Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 13 ಸೆಪ್ಟಂಬರ್ 2020 (08:49 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಂಸಾರಿಕವಾಗಿ ಸುಖ ಸಂತೋಷವಿರಲಿದ್ದು, ಹಂತ ಹಂತವಾಗಿ ಚೇತರಿಕೆ ಕಂಡುಕೊಳ್ಳುವಿರಿ. ಗೃಹಿಣಿಯರಿಗೆ ವಿರಾಮದ ಖುಷಿ ಸಿಗಲಿದೆ. ಹಿರಿಯರ ಮಾತುಗಳಿಗೆ ಕಿವಿಗೊಡಬೇಕಾಗುತ್ತದೆ. ಶುಭ ಮಂಗಲ ಕಾರ್ಯದಲ್ಲಿ ಭಾಗಿಯಾಗುವಿರಿ.

ವೃಷಭ: ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ವೃತ್ತಿರಂಗದಲ್ಲಿ ಋಣಾತ್ಮಕ ಚಿಂತನೆಗಳನ್ನು ಬಿಟ್ಟು ಆತ್ಮವಿಶ್ವಾಸದಿಂದ ಮುನ್ನಡೆಯಿರಿ. ಹಿತಶತ್ರುಗಳ ಜತೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಅಧಿಕ ಧನಲಾಭ ತರುವ ಯೋಜನೆಗಳ ಬಗ್ಗೆ ಯೋಚನೆ ಮಾಡಲಿದ್ದೀರಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಒದಗಿಬರಲಿದೆ. ಪ್ರೇಮಿಗಳಿಗೆ ಹಿರಿಯರನ್ನು ಒಪ್ಪಿಸುವುದು ಪ್ರಯಾಸವೆನಿಸಬಹುದು. ಕಿರು ಸಂಚಾರ ಮಾಡಬೇಕಾಗುತ್ತದೆ.

ಕರ್ಕಟಕ: ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗಾವಕಾಶಗಳು ಬಂದೀತು. ಸಣ್ಣಪುಟ್ಟ ಅಡೆತಡೆಗಳನ್ನು ಅಲಕ್ಷಿಸುವುದೇ ಉತ್ತಮ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಿಲ್ಲ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ.

ಸಿಂಹ: ನೀವು ಮನಸ್ಸಿನಲ್ಲಿ ಅಂದುಕೊಂಡ ಕೆಲಸ ಅನಿರೀಕ್ಷಿತ ರೀತಿಯಲ್ಲಿ ಪೂರ್ತಿಯಾಗಲಿದೆ. ಆಕಸ್ಮಿಕವಾಗಿ ಧನಲಾಭವಾಗಲಿದ್ದು, ಹೊಸ ಯೋಜನೆಗಳಿಗೆ ಕೈಹಾಕಲಿದ್ದೀರಿ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾದೀತು.

ಕನ್ಯಾ: ಕೌಟುಂಬಿಕವಾಗಿ ನೀವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ಹಿರಿಯರ ಅಸಮಾಧಾನಕ್ಕೆ ಗುರಿಯಾದೀತು. ಮಹಿಳೆಯರಿಗೆ ಆಕಸ್ಮಿಕವಾಗಿ ಧನಾಗಮನ ಯೋಗವಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ತುಲಾ: ನಿಮ್ಮ ಇಷ್ಟಾರ್ಥಗಳನ್ನು ಪೂರೈಸಲು ಸಂಗಾತಿಯ ಸಹಕಾರ ಪಡೆಯಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಕ್ರಿಯಾತ್ಮಕ ಚಿಂತನೆಗಳು ಉಪಯೋಗಕ್ಕೆ ಬರಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ಸಾಲಗಾರರ ಕಾಟದಿಂದ ಮುಕ್ತಿ ಸಿಗುವುದು.

ವೃಶ್ಚಿಕ: ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯಲಿದ್ದೀರಿ. ನೂತನ ದಂಪತಿಗಳು ಶೀಘ್ರದಲ್ಲೇ ಸಿಹಿ ಸುದ್ದಿ ನಿರೀಕ್ಷಿಸಬಹುದು. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ಶೈಕ್ಷಣಿಕ ರಂಗದಲ್ಲಿರುವವರಿಗೆ ಪ್ರಗತಿ ಕಂಡುಬರಲಿದೆ.

ಧನು: ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗಿ ಬಂದೀತು. ಹಲವು ದಿನಗಳಿಂದ ಕಾಡುತ್ತಿದ್ದ ಚಿಂತೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಅನಗತ್ಯ ಸಂದರ್ಭಗಳಲ್ಲಿ ನಾಲಿಗೆ ಹರಿಯಲು ಬಿಟ್ಟರೆ ಕಾರ್ಯ ಕೆಟ್ಟೀತು. ತಾಳ್ಮೆ, ಸಂಯಮವಿರಲಿ.

ಮಕರ: ಮನೆಯಲ್ಲಿ ಶುಭ ಮಂಗಲ ಕಾರ್ಯ ನಡೆಸುವ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಅವಿವಾಹಿತರಿಗೆ ಶೀಘ‍್ರ ಕಂಕಣ ಬಲ ಕೂಡಿಬರಲಿದೆ. ಮಡದಿ, ಮಕ್ಕಳಿಂದ ನೆಮ್ಮದಿ, ಸಂತೋಷ ಅನುಭವಿಸುವಿರಿ.

ಕುಂಭ: ಬೇಡದ  ವಿಚಾರಗಳಲ್ಲಿ ಹೆಚ್ಚು ತಲೆಕೆಡಿಸಿಕೊಂಡು ಮಾನಸಿಕ ನೆಮ್ಮದಿ ಹಾಳುಮಾಡಿಕೊಳ್ಳಬೇಡಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಹೆಚ್ಚಿನ ಧನವ್ಯಯ  ಮಾಡಲಿದ್ದೀರಿ. ಮನೆ ಮಂದಿಯ ಕೂಡುವಿಕೆಯಿಂದ ಸಂತೋಷ ನೆಲೆಸಲಿದೆ.

ಮೀನ: ಕಾರ್ಯ ಸಾಧನೆಗಾಗಿ ಓಡಾಟ ನಡೆಸಲಿದ್ದು, ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಹಿರಿಯರಿಗೆ ದಾನ, ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ಕೆಟ್ಟ ಸ್ನೇಹ ಸಂಗದಿಂದ ದೂರವಿರುವುದೇ ಉತ್ತಮ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

Devi Mantra: ಮಂಗಳವಾರ ತಪ್ಪದೇ ಈ ದೇವಿ ಮಂತ್ರವನ್ನು ಓದಿ

ಮುಂದಿನ ಸುದ್ದಿ
Show comments