Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 8 ಸೆಪ್ಟಂಬರ್ 2020 (09:08 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅದೃಷ್ಟದ ದಿನಗಳು ನಿಮ್ಮನ್ನು ಹುಡುಕಿಕೊಂಡು ಬರಲಿದೆ. ಎಣ್ಣೆ ಬಂದಾಗ ಕಣ್ಮುಚ್ಚಿಕೊಳ್ಳಬೇಡಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ತಾಳ್ಮೆ, ಸಂಯಮ ಅಗತ್ಯ. ಅನಗತ್ಯ ವಾದ ವಿವಾದಗಳಿಗೆ ಅವಕಾಶ ಕೊಡಬೇಡಿ.

ವೃಷಭ: ದೈವಾನುಕೂಲದಿಂದ ನೀವು ಅಂದುಕೊಂಡ ಕಾರ್ಯಗಳು ಸಾಂಗವಾಗಿ ನೆರವೇರಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಕಿರು ಸಂಚಾರ ಮಾಡಬೇಕಾಗುತ್ತದೆ.

ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾತ್ಮಕ ಯೋಚನೆಗಳಿಗೆ ಬೆಲೆ ಸಿಗಲಿದೆ. ಸಹೋದ್ಯೋಗಿಗಳ ಕಷ್ಟಗಳಿಗೆ ನೆರವಾಗಲಿದ್ದೀರಿ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆ ಬರಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ಕರ್ಕಟಕ: ಮಕ್ಕಳ ವಿದ್ಯಾಭ‍್ಯಾಸ ಅತಂತ್ರ ಸ್ಥಿತಿಗೆ ತಲುಪಿದ ಆತಂಕ ಕಾಡುವುದು. ಒಳ್ಳೆಯ ದಿನಗಳಿಗಾಗಿ ಕಾಯಬೇಕಾಗುತ್ತದೆ. ಕಾರ್ಯನಿಮಿತ್ತ ಓಡಾಟದಿಂದ ದೇಹಾಯಾಸವಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿದರೆ ಉತ್ತಮ.

ಸಿಂಹ: ಸ್ವಲ್ಪ ಸಮಯದಿಂದ ಕಾಡುತ್ತಿದ್ದ ಸಮಸ್ಯೆಗೆ ಮಿತ್ರರ ಸಲಹೆಯಿಂದ ಪರಿಹಾರ ಸಿಗಲಿದೆ. ಬೇರೆಯವರ ಸಮಸ್ಯೆಗಳಿಗೆ ಅನಗತ್ಯವಾಗಿ ಮೂಗು ತೂರಿಸಲು ಹೋದರೆ ಚಿಂತೆ ತಪ್ಪಿದ್ದಲ್ಲ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಮೇಲಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ನಿಮ್ಮ ನೇರ ನುಡಿ ಬೇರೆಯವರಿಗೆ ಇಷ್ಟವಾಗದೇ ಇರಬಹುದು. ಆದರೆ ಮನಸ್ಸಿಗೆ ಅನಿಸಿದ್ದನ್ನು ನೇರವಾಗಿ ಹೇಳಿದರೆ ನಿಮಗೂ ನೆಮ್ಮದಿ.

ತುಲಾ: ಸಹವಾಸ ದೋಷದಿಂದ ಕೆಡುವುದು ಅಂತಾರಲ್ಲ ಅದು ನಿಮ್ಮ ಅನುಭವಕ್ಕೆ ಬರಲಿದೆ. ಉತ್ತಮ ಸ್ನೇಹಿತರನ್ನು ಆರಿಸಿಕೊ‍ಳ್ಳಿ. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರ, ಅಪವಾದದ ಭೀತಿಯಿದೆ. ಇಷ್ಟ ಭೋಜನ ಯೋಗವಿದೆ.

ವೃಶ್ಚಿಕ: ನಿಮ್ಮ ಮನಸ್ಸಿನ ದುಃಖವನ್ನು ಇತರರಲ್ಲಿ ಹಂಚಿಕೊಂಡು ಸಮಾಧಾನಗೊಳ್ಳುವಿರಿ. ಆದರೆ ಅತಿಯಾಗಿ ಯಾರ ಮೇಲೂ ಅವಲಂಬನೆ ಒಳ್ಳೆಯದಲ್ಲ. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಧನು: ನಿಮ್ಮ ಜತೆಗೇ ಇದ್ದು ಬೆನ್ನ ಹಿಂದೆ ಚೂರಿ ಹಾಕುವವರ ಸಂಚು ಬಯಲಾಗಿದೆ. ಹಿರಿಯರ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು.

ಮಕರ: ನಿಮ್ಮ ಕೆಲವೊಂದು ನಿರ್ಧಾರಗಳು ಇತರರ ಮನಸ್ಸಿಗೆ ಹಿಡಿಸದೇ ಹೋಗಬಹುದು. ಹಿಡಿದ ಕೆಲಸಗಳನ್ನು ಪೂರ್ತಿ ಮಾಡಿ. ವೃತ್ತಿರಂಗದಲ್ಲಿ ಮೇಲ್ವರ್ಗಕ್ಕೇರುವ ಅವಕಾಶಗಳು ಒದಗಿಬರಲಿದೆ. ಪ್ರೇಮಿಗಳಿಗೆ ಹಿರಿಯರ ಒಪ್ಪಿಗೆ ಸಿಗಲಿದೆ.

ಕುಂಭ: ಮನಸ್ಸಿನಲ್ಲಿ ಅಂದುಕೊಂಡಿದ್ದು ಒಂದು ಆಗಿದ್ದು ಆಗುವುದು ಇನ್ನೊಂದು ಎಂಬ ಪರಿಸ್ಥಿತಿ ನಿಮ್ಮದಾಗುವುದು. ಇಷ್ಟದೇವತೆಯ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ.

ಮೀನ: ಮಕ್ಕಳಿಂದ ಸಂತಸದ ವಾರ್ತೆ ಕೇಳಿಬರಲಿದೆ. ಕೋಪ ತಾಪಗಳಿಗೆ ಅವಕಾಶ ಮಾಡಿಕೊಡಬೇಡಿ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಧನವ್ಯಯವಾಗಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ. ಅನಿರೀಕ್ಷಿತವಾಗಿ ಮಿತ್ರರ ಭೇಟಿ ಯೋಗ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗಂಡ-ಹೆಂಡತಿ ಸಂಬಂಧ ಚೆನ್ನಾಗಿರಬೇಕೆಂದರೆ ಬೆಡ್ ರೂಂನಲ್ಲಿ ಈ ಚಿತ್ರ ಹಾಕಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ