Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 1 ಸೆಪ್ಟಂಬರ್ 2020 (08:53 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಉದ್ಯೋಗ ಕ್ಷೇತ್ರದಲ್ಲಿ ಕ್ಷುಲ್ಲುಕ ವಿಚಾರಕ್ಕೆ ಮೇಲಧಿಕಾರಿಗಳೊಂದಿಗೆ ಸಂಘರ್ಷ ನಡೆಸುವುದಕ್ಕಿಂತ ಮೌನಕ್ಕೆ ಶರಣಾಗುವುದೇ ಉತ್ತಮ. ಆರೋಗ್ಯದಲ್ಲಿ ಕಾಳಜಿ ವಹಿಸಿ.

ವೃಷಭ: ವೃತ್ತಿರಂಗದಲ್ಲಿ ಸದವಕಾಶಗಳು ಎದುರಾದಾಗ ಎರಡೂ ಕೈಯಿಂದ ಬಾಚಿಕೊಳ್ಳಿ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗವೇ ಸೂಕ್ತ ಎನಿಸಲಿದೆ. ಅವಿವಾಹಿತರಿಗೆ ಶೀಘ‍್ರ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗವಿದೆ.

ಮಿಥುನ: ಕೃಷಿಕರಿಗೆ ವ್ಯವಹಾರದಲ್ಲಿ ಸಾಕಷ್ಟು ಅಡೆತಡೆಗಳು ಎದುರಾದೀತು. ಎಲ್ಲವನ್ನೂ ಎದುರಿಸಿಕೊಂಡು ಬದುಕಬೇಕಾಗುತ್ತದೆ. ಯಂತ್ರೋಪಕರಣಗಳ ವೃತ್ತಿಯವರಿಗೆ ಮುನ್ನಡೆಯಿರಲಿದೆ. ಅಧಿಕ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿ.

ಕರ್ಕಟಕ: ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮೇಲುಗೈ ನಿಮ್ಮದಾಗಲಿದೆ. ಆರ್ಥಿಕ ಪ್ರಗತಿ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಹೊಸ ಯೋಜನೆಗಳಿಗೆ ಕೈ ಹಾಕುವ ಮುನ್ನ ಹಿರಿಯರ ಜತೆಗೆ ಪರಾಮರ್ಶಿಸಿ. ಮಿತ್ರವೃಂದದವರ ಭೇಟಿಯಿಂದ ಮನಸ್ಸಿಗೆ ಖುಷಿಯಾಗಲಿದೆ.

ಸಿಂಹ: ಸಾಂಸಾರಿಕವಾಗಿ ನೆಮ್ಮದಿ ತೋರಿಬರಲಿದೆ. ಸಂಗಾತಿಯೊಂದಿಗೆ ಸುಮಧುರ ಕ್ಷಣ ಕಳೆಯಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಕೆಲಸಗಳಿಗೆ ಪ್ರಶಂಸೆ ವ್ಯಕ್ತವಾಗಲಿದೆ. ರಾಜಕೀಯ ರಂಗದಲ್ಲಿರುವವರಿಗೆ ಹೆಚ್ಚಿನ ಹೊಣೆಗಾರಿಕೆ ಹೆಗಲಿಗೇರಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಕನ್ಯಾ: ಅಧಿಕ ಧನಲಾಭ ತರುವ  ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಸಂಗಾತಿಯ ಮನದಾಸೆ ಪೂರೈಸಲು ಮುಂದಾಗಲಿದ್ದೀರಿ. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ಸವಾಲಿನ ಕೆಲಸಗಳು ಎದುರಾಗಲಿವೆ. ವಾಸಸ್ಥಳ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ಪ್ರೀತಿ ಪಾತ್ರರ ಮನಸ್ಸಿಗೆ ಇಷ್ಟವಾಗುವ ರೀತಿ ನಡೆದುಕೊಳ್ಳಲಿದ್ದೀರಿ. ಪ್ರೇಮಿಗಳಿಗೆ ಮನೆಯವರಿಂದ ಒಪ್ಪಿಗೆ ಸಿಗಲಿದೆ. ಚಿಂತೆ ಬೇಡ.

ವೃಶ್ಚಿಕ: ಸಾಂಸಾರಿಕವಾಗಿ ನೆಮ್ದಿಯ ದಿನಗಳಿವು. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಚಿಂತನೆ ನಡೆಸಲಿದ್ದೀರಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಶುಭವಾಗುತ್ತದೆ.

ಧನು: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಸಂಗಾತಿಯ ಜತೆ ಸಮಾಲೋಚನೆ ನಡೆಸಿ ಹೆಜ್ಜೆಯಿಡಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳಿಗೆ ಸಂದರ್ಶನ ಮಾಡುವ ಯೋಗ.

ಮಕರ: ಪ್ರೀತಿ ಪಾತ್ರರಿಗೆ ಹೇಳಬೇಕಾದ ವಿಚಾರವನ್ನು ಹೇಳಲಿದ್ದೀರಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮಪಡಬೇಕಾದ ದಿನಗಳು. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಕುಂಭ: ಪೋಷಕರ ಮನಸ್ಸಿಗೆ ನೋವಾಗುವಂತಹ ನಿರ್ಧಾರ ಕೈಗೊಳ್ಳಬೇಡಿ. ಆರ್ಥಿಕವಾಗಿ ಸಮತೋಲನ ಕಾಯ್ದುಕೊಳ್ಳಬೇಕು. ಹಳೆಯ ಮಿತ್ರರ ಭೇಟಿ ಯೋಗವಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಮೀನ: ಮನಸ್ಸಿನಲ್ಲಿ ಇಷ್ಟು ದಿನ ಬಚ್ಚಿಟ್ಟುಕೊಂಡ ಪ್ರೀತಿಯನ್ನು ಹೊರ ಹಾಕಲಿದ್ದೀರಿ. ಅವಿವಾಹಿತರಿಗೆ ಶೀಘ‍್ರ ಕಂಕಣ ಬಲ ಕೂಡಿಬರಲಿದೆ. ಇಷ್ಟ ಭೋಜನ, ಪ್ರವಾಸ ಮಾಡುವ ಯೋಗ ಒದಗಿಬರಲಿದೆ. ಅಂದುಕೊಂಡ ಕೆಲಸವನ್ನು ಕಾರ್ಯರೂಪಕ್ಕೆ ತರಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ತುಳಸಿಗೆ ಪೂಜೆ ಮಾಡುವ ವೇಳೆ ಈ ಮಂತ್ರ ಜಪಿಸಿ