Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 16 ಸೆಪ್ಟಂಬರ್ 2020 (09:02 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಬಂದಾಗ ಬಳಸಿಕೊಳ್ಳಬೇಕು. ಕೃಷಿಕರಿಗೆ ವ್ಯವಹಾರದಲ್ಲಿ ಲಾಭವಿಲ್ಲದಿದ್ದರೂ ನಷ್ಟವಾಗದು. ಆರೋಗ್ಯದ ಬಗ್ಗೆ ಚಿಂತೆಯಾಗಲಿದೆ.

ವೃಷಭ: ಕ್ರಯ ವಿಕ್ರಯ ವ್ಯವಹಾರಗಳಲ್ಲಿ ಲಾಭ ಕಂಡುಬರಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಮಕ್ಕಳಿಂದ ಸಂತಸದ ವಾರ್ತೆ ಕೇಳಿಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಗುರು-ಹಿರಿಯರ ಆಶೀರ್ವಾದದಿಂದಾಗಿ ಕೈ ಹಿಡಿದ ಕಾರ್ಯಗಳು ನೆರವೇರಲಿದೆ. ಕಾರ್ಮಿಕ ವರ್ಗದಲ್ಲಿ ಉದ್ಯೋಗ ಉಳಿಸಿಕೊಳ್ಳುವ ಚಿಂತೆ ಕಾಡಲಿದೆ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ಮನೆಗೆ ಬಂಧು ಮಿತ್ರರ ಆಗಮನವಾಗಲಿದ್ದು, ಸಂತಸದ ವಾರ್ತೆ ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ನೆರವಿನಿಂದ ಸಮಸ್ಯೆಗಳನ್ನು ಸುಲಭವಾಗಿ ನಿಭಾಯಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಸಿಂಹ: ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಹೆಚ್ಚಾಗಲಿದೆ. ಸಾಲ ಮರುಪಾವತಿಯಾಗಲಿದ್ದು, ಹಣಕಾಸಿನ ವಿಚಾರದಲ್ಲಿ ತೊಂದರೆಯಾಗದು. ಹೊಸ ಯೋಜನೆಗಳನ್ನು ಆರಂಭಿಸಲಿದ್ದೀರಿ.

ಕನ್ಯಾ: ಬಹಳ ದಿನಗಳ ನಂತರ ಆಪ್ತೇಷ್ಟರ ಭೀತಿಯಿಂದ ಮನಸ್ಸಿಗೆ ಸಂತಸವಾಗಲಿದೆ. ಅಧಿಕ ಧನಲಾಭ ತರುವ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಹಿರಿಯರಿಗೆ ದೇವತಾ ಕಾರ್ಯಗಳಲ್ಲಿ ಆಸಕ್ತಿ ಮೂಡಲಿದೆ. ದಿದನಂತ್ಯಕ್ಕೆ ಅಚ್ಚರಿ ಸುದ್ದಿ.

ತುಲಾ: ಪ್ರತಿಯೊಂದು ವಿಚಾರದಲ್ಲೂ ಅವಸರ ಒಳ್ಳೆಯದಲ್ಲ. ಸಂಗಾತಿಯೊಂದಿಗೆ ಪರಾಮರ್ಶಿಸಿ ನಿರ್ಧಾರ ತೆಗೆದುಕೊಳ್ಳಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಎಚ್ಚರಿಕೆಯಿಂದಿರಿ. ಕೃಷಿಕರಿಗೆ ವ್ಯವಹಾರದಲ್ಲಿ ವಿಘ್ನಗಳು ತೋರಿಬಂದರೂ ಅಂತಿಮವಾಗಿ ಜಯ ಸಿಗಲಿದೆ.

ವೃಶ್ಚಿಕ: ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆ ತಪ್ಪದು. ಮಹಿಳೆಯರಿಗೆ ಆಕಸ್ಮಿಕ ಧನಲಾಭ ಯೋಗವಿದೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸುವಿರಿ.

ಧನು: ನಿಮ್ಮ ಕೆಲಸ ಕಾರ್ಯಗಳಿಗೆ ಬಂಧು ವರ್ಗದವರಿಂದ ಚಾಡಿ ಮಾತು ಕೇಳಿಬಂದೀತು. ಆದರೆ ನಿಮ್ಮ ಮನಸ್ಸಿನ ಭಾವನೆಗೆ ಬೆಲೆ ಕೊಡಿ. ವಾಸಸ್ಥಳ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಮಕರ: ಇದ್ದುದರಲ್ಲೇ ಸಂತೋಷ ಪಟ್ಟರೆ ಉತ್ತಮ. ಕೆಟ್ಟ ಸ್ನೇಹ ಸಂಗದಿಂದ ದೂರವಿದ್ದರೆ ಉತ್ತಮ. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ಕೊಟ್ಟ ಸಾಲಗಳು ಮರಳಿ ಬರಲಿವೆ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಿರದು. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ವಾಹನ ಸವಾರರಿಗೆ ಅಪಘಾತದ ಭಯ ಕಾಡೀತು.

ಮೀನ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮೇಲ್ವರ್ಗಕ್ಕೇರುವ ಅವಕಾಶಗಳು ಒದಗಿಬರಲಿವೆ. ಸಹೋದರರಿಂದ ಶುಭ ಸಮಾಚಾರ ಕೇಳಿಬಂದೀತು. ಸಾಮಾಜಿಕವಾಗಿ ಉತ್ತಮ ಸ್ಥಾನ ಮಾನ ಗಳಿಸಲಿದ್ದೀರಿ. ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಕ್ಕಳು ಬುದ್ಧಿವಂತರಾಗಬೇಕೆಂದರೆ ಈ ಮಂತ್ರವನ್ನು ಪಠಿಸಿ