Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 10 ಆಗಸ್ಟ್ 2020 (08:56 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಹೊಸ ಚಿಂತನೆಗಳನ್ನು ಕಾರ್ಯಗತಗೊಳಿಸಲು ಸ್ವಲ್ಪ ಸಮಯ ಬೇಕಾಗುತ್ತದೆ. ಹೊಸ ಬಂಡವಾಳ ಹೂಡಿಕೆಗೆ ಕೆಲವು ದಿನ ಕಾಯುವುದು ಉತ್ತಮ. ಸಂಗಾತಿಯ ಕಷ್ಟಗಳಿಗೆ ಜತೆಯಾಗಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗಬಹುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಸಣ್ಣ ಪುಟ್ಟ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡಿಬರಲಿದೆ. ಸಕಾಲದಲ್ಲಿ ಧನಾಗಮನವಾಗುವುದರಿಂದ ಕಾರ್ಯಕ್ಷೇತ್ರದಲ್ಲಿ ಮುನ್ನಡೆ ತೋರಿಬರಲಿದೆ. ಮಕ್ಕಳೊಡನೆ ಅನಗತ್ಯ ಭಿನ್ನಾಭಿಪ್ರಾಯ ಬೇಡ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮಿಥುನ: ಇಷ್ಟಾರ್ಥ ಸಿದ್ಧಿಗಾಗಿ ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿ. ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಮನಸ್ಸಿಗೆ ಹಿಡಿಸಿದ ಸಂಬಂಧಗಳು ಕೂಡಿಬರಲಿವೆ. ಅತಿಥಿಗಳ ಆಗಮನದಿಂದ ಮನೆಯಲ್ಲಿ ಸಂತಸವಿರುವುದು.

ಕರ್ಕಟಕ: ವೃತ್ತಿರಂಗದಲ್ಲಿ ನಾನಾ ರೀತಿಯ ಸಮಸ್ಯೆಗಳು ಎದುರಾದೀತು. ಧನಹಾನಿ ಸಂಭವವಿದೆ. ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು. ಯಾವುದೇ ವಿಚಾರಗಳನ್ನು ಹಿರಿಯರೊಂದಿಗೆ ಚರ್ಚಿಸಿ ಮುನ್ನಡೆಯಿರಿ. ಕೋರ್ಟು ಕಚೇರಿ ಕಲಾಪಗಳಿಗೆ ಓಡಾಡಬೇಕಾಗುತ್ತದೆ.

ಸಿಂಹ: ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಎದುರಾಗಲಿದೆ. ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದ್ದು, ಮನಸ್ಸಿಗೆ ಸಂತಸವಾಗುವುದು. ಆತ್ಮೀಯರೊಂದಿಗೆ ಸುಮಧುರ ಕ್ಷಣ ಕಳೆಯಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಿರಿ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರದಿಂದ ಅಂದುಕೊಂಡ ಕೆಲಸ ನೆರವೇರಿಸಲಿದ್ದೀರಿ. ದೈನಂದಿನ ಕೆಲಸಗಳಲ್ಲಿ ವಿಘ್ನಗಳು ಕಂಡುಬಂದೀತು. ವಾಹನ ಸವಾರರು ಚಾಲನೆಯಲ್ಲಿ ಎಚ್ಚರದಿಂದಿರಬೇಕು. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ.

ತುಲಾ: ಅನವಶ್ಯಕವಾಗಿ ಕೊರಗುತ್ತಾ ಕೂತರೆ ಕೆಲಸದಲ್ಲಿ ನಿರುತ್ಸಾಹ ಮೂಡುವದಷ್ಟೇ ಹೊರತು ಇನ್ಯಾವುದೇ ಪ್ರಯೋಜನವಾಗದು. ಹಿರಿಯರ ಬಳವಳಿಗಳನ್ನು ಸಂರಕ್ಷಿಸುವ ಹೊಣೆಗಾರಿಕೆ ಹೆಗಲಿಗೇರಲಿದೆ. ಆರ್ಥಿಕವಾಗಿ ಸುಧಾರಣೆ ಕಂಡುಬರುವುದು.

ವೃಶ್ಚಿಕ: ಸಂಗಾತಿಗೆ ಅನಿರೀಕ್ಷಿತ ಉಡುಗೊರೆ ನೀಡುವ ಮೂಲಕ ಸಂತಸ ನೀಡಲಿದ್ದೀರಿ. ನಿರೀಕ್ಷಿತ ರೀತಿಯಲ್ಲಿ ಕಾರ್ಯಸಾಧನೆಯಾಗುವುದರಿಂದ ಮನಸ್ಸಿಗೆ ಸಂತಸವಾಗಲಿದೆ. ಅವಿವಾಹಿತರಿಗೆ ಶೀಘ‍್ರ ಕಂಕಣ ಭಾಗ್ಯ ಕೂಡಿಬರಲಿದೆ.

ಧನು: ನೆರೆಹೊರೆಯವರು ನಿಮ್ಮ ಗುಟ್ಟು ತಿಳಿದುಕೊಳ್ಳಲು ಕಾದಿರುತ್ತಾರೆ. ಸಂಗಾತಿಯ ಮಾತಿಗೆ ಕಿವಿಗೊಡಿ. ನಿಮ್ಮ ಉಪೇಕ್ಷೆಯಿಂದ ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಎಚ್ಚರಿಕೆ ವಹಿಸಿ. ಮಕ್ಕಳಿಂದ ಸಂತಸದ ವಾರ್ತೆ ಕೇಳಿಬರಲಿದೆ.

ಮಕರ: ಬಹಳ ದಿನಗಳ ನಂತರ ಹಳೆಯ ಮಿತ್ರನನ್ನು ಭೇಟಿಯಾದ ಸಂತೋಷ ಸಿಗಲಿದೆ. ಇಷ್ಟ ಭೋಜನ ಮಾಡಲಿದ್ದೀರಿ. ದೂರ ಸಂಚಾರಗಳನ್ನು ಕೆಲವು ದಿನಗಳ ಮಟ್ಟಿಗೆ ಮುಂದೂಡುವುದು ಉತ್ತಮ. ದಾಂಪತ್ಯ ಸುಖ ನಿಮ್ಮದಾಗಲಿದೆ. ಉದಾಸೀನ ಪ್ರವೃತ್ತಿ ಬಿಡಿ.

ಕುಂಭ: ಸಾಂಸಾರಿಕವಾಗಿ ಹಲವು ಏರುಪೇರುಗಳಾಗಲಿವೆ. ಸಂಗಾತಿಯ ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಆರ್ಥಿಕವಾಗಿ ಅನಿರೀಕ್ಷಿತ ಖರ್ಚುಗಳಿದ್ದರೂ ಆದಾಯಕ್ಕೆ ಕೊರತೆಯಿರದು. ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗ ಕಂಡುಕೊಳ್ಳಲಿದ್ದೀರಿ.

ಮೀನ: ವಿದ್ಯಾರ್ಥಿಗಳು ತಮ್ಮ ಪರಿಶ್ರಮಕ್ಕೆ ತಕ್ಕ ಫಲ ಪಡೆಯಲಿದ್ದಾರೆ. ಹಿರಿಯರ ಸೂಕ್ತ ಸಲಹೆಗಳು ಉಪಯೋಗಕ್ಕೆ ಬರಲಿವೆ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ವೃತ್ತಿರಂಗದಲ್ಲಿ ಉಂಟಾಗಿರುವ ಸಮಸ್ಯೆ ಪರಿಹಾರಕ್ಕೆ ಮುಂದಾಗಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಭವಿಷ್ಯ ಹೀಗಿದೆ