Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 2 ಸೆಪ್ಟಂಬರ್ 2020 (08:46 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಬೇಡದ ವಿಚಾರಗಳಿಗೆ ತಲೆಕೆಡಿಸಿಕೊಂಡು ನೆಮ್ಮದಿ ಹಾಳುಮಾಡಿಕೊಳ್ಳಬೇಡಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಸಂಗಾತಿಯ ಜತೆ ದುಃಖ ಹಂಚಿಕೊಂಡು ಸಮಾಧಾನ ಮಾಡಿಕೊಳ್ಳಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಕಿರಿ ಕಿರಿ ತಪ್ಪದು. ಆದರೆ ನಿಮ್ಮ ಕ್ರಿಯಾತ್ಮಕ ಯೋಚನೆಗಳು ಸಮಸ್ಯೆಗಳಿಂದ ಪರಿಹಾರ ಕಂಡುಕೊಳ್ಳಲು ಸುಲಭವಾಗಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಭಾಗ್ಯ ಒದಗಿಬರುವುದು.

ಮಿಥುನ: ತಾಂತ್ರಿಕ ವೃತ್ತಿಯವರಿಗೆ ಕಾರ್ಯಕ್ಷೇತ್ರದಲ್ಲಿ ಅಡೆತಡೆಗಳು ತೋರಿಬಂದೀತು. ಎಲ್ಲವನ್ನೂ ನಿಭಾಯಿಸಿಕೊಂಡು ಹೋಗುವ ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು. ಕಷ್ಟದಲ್ಲಿರುವ ಮಿತ್ರರಿಗೆ ಸಹಾಯ ಮಾಡಲಿದ್ದೀರಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಕರ್ಕಟಕ: ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಎದುರಾಗಬಹುದು. ಇಷ್ಟ ಮಿತ್ರರನ್ನು ಅನಿರೀಕ್ಷಿತವಾಗಿ ಭೇಟಿ ಮಾಡಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ನೆಂಟರಿಷ್ಟರ ಆಗಮನವಾಗಲಿದೆ.

ಸಿಂಹ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಯಶಸ್ಸನ್ನು ಯಾರೂ ತಡೆಯಲು ಸಾಧ‍್ಯವಾಗದು. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದ್ದು, ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ವೈಯಕ್ತಿಕ ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ನೂತನ ದಂಪತಿಗಳಿಗೆ ಹೊಂದಾಣಿಕೆ ಅಗತ್ಯ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ನೆರವಿನಿಂದ ಸಮಸ್ಯೆಗಳಿಂದ ಪಾರಾಗುವಿರಿ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗಲಿದೆ. ಪ್ರೀತಿ ಪಾತ್ರರ ಮನಸ್ಸಿನ ಇಚ್ಛೆ ಪೂರೈಸಲಿದ್ದೀರಿ.

ತುಲಾ: ಮನೆ, ಕಟ್ಟಡ ಇತ್ಯಾದಿ ನಿರ್ಮಾಣ ಕಾರ್ಯಗಳಿಗೆ ಕೈ ಹಾಕಲು ಸಕಾಲ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ನೂತನ ದಂಪತಿಗಳಿಗೆ ಸುಮಧುರ ದಿನ.

ವೃಶ್ಚಿಕ: ಕೌಟುಂಬಿಕ ಜವಾಬ್ಧಾರಿಗಳು ಹೊರೆ ಎನಿಸಲು ತೊಡಗೀತು. ಸಂಗಾತಿಯ ಸಲಹೆಗಳನ್ನು ಪಾಲಿಸಿದರೆ ಉತ್ತಮ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಲಿದ್ದೀರಿ. ಕೆಳ ಹಂತದ ನೌಕರರಿಗೆ ಬಡ್ತಿ ಯೋಗ.

ಧನು: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ತಾಳ್ಮೆ, ಸಂಯಮದಿಂದ ನಡೆದುಕೊಳ್ಳುವುದು ಅಗತ್ಯ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡುವಿರಿ.

ಮಕರ: ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಸಂತಸದ ವಾತಾವರಣವಿರಲಿದೆ. ಇಷ್ಟ ಭೋಜನ ಯೋಗ ಕೂಡಿಬರಲಿದೆ. ನವ ದಂಪತಿಗಳಿಗೆ ಶೀಘ್ರದಲ್ಲೇ ಸಂತಾನ ಫಲ ಸೂಚನೆ ದೊರೆಯಲಿದೆ. ಖರ್ಚು ವೆಚ್ಚದ ಬಗ್ಗೆ ಹಿಡಿತವಿರಲಿ.

ಕುಂಭ: ಮನಸ್ಸಿನಲ್ಲಿ ಅಂದುಕೊಂಡ ಕೆಲಸಗಳನ್ನು ಜಾರಿಗೆ ತರಲು ಯತ್ನಿಸುವಿರಿ. ಅಡೆತಡೆಗಳು ಸಾಮಾನ್ಯ. ಅವುಗಳನ್ನು ನಿವಾರಿಸಿಕೊಂಡು ಹೋಗಬೇಕು. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಮೀನ: ಕೂಡಿಟ್ಟ ಹಣ ಹೆಚ್ಚು ದಿನ ಬಾಳಿಕೆ ಬಾರದು ಎಂಬುದನ್ನು ಅರಿಯುವಿರಿ. ಕಠಿಣ ಪರಿಶ್ರಮ ಪಟ್ಟರೆ ತಕ್ಕ ಯಶಸ್ಸು ಸಿಗಲಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಲಾಭವಿಲ್ಲದಿದ್ದೂ ನಷ್ಟವಾಗದು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಈ ರಾಶಿಯವರಿಗೆ ಪಾರ್ವತಿದೇವಿಯ ರಕ್ಷಣೆ ಇರುತ್ತದೆಯಂತೆ