Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 5 ಆಗಸ್ಟ್ 2020 (08:40 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ನಿಮ್ಮ ಸಮಸ್ಯೆಗಳ ಪರಿಹಾರಕ್ಕೆ ಇನ್ನೊಬ್ಬರ ಸಹಾಯ ನಿರೀಕ್ಷಿಸುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲು ಚಡಪಡಿಸುವಿರಿ. ಆರೋಗ್ಯದ ಬಗ್ಗೆ ಅನಗತ್ಯ ಚಿಂತೆ ಬೇಡ.

ವೃಷಭ: ಅವಿವಾಹಿತರಿಗೆ ಅನಿರೀಕ್ಷಿತ ರೀತಿಯಲ್ಲಿ ವಿವಾಹ ಪ್ರಸ್ತಾಪಗಳು ಬರಲಿದೆ. ಮಿತ್ರರ ಪ್ರೀತಿಗೆ ಪಾತ್ರರಾಗಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡವಿರುವುದು. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ನಿಮ್ಮ ಹಿತಶತ್ರುಗಳು ಬೆನ್ನ ಹಿಂದೆ ಮಾಡುತ್ತಿದ್ದ ಸಂಚುಗಳು ಬಯಲಾಗಲಿವೆ. ಆರ್ಥಿಕವಾಗಿ ಲೆಕ್ಕಾಚಾರದ ಹೆಜ್ಜೆಯಿಡದೇ ಇದ್ದರೆ ಮುಂದೆ ತೊಂದರೆ ಅನುಭವಿಸಬೇಕಾದೀತು. ಸರಕಾರಿ ಆದಾಯ ಪತ್ರಗಳ ಲೆಕ್ಕ ಎಚ್ಚರಿಕೆಯಿಂದ ಕಾಪಾಡಿ.

ಕರ್ಕಟಕ: ನಿರಂತರ ಕೆಲಸ ಕಾರ್ಯಗಳಿಂದ ಮನಸ್ಸು, ದೇಹ ಬಳಲಿದಂತಾಗುವುದು. ಅನಗತ್ಯ ಚಿಂತೆಗಳಿಗೆ ಕಡಿವಾಣ ಹಾಕಿ. ವಾಹನ ಚಲಾಯಿಸುವ ಸಂದರ್ಭವನ್ನು ಆದಷ್ಟು ಇಂದಿನ ಮಟ್ಟಿಗೆ ಉಪೇಕ್ಷಿಸಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ದೊರೆಯಲಿದೆ.

ಸಿಂಹ: ದೇವತಾ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಕಂಡುಬರಲಿದೆ. ಅನಗತ್ಯ ವಾದ ವಿವಾದಗಳಿಂದ ದೂರವಿದ್ದಷ್ಟು ಉತ್ತಮ. ಸರಕಾರಿ ಕೆಲಸದಲ್ಲಿರುವವರಿಗೆ ಕಾರ್ಯದೊತ್ತಡ ಅನುಭವಕ್ಕೆ ಬರಲಿದೆ. ಸ್ವಯಂ ಉದ್ಯೋಗಿಗಳಿಗೆ ಲಾಭದ ವರದಾನ ಸಿಗಲಿದೆ.

ಕನ್ಯಾ: ವೃತ್ತಿರಂಗದಲ್ಲಿ ಬದಲಾವಣೆ ಬಯಸುವಿರಿ. ನಿರುದ್ಯೋಗಿಗಳು ಬಯಸಿದ ಉದ್ಯೋಗ ಸಿಗದೇ ನಿರಾಸೆ ಅನುಭವಿಸುವರು. ಆರ್ಥಿಕವಾಗಿ ಹಿತ ಮಿತವಾದ ಖರ್ಚು ಮಾಡಿದಲ್ಲಿ ಉತ್ತಮ. ಪ್ರೀತಿ ಪಾತ್ರರ ಮಾತುಗಳಿಗೆ ಸಾಂತ್ವನ ನೀಡಲಿದೆ.

ತುಲಾ: ದೈನಂದಿನ ಕೆಲಸಗಳಿಂದ ಒಂದು ರೀತಿಯ ವಿರಕ್ತ ಭಾವ ಮೂಡುವುದು. ಕೆಲಸದಲ್ಲಿ ಹೊಸತನ ಬಯಸುವಿರಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಿರದು. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ವೃಶ್ಚಿಕ: ಆರ್ಥಿಕವಾಗಿ ನಿಮ್ಮ ಬಹಳ ದಿನದ ಕನಸನ್ನು ನನಸು ಮಾಡಲಿದ್ದೀರಿ. ಪ್ರೀತಿ ಪಾತ್ರರಿಗೆ ಅಚ್ಚರಿಯ ಉಡುಗೊರೆ ನೀಡುವಿರಿ. ನೂತನ ದಂಪತಿಗಳಿಗೆ ಶೀಘ್ರದಲ್ಲೇ ಸಂತಾನ ಫಲ ಸೂಚನೆ ದೊರೆಯಲಿದೆ. ಸಹೋದ್ಯೋಗಿಗಳ ಜತೆ ಹೊಂದಾಣಿಕೆ ಅಗತ್ಯ.

ಧನು: ನೀವು ಹೇಳಿದ್ದೇ ಆಗಬೇಕು ಎನ್ನುವ ಹಠದ ಮನೋಭಾವ ಕೆಲಸ ಮಾಡದು. ನಿಮ್ಮ ಮುನ್ನಡೆಗೆ ಸಹಕಾರಿಯಾಗುವಂತಹ ಕೆಲಸ ಮಾಡಬೇಕಾಗುತ್ತದೆ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ಆದಾಯಕ್ಕೆ ಕೊರತೆಯಿರದು.

ಮಕರ: ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಪ್ರೇಮಿಗಳಿಗೆ ಹಿರಿಯರ ಒಪ್ಪಿಗೆ ಸಿಗಲಿದೆ. ಉದ್ಯೋಗಿಗಳು ಸದ್ಯದ ಮಟ್ಟಿಗೆ ಇದ್ದ ಕೆಲಸಕ್ಕೆ ತೃಪ್ತಿ ಪಟ್ಟುಕೊಳ್ಳುವುದು ಉತ್ತಮ. ಅನಗತ್ಯ ಆಸೆಗಳಿಗೆ ಬಲಿಯಾಗಬೇಡಿ. ವಂಚಕರಿಂದ ದೂರವಿರಿ.

ಕುಂಭ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ತೋರಿಬರಲಿದೆ. ಹಾಗಿದ್ದರೂ ಪರಿಸ್ಥಿತಿಗೆ ತಕ್ಕಂತೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಪ್ರೀತಿ ಪಾತ್ರರ ಮನಸ್ಸಿಗೆ ನಿಮ್ಮ ಕೆಲವೊಂದು ಮಾತುಗಳು ನೋವುಂಟುಮಾಡೀತು. ತಾಳ್ಮೆಯಿಂದಿರಿ.

ಮೀನ: ಬೇರೆಯವರ ವಿಚಾರದ ಬಗ್ಗೆ ಅನಗತ್ಯ ಚಿಂತೆ ಮಾಡುವುದನ್ನು ಬಿಟ್ಟು ಸ್ವಯಂ ಅಭಿವೃದ್ಧಿ ಕಡೆಗೆ ಗಮನ ಕೊಡಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments