ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 1 ಆಗಸ್ಟ್ 2020 (09:09 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ರೈತರಿಗೆ ಉತ್ಸಾಹದಾಯಕ ವಾತಾವರಣವಿರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳು ನಿಮ್ಮ ಕೆಲಸದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವರು. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ.

ವೃಷಭ: ಮನೆಯಲ್ಲಿ ಶುಭಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಆರ್ಥಿಕವಾಗಿ ಹಣಕಾಸಿಗೆ ಕೊರತೆಯಿರದು. ಆದರೆ ಭವಿಷ್ಯದ ಬಗ್ಗೆ ಇಂದೇ ಯೋಜನೆ ರೂಪಿಸುವುದು ಒಳಿತು.

ಮಿಥುನ: ಯಾವುದೇ ವ್ಯಕ್ತಿಯೊಂದಿಗೆ ವ್ಯವಹಾರಿಸುವುದಿದ್ದರೂ ಅವರ ಪೂರ್ವಾಪರ ತಿಳಿದು ಮುನ್ನಡೆಯಿರಿ. ಸಾಲಗಾರರ ಕಾಟದಿಂದ ಮುಕ್ತಿ ಪಡೆಯಲಿದ್ದೀರಿ. ಮೇಲ್ವರ್ಗದ ಅಧಿಕಾರಿಗಳೊಂದಿಗೆ ಭಿನ್ನಾಭಿಪ್ರಾಯಗಳು ಉಂಟಾಗಬಹುದು. ತಾಳ್ಮೆಯಿಂದ ನಿಭಾಯಿಸಿ.

ಕರ್ಕಟಕ: ಸಾಂಸಾರಿಕವಾಗಿ ನಿಮ್ಮ ಬಹುದಿನಗಳ ಇಷ್ಟಾರ್ಥಗಳು ಪೂರೈಕೆಯಾಗಲಿವೆ. ಆರ್ಥಿಕವಾಗಿ ಸಂಪತ್ತು ವೃದ್ಧಿಗೆ ಹೊಸ ದಾರಿಗಳು ಗೋಚರವಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಬೇಕಾಗುತ್ತದೆ. ಕಿರು ಓಡಾಟ ನಡೆಸಲಿದ್ದೀರಿ.

ಸಿಂಹ: ವ್ಯಾಪಾರಿಗಳಿಗೆ ಆದಾಯ ವೃದ್ಧಿಗೆ ಅವಕಾಶಗಳು ಒದಗಿಬರಲಿವೆ. ಕ್ರಿಯಾತ್ಮಕ ಯೋಚನೆಗಳಿಂದ ಮುನ್ನಡೆ ಗಳಿಸಲಿದ್ದೀರಿ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಕೌಟುಂಬಿಕವಾಗಿ ಅನಿರೀಕ್ಷಿತ ಅತಿಥಿಗಳ ಆಗಮನದಿಂದ ಸಂತಸವಾಗಲಿದೆ.

ಕನ್ಯಾ: ಅಸಾಧ್ಯ ವಿಚಾರಗಳನ್ನೂ ಸಾಧ‍್ಯ ಮಾಡಲು ಹೋಗುವಿರಿ. ನಿಮ್ಮ ಹಠವಾದಿ ಧೋರಣೆ ಕೆಲವೊಮ್ಮೆ ಉಪಯೋಗಕ್ಕೆ ಬರಬಹುದು. ಸಂಗಾತಿಯ ಸಲಹೆಗಳನ್ನು ಪಾಲಿಸಿ. ಹೆಣ್ಣು ಮಕ್ಕಳಿಗೆ ತವರಿನಿಂದ ಉಡುಗೊರೆ ಸಿಗಬಹುದು. ಆರೋಗ್ಯದ ಬಗ್ಗೆ ಕಾಳಜಿಯಿರಿಲಿ.

ತುಲಾ: ದಾಯಾದಿ ಕಲಹಗಳು ಅಂತ್ಯವಾಗಲಿದೆ. ಹಿರಿಯರ ದೇಹಾರೋಗ್ಯದ ವಿಚಾರವಾಗಿ ಚಿಂತೆಯಾಗಲಿದೆ. ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾದೀತು. ಸಂಚಾರದಿಂದ ಕಾರ್ಯಸಿದ್ಧಿಯಾಗಲಿದೆ. ನಿರುದ್ಯೋಗಿಗಳು ಉದ್ಯೋಗ ಭೇಟೆ ಮುಂದುವರಿಸಬೇಕಾಗುತ್ತದೆ.

ವೃಶ್ಚಿಕ: ಸಂಗಾತಿಯ ದಿಟ್ಟ ನಿಲುವುಗಳು ನಿಮ್ಮ ಕಷ್ಟದ ಸಮಯದಲ್ಲಿ ಉಪಯೋಗಕ್ಕೆ ಬರಲಿದೆ. ಸರಕಾರಿ ಕೆಲಸದವರಿಗೆ ಉದ್ಯೋಗದಲ್ಲಿ ಕಾರ್ಯದೊತ್ತಡ ಹೆಚ್ಚಲಿದೆ. ಹಿತಶತ್ರುಗಳ ಸಂಚು ಬಯಲಿಗೆ ಬರಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಧನು: ಅತಿಯಾದ ಮಾತು ಮನ ಕೆಡಿಸೀತು. ಕೆಲವೊಮ್ಮೆ ನಿಮ್ಮ ನಿರ್ಧಾರಗಳು ಕುಟುಂಬ ಸದಸ್ಯರ ಅಸಮಾಧಾನಕ್ಕೆ ಕಾರಣವಾದೀತು. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅಗತ್ಯವಿದೆ. ಹೂಡಿಕೆ ವ್ಯವಹಾರದಿಂದ ಲಾಭ ಕಂಡುಕೊಳ್ಳಬಹುದು.

ಮಕರ: ಬಂಧು ಮಿತ್ರರ ಭೇಟಿಯಿಂದ ಮನಸ್ಸಿಗೆ ಉಲ್ಲಾಸವಾಗಲಿದೆ. ಹೊಸ ಬಗೆಯ ಆಲೋಚನೆಗಳು ವೃತ್ತಿರಂಗದಲ್ಲಿ ನಿಮಗೆ ಯಶಸ್ಸು ತಂದುಕೊಡಬಹುದು. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗವಿದೆ. ದಾಂಪತ್ಯದಲ್ಲಿ ಹೊಂದಾಣಿಕೆಯಿರಲಿ.

ಕುಂಭ: ನಿಮ್ಮ ಮಾತಿನಿಂದ ಆತ್ಮೀಯರ ವಿರೋಧ ಕಟ್ಟಿಕೊಳ್ಳಬೇಕಾಗಬಹುದು. ನಿಮ್ಮ ಮನಸ್ಸಿಗೆ ಸರಿ ಎನಿಸಿದ್ದನ್ನೇ ಮಾಡಲಿದ್ದೀರಿ. ಮಹಿಳೆಯರಿಗೆ ಮೇಲ್ವರ್ಗದ ಅಧಿಕಾರಿಗಳಿಂದ ಕಿರಿ ಕಿರಿ ತಪ್ಪದು. ಮಾನಸಿಕ ನೆಮ್ಮದಿಗಾಗಿ ಕುಲದೇವರ ಪ್ರಾರ್ಥಿಸಿ.

ಮೀನ: ಇಷ್ಟ ಮಿತ್ರರ ಭೇಟಿ, ಭೋಜನ ಯೋಗವಿದೆ. ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ವಾಹನ ಸಂಚಾರದಲ್ಲಿ ಅತೀವ ಎಚ್ಚರಿಕೆ ವಹಿಸಿ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಗಮನಹರಿಸಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮಂಗಳವಾರ ದೇವಿಯ ಅನುಗ್ರಹಕ್ಕಾಗಿ ನವರತ್ನ ಮಾಲಿಕಾ ಸ್ತೋತ್ರ

ಶಿವ ಪಂಚಾಕ್ಷರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಈ ಐದು ರಾಶಿಯವರಿಗೆ 2026 ರಲ್ಲಿ ಮದುವೆ ಯೋಗವಿದೆ

ಶನಿವಾರದಂದು ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಲೇ ಬೇಡಿ

ಮುಂದಿನ ಸುದ್ದಿ
Show comments