Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 9 ಸೆಪ್ಟಂಬರ್ 2020 (08:41 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಶೈಕ್ಷಣಿಕ ರಂಗದಲ್ಲಿ ಕೆಲಸ ಮಾಡುವವರಿಗೆ ಅಭಿವೃದ್ಧಿ ಕಂಡುಬರಲಿದೆ. ಆರೋಗ್ಯ ಸಮಸ್ಯೆಗಳು ಚಿಂತೆಗೆ ಕಾರಣವಾಗಲಿದೆ. ಬೇರೆಯವರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ನಿಮ್ಮ ಸತ್ಕಾರ್ಯಗಳು ನಿಮ್ಮ ನೆರವಿಗೆ ಬರಲಿದೆ.

ವೃಷಭ: ನೀವು ಅಂದುಕೊಂಡ ಕೆಲಸಗಳು ಅಂದುಕೊಂಡ ರೀತಿಯಲ್ಲಿ ಸಾಗಲಿವೆ. ಉದ್ಯೋಗ ಕ್ಷೇತ್ರದಲ್ಲಿ ಮುಂಬಡ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳನ್ನು ಪಡೆಯಲಿದ್ದಾರೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಮಿಥುನ: ನೀವು ಹಿಂದೆ ಮಾಡಿದ ಪರಿಶ್ರಮಕ್ಕೆ ಇಂದು ಫಲ ಸಿಗಲಿದೆ. ಸ್ವಯಂ ವ್ಯಾಪಾರಿಗಳು, ವ್ಯವಹಾರ ನಡೆಸುವವರಿಗೆ ಆರ್ಥಿಕವಾಗಿ ಮುನ್ನಡೆಯ ಯೋಗವಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಕರ್ಕಟಕ: ದೈಹಿಕವಾಗಿ ನಿಮ್ಮ ಸಾಮರ್ಥ್ಯ ಹೆಚ್ಚಲಿದೆ. ಹಿರಿಯರ ಮನದಾಸೆ ಪೂರೈಸಲಿದ್ದೀರಿ. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ವೃತ್ತಿರಂಗದಲ್ಲಿ ನಿಮ್ಮ ಹಿತಶತ್ರುಗಳ ಸಂಚು ಬಯಲಾಗಲಿದೆ. ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ.

ಸಿಂಹ: ಅಲ್ಪ ಕಾಲದಲ್ಲಿ ಹಣ ಗಳಿಸುವ ಯೋಜನೆಗಳ ಬಗ್ಗೆ ಯೋಚನೆ ಮಾಡುವಿರಿ. ಅಪರಿಚಿತರನ್ನು ನಂಬಿ ವ್ಯವಹರಿಸಲು ಹೋದರೆ ವಂಚನೆಗೊಳಗಾಗಬೇಕಾದೀತು, ಎಚ್ಚರಿಕೆಯಿರಲಿ. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಮನಸ್ಸಿಗೆ ಹಿಡಿಸಿದ ಕೆಲಸಗಳನ್ನು ಮಾಡುವುದರಿಂದ ನೆಮ್ಮದಿ ಕಂಡುಕೊಳ್ಳಲಿದ್ದೀರಿ. ಸಹೋದ್ಯೋಗಿಗಳ ನೆರವು ಸಿಗಲಿದೆ. ಸಂಗಾತಿಯ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಕಿರು ಓಡಾಟ ನಡೆಸಬೇಕಾಗುತ್ತದೆ.

ತುಲಾ: ನಿಮ್ಮ ಮಾತಿನ ಮೋಡಿಯಿಂದಲೇ ಇತರರನ್ನು ಸೆಳೆಯಲಿದ್ದೀರಿ. ಕಾರ್ಯಸಾಧನೆಯಾಗಬೇಕಾದರೆ ಕ್ರಿಯಾತ್ಮಕ ಯೋಚನೆಗಳೂ ಮುಖ್ಯವಾಗುತ್ತದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಅತಿಥಿಗಳ ಆಗಮನದಿಂದ ಸಂತಸವಾಗಲಿದೆ.

ವೃಶ್ಚಿಕ: ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗುವುದು. ಕಾರ್ಯಾರಂಭದಲ್ಲಿ ವಿಘ್ನಗಳು ಎದುರಾದರೂ ಅಂತಿಮ ಜಯ ನಿಮ್ಮದಾಗುವುದು. ವಾಸಸ್ಥಳ ಬದಲಾವಣೆ ಮಾಡಲು ಚಿಂತನೆ ನಡೆಸಲಿದ್ದೀರಿ.

ಧನು: ಕೌಟುಂಬಿಕವಾಗಿ ನಿಮ್ಮ ಕೆಲವೊಂದು ನಿರ್ಧಾರಗಳು ಪ್ರೀತಿ ಪಾತ್ರರಿಗೆ ಹಿಡಿಸದೇ ಹೋದೀತು. ಮಹಿಳೆಯರಿಗೆ ಬಿಡುವಿಲ್ಲದ ಕೆಲಸದಿಂದ ದೇಹಾಯಾಸವಾದೀತು. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗವಿದೆ.

ಮಕರ: ಸಂಗಾತಿಯ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಎದುರಾಗಲಿದೆ. ಆರ್ಥಿಕವಾಗಿ ಅಧಿಕ ಖರ್ಚು ವೆಚ್ಚಗಳು ಎದುರಾದೀತು. ಗೃಹ ಬಳಕೆ ವಸ್ತುಗಳ ಖರೀದಿಗಾಗಿ ಓಡಾಟ ನಡೆಸಲಿದ್ದೀರಿ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕಿ.

ಕುಂಭ: ಇಷ್ಟ ಮಿತ್ರರೊಂದಿಗೆ ಪ್ರವಾಸಕ್ಕೆ ತಯಾರಿ ನಡೆಸುವಿರಿ. ದೂರು ಪ್ರಯಾಣದಿಂದ ಕಾರ್ಯಸಿದ್ಧಿಯಾಗಲಿದೆ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗವು ಕೈಹಿಡಿಯಲಿದೆ. ಅವಿವಾಹಿತರಿಗೆ ಉತ್ತಮ ಸಂಬಂಧಕ್ಕಾಗಿ ಕೆಲವು ದಿನ ಕಾಯುವುದು ಉತ್ತಮ.

ಮೀನ: ಕೃಷಿಕರಿಗೆ ಕಾರ್ಯಕ್ಷೇತ್ರದಲ್ಲಿ ಮುನ್ನಡೆಯ ಯೋಗವಿದೆ. ವೈದ್ಯಕೀಯ ವೃತ್ತಿಯವರಿಗೆ ಕೆಲಸದೊತ್ತಡ ಹೆಚ್ಚಾಗಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಇದುವರೆಗೆ ಇದ್ದ ಹಣಕಾಸಿನ ಮುಗ್ಗಟ್ಟುಗಳು ದೂರವಾಗಲಿದೆ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Anjaneya Mantra: ಆಂಜನೇಯ ಅಷ್ಟೋತ್ತರ ಮಂತ್ರವನ್ನು ತಪ್ಪದೇ ಓದಿ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments