Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 4 ಆಗಸ್ಟ್ 2020 (09:10 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನೆರೆಹೊರೆಯವರು ನಿಮ್ಮ ಕೆಲಸಗಳಿಗೆ ಅಡ್ಡಗಾಲು ಹಾಕುತ್ತಾರೆ. ಹೊಸ ವಿಚಾರಗಳನ್ನು ಕಲಿತುಕೊಳ್ಳಲು ಉತ್ಸುಕರಾಗುತ್ತೀರಿ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ದೇಹಾರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.

ವೃಷಭ: ಮನಸ್ಸಿಗೆ ಹಿಡಿಸಿದ ಕೆಲಸ ಮಾಡುವುದರಿಂದ ನಿಮಗೂ ಸಂತೃಪ್ತಿ, ಮಾಡಿದ ಕೆಲಸವೂ ಪೂರ್ತಿಯಾಗುವುದು. ಮಹಿಳೆಯರು ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ಮಾಡಲಿದ್ದಾರೆ. ದೇವತಾ ಕಾರ್ಯಗಳಿಂದ ಹಿರಿಯರು ಸಂತೃಪ್ತರಾಗುವರು.

ಮಿಥುನ: ಬಹಳ ದಿನಗಳಿಂದ ಕಾಡುತ್ತಿದ್ದ ಸಾಲದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಿರಿ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ವಾಹನ ಖರೀದಿ ಕನಸನ್ನು ನನಸು ಮಾಡಿಕೊಳ್ಳಲಿದ್ದೀರಿ. ಮಾನಸಿಕವಾಗಿ ಋಣಾತ್ಮಕ ಚಿಂತೆಗಳನ್ನು ಬಿಟ್ಟುಬಿಡಿ.

ಕರ್ಕಟಕ: ಹಿರಿಯರಿಗೆ ಶೀತಬಾಧೆ ಕಂಡುಬರಲಿದ್ದು, ಸಣ್ಣ ಸಮಸ್ಯೆಗಳನ್ನು ಉಪೇಕ್ಷೆ ಮಾಡಬೇಡಿ. ಪಾಲು ವ್ಯವಹಾರದಲ್ಲಿ ಲಾಭ ಕಂಡುಕೊಳ್ಳಲಿದ್ದೀರಿ. ದೇವತಾ ಕಾರ್ಯಗಳಿಗೆ ಅಡ್ಡಿ ಆತಂಕಗಳು ಬಂದರೂ ನಿವಾರಿಸಿ ಮುನ್ನಡೆಯಬೇಕಾಗುತ್ತದೆ. ದಿನದಂತ್ಯಕ್ಕೆ ಸಮಾಧಾನಕರ ಸುದ್ದಿ.

ಸಿಂಹ: ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಸಾಮಾಜಿಕವಾಗಿ ನಿಮ್ಮ ಕೆಲಸ ಕಾರ್ಯಗಳಿಗೆ ಜನಮನ್ನಣೆ ಸಿಗಲಿದೆ. ಸಾಹಿತ್ಯ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗವಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.

ಕನ್ಯಾ: ಅಡಚಣೆಗಳಿದ್ದರೂ ನಿಮ್ಮ ಕಾರ್ಯಸಾಧನೆಗೆ ಯಾವುದೇ ತೊಂದರೆಯಾಗದು. ಕಟ್ಟಡ ಕಾರ್ಮಿಕ ವೃತ್ತಿಯವರಿಗೆ ಮುನ್ನಡೆ ಉಂಟಾಗಲಿದೆ. ಕೌಟುಂಬಿಕವಾಗಿ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳು ಸಾಮಾನ್ಯ. ಅದಕ್ಕೆ ತಲೆಕೆಡಿಸಿಕೊಂಡು ನೆಮ್ಮದಿ ಹಾಳುಮಾಡಿಕೊಳ್ಳಬೇಡಿ.

ತುಲಾ: ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ, ಮರಳಿಬಾರದು. ಆರ್ಥಿಕವಾಗಿ ಖರ್ಚು ವೆಚ್ಚಗಳು ಅಧಿಕವಾಗಲಿದೆ. ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕು. ಪ್ರಾಮಾಣಿಕತೆಗೆ ತಕ್ಕ ಬೆಲೆ ಸಿಗಲಿದೆ. ವಿದ್ಯಾರ್ಥಿಗಳು ಸಾಧನೆಯ ಹಾದಿಯಲ್ಲಿ ಮುನ್ನಡೆ ಗಳಿಸಲಿದ್ದಾರೆ.

ವೃಶ್ಚಿಕ: ದೇವತಾ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗವಿದೆ. ಪೋಷಕ ವರ್ಗದವರಿಗೆ ಮಕ್ಕಳ ಸಾಧನೆ ಖುಷಿ ನೀಡಲಿದೆ. ಆದಾಯಕ್ಕೆ ಕೊರತೆಯಿರದು. ಅಂದುಕೊಂಡ ಕೆಲಸ ಪೂರ್ತಿ ಮಾಡುವಿರಿ.

ಧನು: ಹಣದ ಮುಗ್ಗಟ್ಟಿನಿಂದ ಕೆಲವು ಯೋಜನೆಗಳನ್ನು ಮುಂದೂಡಬೇಕಾಗುತ್ತದೆ. ನಿರಂತರ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ಅನಗತ್ಯ ಚಿಂತೆ, ಉದ್ವೇಗದಿಂದ ಕಾರ್ಯಸಾಧನೆಯಾಗದು.

ಮಕರ: ಆತುರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಸಂಗಾತಿಯ ಸಣ್ಣ ಪುಟ್ಟ ಆಸೆಗಳನ್ನು ಪೂರೈಸುವುದರಿಂದ ಮನಸ್ಸಿಗೆ ಸಂತಸವಾಗಲಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಭರವಸೆ ಸಿಗಲಿದೆ.

ಕುಂಭ: ನೂತನ ಗೆಳೆಯರನ್ನು ಸಂಪಾದಿಸಲಿದ್ದೀರಿ. ನೌಕರ ವರ್ಗದವರಿಗೆ ಆದಾಯ ವೃದ್ಧಿಯಾಗಲಿದೆ. ಸರಕಾರಿ ಉದ್ಯೋಗಲ್ಲಿರುವವರಿಗೆ ಕಾರ್ಯದೊತ್ತಡ ಹೆಚ್ಚುವುದು. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ.

ಮೀನ: ಕೊಡು ಕೊಳ್ಳುವ ವ್ಯವಹಾರದಲ್ಲಿ ಲಾಭ ಗಳಿಸಲಿದ್ದೀರಿ. ಬಂಧು ವರ್ಗದವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಿಲ್ಲ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಾಣಲಿದ್ದೀರಿ. ಸಂಗಾತಿ ಜತೆಗೆ ಅನಗತ್ಯ ಮನಸ್ತಾಪಗಳಿಗೆ ಅವಕಾಶ ಮಾಡಿಕೊಡಬೇಡಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಭವಿಷ್ಯ ಹೀಗಿದೆ