Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 5 ಆಗಸ್ಟ್ 2020 (08:40 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ನಿಮ್ಮ ಸಮಸ್ಯೆಗಳ ಪರಿಹಾರಕ್ಕೆ ಇನ್ನೊಬ್ಬರ ಸಹಾಯ ನಿರೀಕ್ಷಿಸುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲು ಚಡಪಡಿಸುವಿರಿ. ಆರೋಗ್ಯದ ಬಗ್ಗೆ ಅನಗತ್ಯ ಚಿಂತೆ ಬೇಡ.

ವೃಷಭ: ಅವಿವಾಹಿತರಿಗೆ ಅನಿರೀಕ್ಷಿತ ರೀತಿಯಲ್ಲಿ ವಿವಾಹ ಪ್ರಸ್ತಾಪಗಳು ಬರಲಿದೆ. ಮಿತ್ರರ ಪ್ರೀತಿಗೆ ಪಾತ್ರರಾಗಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡವಿರುವುದು. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ನಿಮ್ಮ ಹಿತಶತ್ರುಗಳು ಬೆನ್ನ ಹಿಂದೆ ಮಾಡುತ್ತಿದ್ದ ಸಂಚುಗಳು ಬಯಲಾಗಲಿವೆ. ಆರ್ಥಿಕವಾಗಿ ಲೆಕ್ಕಾಚಾರದ ಹೆಜ್ಜೆಯಿಡದೇ ಇದ್ದರೆ ಮುಂದೆ ತೊಂದರೆ ಅನುಭವಿಸಬೇಕಾದೀತು. ಸರಕಾರಿ ಆದಾಯ ಪತ್ರಗಳ ಲೆಕ್ಕ ಎಚ್ಚರಿಕೆಯಿಂದ ಕಾಪಾಡಿ.

ಕರ್ಕಟಕ: ನಿರಂತರ ಕೆಲಸ ಕಾರ್ಯಗಳಿಂದ ಮನಸ್ಸು, ದೇಹ ಬಳಲಿದಂತಾಗುವುದು. ಅನಗತ್ಯ ಚಿಂತೆಗಳಿಗೆ ಕಡಿವಾಣ ಹಾಕಿ. ವಾಹನ ಚಲಾಯಿಸುವ ಸಂದರ್ಭವನ್ನು ಆದಷ್ಟು ಇಂದಿನ ಮಟ್ಟಿಗೆ ಉಪೇಕ್ಷಿಸಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ದೊರೆಯಲಿದೆ.

ಸಿಂಹ: ದೇವತಾ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಕಂಡುಬರಲಿದೆ. ಅನಗತ್ಯ ವಾದ ವಿವಾದಗಳಿಂದ ದೂರವಿದ್ದಷ್ಟು ಉತ್ತಮ. ಸರಕಾರಿ ಕೆಲಸದಲ್ಲಿರುವವರಿಗೆ ಕಾರ್ಯದೊತ್ತಡ ಅನುಭವಕ್ಕೆ ಬರಲಿದೆ. ಸ್ವಯಂ ಉದ್ಯೋಗಿಗಳಿಗೆ ಲಾಭದ ವರದಾನ ಸಿಗಲಿದೆ.

ಕನ್ಯಾ: ವೃತ್ತಿರಂಗದಲ್ಲಿ ಬದಲಾವಣೆ ಬಯಸುವಿರಿ. ನಿರುದ್ಯೋಗಿಗಳು ಬಯಸಿದ ಉದ್ಯೋಗ ಸಿಗದೇ ನಿರಾಸೆ ಅನುಭವಿಸುವರು. ಆರ್ಥಿಕವಾಗಿ ಹಿತ ಮಿತವಾದ ಖರ್ಚು ಮಾಡಿದಲ್ಲಿ ಉತ್ತಮ. ಪ್ರೀತಿ ಪಾತ್ರರ ಮಾತುಗಳಿಗೆ ಸಾಂತ್ವನ ನೀಡಲಿದೆ.

ತುಲಾ: ದೈನಂದಿನ ಕೆಲಸಗಳಿಂದ ಒಂದು ರೀತಿಯ ವಿರಕ್ತ ಭಾವ ಮೂಡುವುದು. ಕೆಲಸದಲ್ಲಿ ಹೊಸತನ ಬಯಸುವಿರಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಿರದು. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ವೃಶ್ಚಿಕ: ಆರ್ಥಿಕವಾಗಿ ನಿಮ್ಮ ಬಹಳ ದಿನದ ಕನಸನ್ನು ನನಸು ಮಾಡಲಿದ್ದೀರಿ. ಪ್ರೀತಿ ಪಾತ್ರರಿಗೆ ಅಚ್ಚರಿಯ ಉಡುಗೊರೆ ನೀಡುವಿರಿ. ನೂತನ ದಂಪತಿಗಳಿಗೆ ಶೀಘ್ರದಲ್ಲೇ ಸಂತಾನ ಫಲ ಸೂಚನೆ ದೊರೆಯಲಿದೆ. ಸಹೋದ್ಯೋಗಿಗಳ ಜತೆ ಹೊಂದಾಣಿಕೆ ಅಗತ್ಯ.

ಧನು: ನೀವು ಹೇಳಿದ್ದೇ ಆಗಬೇಕು ಎನ್ನುವ ಹಠದ ಮನೋಭಾವ ಕೆಲಸ ಮಾಡದು. ನಿಮ್ಮ ಮುನ್ನಡೆಗೆ ಸಹಕಾರಿಯಾಗುವಂತಹ ಕೆಲಸ ಮಾಡಬೇಕಾಗುತ್ತದೆ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ಆದಾಯಕ್ಕೆ ಕೊರತೆಯಿರದು.

ಮಕರ: ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಪ್ರೇಮಿಗಳಿಗೆ ಹಿರಿಯರ ಒಪ್ಪಿಗೆ ಸಿಗಲಿದೆ. ಉದ್ಯೋಗಿಗಳು ಸದ್ಯದ ಮಟ್ಟಿಗೆ ಇದ್ದ ಕೆಲಸಕ್ಕೆ ತೃಪ್ತಿ ಪಟ್ಟುಕೊಳ್ಳುವುದು ಉತ್ತಮ. ಅನಗತ್ಯ ಆಸೆಗಳಿಗೆ ಬಲಿಯಾಗಬೇಡಿ. ವಂಚಕರಿಂದ ದೂರವಿರಿ.

ಕುಂಭ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ತೋರಿಬರಲಿದೆ. ಹಾಗಿದ್ದರೂ ಪರಿಸ್ಥಿತಿಗೆ ತಕ್ಕಂತೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಪ್ರೀತಿ ಪಾತ್ರರ ಮನಸ್ಸಿಗೆ ನಿಮ್ಮ ಕೆಲವೊಂದು ಮಾತುಗಳು ನೋವುಂಟುಮಾಡೀತು. ತಾಳ್ಮೆಯಿಂದಿರಿ.

ಮೀನ: ಬೇರೆಯವರ ವಿಚಾರದ ಬಗ್ಗೆ ಅನಗತ್ಯ ಚಿಂತೆ ಮಾಡುವುದನ್ನು ಬಿಟ್ಟು ಸ್ವಯಂ ಅಭಿವೃದ್ಧಿ ಕಡೆಗೆ ಗಮನ ಕೊಡಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಭವಿಷ್ಯ ಹೀಗಿದೆ