Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 11 ಆಗಸ್ಟ್ 2020 (08:45 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ದೀರ್ಘ ಕಾಲದಿಂದ ಮನಸ್ಸಿನಲ್ಲಿ ಅಂದುಕೊಂಡಿದ್ದ ಇಚ್ಛೆ ಪೂರ್ತಿಯಾಗಲಿದೆ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಸಂಗಾತಿಯೊಂದಿಗೆ ಅನಗತ್ಯ ಸಂಘರ್ಷ ಬೇಡ. ಹಿರಿಯರ ಆರೋಗ್ಯ ಚಿಂತೆಗೆ ಕಾರಣವಾಗಬಹುದು.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸಕ್ಕೆ ಸಹೋದ್ಯೋಗಿಗಳ ಸಹಕಾರ ಸಿಗದೇ ನಿರಾಸೆಯಾಗಬಹುದು. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆ ವಹಿಸುವುದು ಅಗತ್ಯ. ಆರ್ಥಿಕವಾಗಿ ಹಣಕಾಸಿನ ಸಮಸ್ಯೆಯಿರದು. ಆದರೆ ದುಂದುವೆಚ್ಚ ಬೇಡ.

ಮಿಥುನ: ವಾಹನ, ಭೂಮಿ ಇತ್ಯಾದಿ ಸುಖ ಸೌಕರ್ಯ ಖರೀದಿಗೆ ಇದು ಸಕಾಲ. ನಾನಾ ಮೂಲಗಳಿಂದ ಧನಾಗಮನವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲ್ವರ್ಗದ ಅಧಿಕಾರಿಗಳಿಂದ ಒತ್ತಡವಿರಲಿದೆ. ತಾಳ್ಮೆಯಿಂದ ನಿಭಾಯಿಸಿ.

ಕರ್ಕಟಕ: ನೆರೆಹೊರೆಯವರು ನಿಮ್ಮ ವೈಯಕ್ತಿಕ ವಿಚಾರದಲ್ಲಿ ಮಧ್ಯಪ್ರವೇಶಿಸಲು ಯತ್ನಿಸುತ್ತಾರೆ. ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ಆರ್ಥಿಕವಾಗಿ ಸಾಲ ಮರುಪಾವತಿಗೆ ಮುಂದಾಗಲಿದ್ದೀರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಸಿಂಹ: ನಿಮ್ಮ ಬದುಕಿನಲ್ಲಿ ನೀವು ಅಂದುಕೊಂಡಿದ್ದು ನೆರವೇರುವ ದಿನ ಸದ್ಯದಲ್ಲೇ ಇದೆ. ಇದರ ಉಪಯೋಗ ಮಾಡಿಕೊಳ್ಳಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಮನೆಗೆ ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನವಾಗಲಿದೆ.

ಕನ್ಯಾ: ವೃತ್ತಿರಂಗದಲ್ಲಿ ಒತ್ತಡ ಕೊಂಚ ಮಟ್ಟಿಗೆ ಕಡಿಮೆಯಾಗಲಿದೆ. ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಬೇರೆ ಬೇರೆ ಮಾರ್ಗಗಳ ಬಗ್ಗೆ ಯೋಚನೆ ಮಾಡುವಿರಿ. ಹಿಂದೆ ಮಾಡಿದ ತಪ್ಪುಗಳ ಬಗ್ಗೆ ಯೋಚಿಸುತ್ತಾ ಕೂರಬೇಡಿ. ಸಂಗಾತಿಯ ಜತೆಗೆ ಸುಮಧುರ ಕ್ಷಣ ಕಳೆಯಲಿದ್ದೀರಿ.

ತುಲಾ: ನಿಮ್ಮ ಮಾತಿನ ಮೇಲೆ ನಿಗಾ ವಹಿಸದೇ ಇದ್ದರೆ ಸಂಬಂಧಗಳು ಹಾಳಾಗಬಹುದು. ವೃತ್ತಿರಂಗದಲ್ಲಿ ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ವೃಶ್ಚಿಕ: ನಿಮ್ಮನ್ನು ಅಸಡ್ಡೆ ಮಾಡುವವರು ಅಚ್ಚರಿಪಡುವಂತೆ ಬೆಳವಣಿಗೆ ಹೊಂದಲಿದ್ದೀರಿ. ಚಾಡಿ ಮಾತುಗಳನ್ನು ಅಲಕ್ಷಿಸುವುದು ಉತ್ತಮ. ಸಂಗಾತಿಗೆ ಉಡುಗೊರೆ ನೀಡುವ ಮೂಲಕ ಸಂತೋಷ ನೀಡಲಿದ್ದೀರಿ. ಶೀಘ್ರದಲ್ಲೇ ಸಂತಾನ ಭಾಗ್ಯವಿದೆ.

ಧನು: ಎಷ್ಟೇ ಪ್ರಯತ್ನಪಟ್ಟರೂ ಆರ್ಥಿಕ ಸಮಸ್ಯೆಗಳು ಬಂದೇ ಬರಲಿವೆ. ಇದರಿಂದ ಅಂದುಕೊಂಡ ಕೆಲಸ ಕಾರ್ಯ ಪೂರ್ತಿ ಮಾಡಲು ಸಾಧ‍್ಯವಾಗದು. ಸಾಂಸಾರಿಕವಾಗಿ ಸಾಮರಸ್ಯ ಕಾಪಾಡುವುದು ಮುಖ್ಯ. ಸಣ್ಣ ವಿಚಾರಗಳನ್ನು ದೊಡ್ಡದು ಮಾಡಲು ಹೋಗಬೇಡಿ.

ಮಕರ: ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಹಿರಿಯರೊಡನೆ ಚರ್ಚಿಸಿ ಮುಂದುವರಿಯಿರಿ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು.

ಕುಂಭ: ನಿರುದ್ಯೋಗಿಗಳು ಉದ್ಯೋಗ ಸಂದರ್ಶನ ನಿಮಿತ್ತ ಪರ ಊರಿಗೆ ಸಂಚಾರ ಮಾಡಬೇಕಾಗುತ್ತದೆ. ಕೆಳ ಹಂತದ ನೌಕರರಿಗೆ ಕೊಂಚ ಸಮಾಧಾನಕರ ಸುದ್ದಿ ಸಿಗಲಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಂದಾಗಿ ಕೆಲಸದಲ್ಲಿ ನಿರುತ್ಸಾಹ ಕಂಡುಬರಲಿದೆ. ಅವಿವಾಹಿತರಿಗೆ ಯೋಗ್ಯ ಸಂಬಂಧಗಳು ಸ್ವಲ್ಪದರಲ್ಲೇ ಕೈ ತಪ್ಪಿಹೋಗಲಿದೆ. ನಿಮ್ಮ ಕ್ರಿಯಾಶೀಲತೆಯನ್ನು ಬಳಸಿಕೊಳ್ಳುವ ಕಾಲವಿದು. ದಿನದಂತ್ಯಕ್ಕೆ ನೆಮ್ಮದಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನಿಂದ ಈ 5 ರಾಶಿಯವರಿಗೆ ಶ್ರೀಕೃಷ್ಣನ ಅನುಗ್ರಹದಿಂದ ರಾಜಯೋಗ