಾಸಿನ ಅಡಚಣೆಗಳು ನಿವಾರಣೆಯಾಗಲಿವೆ. ವಾಹನ ಖರೀದಿಗೆ ಮುಂದಾಗಲಿದ್ದೀರಿ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ.

ವೃಶ್ಚಿಕ: ನಿಮ್ಮ ಚಾಣಕ್ಷ್ಯತನದಿಂದ ಬರುವಂತಹ ಕಷ್ಟಗಳನ್ನು ನಿವಾರಿಸಲಿದ್ದೀರಿ. ಕೌಟುಂಬಿಕವಾಗಿ ತಾಳ್ಮೆ, ಸಮಾಧಾನ ಇಲ್ಲದೇ ಹೋದರೆ ಭಿನ್ನಾಭಿಪ್ರಾಯಗಳು ಉಂಟಾಗಬಹುದು. ಅವಿವಾಹಿತರು ಯೋಗ್ಯ ಸಂಬಂಧಕ್ಕಾಗಿ ಕೆಲವು ದಿನ ಕಾಯುವುದು ಒಳಿತು.

ಧನು: ದಾಯಾದಿಗಳ ಬಗ್ಗೆ ಎಚ್ಚರಿಕೆಯಿರಲಿ. ವಿನಾಕಾರಣ ನಿಮ್ಮ ಬಗ್ಗೆ ಅಪವಾದಗಳು ಕೇಳಿಬಂದೀತು. ಹಿರಿಯರ ಸಲಹೆಗಳಿಗೆ ಕಿವಿಗೊಡಿ. ವಿಳಂಬ ಗತಿಯಲ್ಲಾದರೂ ಅಂದುಕೊಂಡ ಕಾರ್ಯಗಳು ನಡೆಯಲಿವೆ. ಕಿರು ಓಡಾಟ ನಡೆಸಬೇಕಾಗುತ್ತದೆ.

ಮಕರ: ಉದ್ಯೋಗ ಕ್ಷೇತ್ರದಲ್ಲಿ ಅನಗತ್ಯ ಕಸರತ್ತು ನಡೆಸಲು ಹೋಗಬೇಡಿ. ಮೇಲಧಿಕಾರಿಗಳ ಸಲಹೆಗಳನ್ನು ಪಾಲಿಸುವುದು ಉತ್ತಮ. ಮನೆಗೆ ಬಂಧು ಮಿತ್ರರ ಆಗಮನವಾಗಲಿದೆ. ಇಷ್ಟ ಭೋಜನ ಮಾಡುವ ಯೋಗವಿದೆ. ಸ್ವ ಹಿತಾಸಕ್ತಿ ಬದಿಗೊತ್ತಿ ಕೆಲಸ ಮಾಡಬೇಕಾಗುತ್ತದೆ.

ಕುಂಭ: ವಿರೋಧಿಗಳ ಕುಕೃತ್ಯಗಳಿಂದ ನಿಮ್ಮ ಉದ್ಯೋಗಕ್ಕೆ ಕುತ್ತು ಬರುವಂತಹ ಸಂದರ್ಭಗಳು ಎದುರಾದೀತು. ಅಗತ್ಯ ಸಂದರ್ಭದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲೇಬೇಕಾಗುತ್ತದೆ. ಸಾಮಾಜಿಕ ಕೆಲಸಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ಮೀನ: ವೃತ್ತಿರಂಗದಲ್ಲಿ ಎಲ್ಲವೂ ನಿಮ್ಮ ನಿಯಂತ್ರಣದಲ್ಲಿಲ್ಲ ಎನಿಸಬಹುದು. ಅವ್ಯವಸ್ಥೆ ಸರಿಪಡಿಸಲು ಮುಂದಾಗುವಿರಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಕಾರ ದೊರೆಯಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಲಿದ್ದು, ಸಂತಸದ ವಾತಾವರಣವಿರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಯಾವ ರಾಶಿಯವರು ತಮ್ಮ ಸಂಗಾತಿಯನ್ನು ಹೇಗೆ ನೋಡಿಕೊಳ್ಳುತ್ತಾರೆ?