Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 27 ಆಗಸ್ಟ್ 2020 (09:02 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಸಾಂಸಾರಿಕವಾಗಿ ಸಂಗಾತಿಯ ಸಹಕಾರದೊಂದಿಗೆ ಹೊಸ ಕೆಲಸಗಳಿಗೆ ಕೈ ಹಾಕಲಿದ್ದೀರಿ. ನಿಮ್ಮ ವಿರೋಧಿಗಳನ್ನು ಹಗುರವಾಗಿ ಪರಿಗಣಿಸದಿರಿ. ಬೇಡದ ವಿಚಾರಗಳಿಗೆ ತಲೆಕೆಡಿಸಿಕೊಳ್ಳುವುದು ಬೇಡ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಕಡೆಗೆ ಮನಸ್ಸು ಮಾಡಲಿದ್ದೀರಿ.

ವೃಷಭ: ಕೆಳ ಹಂತದ ನೌಕರರಿಗೆ ಉದ್ಯೋಗ ನಷ್ಟವಾಗುವ ಭೀತಿಯಿದೆ. ವ್ಯಾಪಾರ ವ್ಯವಹಾರದಲ್ಲಿ ಮುನ್ನಡೆಯ ಯೋಗವಿದೆ. ದುರ್ಜನರ ಸಂಗದಿಂದ ದೂರವಿರುವುದೇ ಉತ್ತಮ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಹಳೆಯ ಶತ್ರುವಿನ ಕಾಟ ಮತ್ತೆ ಪ್ರತ್ಯಕ್ಷವಾಗಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಪಡೆಯಲಿದ್ದೀರಿ. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆ ವಹಿಸುವುದು ಸೂಕ್ತ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಕರ್ಕಟಕ: ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯಲು ಮನಸ್ಸು ಹಾತೊರೆಯಲಿದೆ. ಆದರೆ ಕಾರ್ಯಕ್ಷೇತ್ರದ ಒತ್ತಡದಿಂದ ದೇಹಾಯಾಸವಾದೀತು. ವಿದ್ಯಾರ್ಥಿಗಳಿಗೆ ಆಲಸ್ಯತನ ಬಿಡುವುದು ಅನಿವಾರ್ಯವಾಗುತ್ತದೆ.

ಸಿಂಹ: ಬಂಧು ವರ್ಗದವರಿಂದ ಪ್ರೀತಿ ಸಹಕಾರ ಸಿಗಲಿದೆ. ಆದರೆ ಅತಿಯಾಗಿ ಯಾರ ಮೇಲೂ ಅವಲಂಬನೆ ಬೇಡ. ಉದ್ಯೋಗ ಕ್ಷೇತ್ರದಲ್ಲಿ ಉನ್ನತಾಧಿಕಾರದ ಯೋಗವಿದೆ. ಸಂಚಾರದಲ್ಲಿ ಕಳ್ಳತನದ ಭೀತಿಯಿದೆ, ಎಚ್ಚರಿಕೆ ಅಗತ್ಯ.

ಕನ್ಯಾ: ಭೂಮಿ, ವಾಹನ ಖರೀದಿ ವ್ಯವಹಾರದಲ್ಲಿ ಲಾಭವಾಗಲಿದೆ. ಆರ್ಥಿಕವಾಗಿ ಹಣಕಾಸಿನ ವ್ಯವಹಾರಗಳು ಸುಸ್ರೂತ್ರವಾಗಿ ನಡೆಯಲಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಸಿಗಲಿದೆ. ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ.

ತುಲಾ: ಸಣ್ಣ ವಿಚಾರವನ್ನೂ ಉದಾಸೀನ ಮಾಡಿದರೆ ಮುಂದೆ ತೊಂದರೆಯಾದೀತು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಹಿರಿಯರಿಗೆ ಸಾಮಾಜಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಇಷ್ಟ ಮಿತ್ರರ ಭೇಟಿ ಸಾಧ‍್ಯತೆ.

ವೃಶ್ಚಿಕ: ದೈಹಿಕ ಆರೋಗ್ಯದ ಬಗ್ಗೆ ಉಪೇಕ್ಷೆ ಮಾಡಿದರೆ ಮುಂದೆ ತೊಂದರೆಯಾದೀತು. ಕುಟುಂಬದ ಅಭಿವೃದ್ಧಿಗೆ ಹೊಸ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ದೈವ ಬಲ ಉತ್ತಮವಿದ್ದು, ಪತಿ-ಪತ್ನಿಯರಲ್ಲಿ ಹೊಂದಾಣಿಕೆ ಚೆನ್ನಾಗಿರುತ್ತದೆ. ದೇವತಾ ಪ್ರಾರ್ಥನೆ ಮಾಡಿ.

ಧನು: ನಿಮ್ಮ ನೆರೆಹೊರೆಯವರ ಬಗ್ಗೆ ಎಚ್ಚರಿಕೆಯಿಂದಿರಿ. ನೀರು, ಬೆಂಕಿಯ ಸಹವಾಸ ಮಾಡುವಾಗ ಎಚ್ಚರಿಕೆಯಿರಲಿ. ಯಾವುದೇ ಕೆಲಸಕ್ಕೆ ಮೊದಲು ಸರಿಯಾಗಿ ಪರಾಮರ್ಶಿಸಿ ಮುನ್ನಡೆಯಿರಿ. ಆರ್ಥಿಕವಾಗಿ ಅಭಿವೃದ್ಧಿ ಕಂಡುಬರಲಿದೆ.

ಮಕರ: ನಿಮ್ಮ ಹೊಸ ನಿರ್ಧಾರಗಳಿಗೆ ಕುಟುಂಬದವರ ಒಪ್ಪಿಗೆ ಸಿಗಲಿದೆ. ವ್ಯವಹಾರದಲ್ಲಿ ಮುನ್ನಡೆ ತೋರಿಬರಲಿದೆ. ಆದರೆ ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಸಾಮಾಜಿಕವಾಗಿ ನಿಮ್ಮ ಕೆಲಸಗಳಿಗೆ ಜನಮನ್ನಣೆ ಸಿಗಲಿದೆ.

ಕುಂಭ: ಉದ್ಯೋಗ ಕ್ಷೇತ್ರದಲ್ಲಿ ಅಭಿವೃದ್ಧಿದಾಯಕ ವಾತಾವರಣವಿರಲಿದೆ. ನಿಮ್ಮ ಕ್ರಿಯಾತ್ಮಕ ಐಡಿಯಾಗಳಿಗೆ ಬೆಲೆ ಸಿಗಲಿದೆ. ಕೌಟುಂಬಿಕವಾಗಿ ಮಕ್ಕಳ ಆರೋಗ್ಯದಲ್ಲಿ ಏರುಪೇರಾದೀತು. ವ್ಯಾಪಾರಿಗಳಿಗೆ ಲಾಭವಿಲ್ಲದಿದ್ದರೂ ನಷ್ಟವಂತೂ ಆಗದು.

ಮೀನ: ಮಹಿಳೆಯರಿಗೆ ಹೊಸ ವಸ್ತ್ರ, ಚಿನ್ನಾಭರಣ ಖರೀದಿ ಯೋಗವಿದೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಅನಾರೋಗ್ಯ ತಪ್ಪದು. ಅವಿವಾಹಿತರಿಗೆ ಶೀಘ್ರ ಕಂಕಣ ಭಾಗ್ಯ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

'D’ ಅಕ್ಷರದಿಂದ ಹೆಸರು ಶುರುವಾಗುವವರ ಸ್ವಭಾವ ಹೇಗಿರುತ್ತದೆ ಗೊತ್ತಾ?