Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 3 ಆಗಸ್ಟ್ 2020 (08:51 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವ್ಯಾಪಾರಿ ವರ್ಗದವರಿಗೆ ಸಾಲ ಬಾಧೆ ಕಾಡಲಿದೆ. ಧನ ಗಳಿಕೆಗೆ ನಾನಾ ಮಾರ್ಗಗಳನ್ನು ಹುಡುಕಾಡುವಿರಿ. ದೇಹಾರೋಗ್ಯದಲ್ಲಿ ಏರುಪೇರಾಗಲಿದೆ. ಸಂಗಾತಿಯ ಸಲಹೆಗಳಿಗೆ ಕಿವಿಗೊಡಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯವಿದೆ.

ವೃಷಭ: ಯಶಸ್ಸು ಬೇಕಾದರೆ ಪರಿಶ್ರಮವೂ ಅಗತ್ಯ ಎನ್ನುವುದನ್ನು ಮನಗಾಣುವಿರಿ. ಮಾನಸಿಕವಾಗಿ ಆಲಸ್ಯತನ ಬಿಟ್ಟು ಕೆಲಸ ಮಾಡಿ. ಕೃಷಿಕರಿಗೆ ಯಂತ್ರೋಪಕರಣಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ಮಿಥುನ: ಅನಿರೀಕ್ಷಿತವಾಗಿ ಸಂಚಾರ ಮಾಡಬೇಕಾಗಿಬರಲಿದ್ದು, ಖರ್ಚುವೆಚ್ಚಗಳಾಗಲಿವೆ. ಬಂಧು ಬಳಗದವರ ಭೇಟಿಯಿಂದ ಮನಸ್ಸಿಗೆ ಸಂತೋಷವಾಗುವುದು. ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಕಂಡುಬಂದೀತು. ಕಿರು ಓಡಾಟ ನಡೆಸಬೇಕಾಗುತ್ತದೆ.

ಕರ್ಕಟಕ: ಮನೆಯಲ್ಲಿ ಶುಭ ಮಂಗಲ ಕಾರ್ಯದ ಸೂಚನೆ ಸಿಗಲಿದೆ. ಸಹೋದರಿಯ ವಿವಾಹ ಮಾತುಕತೆಗಳು ಫಲಪ್ರದವಾಗಲಿದೆ. ಆರ್ಥಿಕವಾಗಿ ಹಣಕಾಸಿನ ಅಡಚಣೆಗಳು ದೂರವಾಗಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾಗಲಿದೆ.

ಸಿಂಹ: ಕೆಟ್ಟ ಸ್ನೇಹ ಸಂಘದಿಂದ ದೂರವಿರುವುದೇ ಒಳ್ಳೆಯದು. ಸಂಗಾತಿಯ ಹಿತ ವಚನಗಳು ಉಪಯೋಗಕ್ಕೆ ಬರಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿಯಾಗುವುದು.

ಕನ್ಯಾ: ವೃತ್ತಿರಂಗದಲ್ಲಿ ಕಠಿಣ ಪರಿಸ್ಥಿತಿ ಎದುರಿಸುವ ಸಂದರ್ಭ ಒದಗಿಬರುವುದು. ನಿರ್ಧಾರ ಕೈಗೊಳ್ಳುವಾಗ ಹಿರಿಯರೊಂದಿಗೆ ಪರಾಮರ್ಶಿಸಿ ಮುನ್ನಡೆಯಿರಿ. ಆರ್ಥಿಕವಾಗಿ ಲಾಭವಿಲ್ಲದಿದ್ದರೂ ನಷ್ಟವಾಗದು. ಅನಗತ್ಯ ಚಿಂತೆ ಬೇಡ.

ತುಲಾ: ನಿಮ್ಮ ಸ್ನೇಹ ಸಂಗವೇ ನಿಮ್ಮ ಭವಿಷ್ಯ ನಿರ್ಧಾರ ಮಾಡಲಿದೆ. ಆರ್ಥಿಕವಾಗಿ ಅನೇಕ ಖರ್ಚು ವೆಚ್ಚಗಳು ಎದುರಾಗಲಿವೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಕಚೇರಿ ಕೆಲಸಗಳಲ್ಲಿ ಕಾರ್ಯದೊತ್ತಡ ಹೆಚ್ಚಲಿದೆ.

ವೃಶ್ಚಿಕ: ಆದಾಯ ವೃದ್ಧಿಗೆ ನಾನಾ ಮಾರ್ಗಗಳು ಗೋಚರವಾಗಲಿದೆ. ಮನೆ ರಿಪೇರಿ, ವಾಹನ ರಿಪೇರಿ ಇತ್ಯಾದಿ ಕೆಲಸಗಳಿಗೆ ಮುಂದಾಗಲಿದ್ದೀರಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಗಮನಕೊಡಬೇಕಾಗುತ್ತದೆ. ಸಕಾಲದಲ್ಲಿ ಧನಾಗಮನವಾಗುವುದರಿಂದ ಅಂದುಕೊಂಡ ಕೆಲಸ ಸಾಧಿಸುವಿರಿ.

ಧನು: ಇಷ್ಟವಿಲ್ಲದ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದಕ್ಕಿಂತ ಕಷ್ಟವಾದರೂ ಮನಸ್ಸಿಗೆ ಹಿಡಿಸಿದ ಕೆಲಸ ಮಾಡುವುದು ಉತ್ತಮ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಬಳಸಿಕೊಳ್ಳಬೇಕು. ವಿವಾಹ ಮಾತುಕತೆಗಳನ್ನು ಮುಂದೂಡುವುದು ಉತ್ತಮ.

ಮಕರ: ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಲಭ್ಯವಾಗಲಿದೆ. ಮನೆಯಲ್ಲಿ ಸಣ್ಣ ಪುಟ್ಟ ವಿಚಾರಗಳಿಗೆ ಭಿನ್ನಾಭಿಪ್ರಾಯಗಳುಂಟಾಗಬಹುದು. ನಿಮ್ಮ ಮಾತಿನ ಮೇಲೆ ನಿಗಾ ಇಡುವುದು ಉತ್ತಮ. ಶೈಕ್ಷಣಿಕ ರಂಗದಲ್ಲಿರುವವರಿಗೆ ಮುನ್ನಡೆಯ ಯೋಗವಿದೆ.

ಕುಂಭ: ಬಹುದಿನಗಳ ಕನಸು ಈಡೇರಿಸಿಕೊಳ್ಳಲು ಮುಂದಾಗುವಿರಿ. ಮಹಿಳೆಯರಿಗೆ ಉದ್ಯೋಗದಲ್ಲಿ ಬಡ್ತಿ ಯೋಗವಿದೆ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ.

ಮೀನ: ವೃತ್ತಿರಂಗದಲ್ಲಿ ಸ್ಥಾನಪಲ್ಲಟ ಯೋಗವಿದೆ. ನೂತನ ದಂಪತಿಗಳಿಗೆ ಸಂತಾನ ಫಲ ಯೋಗವಿದೆ. ದೇವತಾ ಕಾರ್ಯಕ್ಕೆ ಅಡಚಣೆಗಳು ಉಂಟಾಗಬಹುದು. ನಿರುದ್ಯೋಗಿಗಳು ಬಂದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ದೇವತಾ ಪ್ರಾರ್ಥನೆ ಮಾಡಿ.

Share this Story:

Follow Webdunia kannada

ಮುಂದಿನ ಸುದ್ದಿ

ಮನೆಯಲ್ಲಿ ಸಮಸ್ಯೆಗಳು ಕಾಡಬಾರದಂತಿದ್ದರೆ ಈ ಬಳ್ಳಿಯನ್ನು ಬೆಳೆಸಿ