Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 16 ಸೆಪ್ಟಂಬರ್ 2020 (09:02 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಬಂದಾಗ ಬಳಸಿಕೊಳ್ಳಬೇಕು. ಕೃಷಿಕರಿಗೆ ವ್ಯವಹಾರದಲ್ಲಿ ಲಾಭವಿಲ್ಲದಿದ್ದರೂ ನಷ್ಟವಾಗದು. ಆರೋಗ್ಯದ ಬಗ್ಗೆ ಚಿಂತೆಯಾಗಲಿದೆ.

ವೃಷಭ: ಕ್ರಯ ವಿಕ್ರಯ ವ್ಯವಹಾರಗಳಲ್ಲಿ ಲಾಭ ಕಂಡುಬರಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಮಕ್ಕಳಿಂದ ಸಂತಸದ ವಾರ್ತೆ ಕೇಳಿಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಗುರು-ಹಿರಿಯರ ಆಶೀರ್ವಾದದಿಂದಾಗಿ ಕೈ ಹಿಡಿದ ಕಾರ್ಯಗಳು ನೆರವೇರಲಿದೆ. ಕಾರ್ಮಿಕ ವರ್ಗದಲ್ಲಿ ಉದ್ಯೋಗ ಉಳಿಸಿಕೊಳ್ಳುವ ಚಿಂತೆ ಕಾಡಲಿದೆ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ಮನೆಗೆ ಬಂಧು ಮಿತ್ರರ ಆಗಮನವಾಗಲಿದ್ದು, ಸಂತಸದ ವಾರ್ತೆ ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ನೆರವಿನಿಂದ ಸಮಸ್ಯೆಗಳನ್ನು ಸುಲಭವಾಗಿ ನಿಭಾಯಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಸಿಂಹ: ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಹೆಚ್ಚಾಗಲಿದೆ. ಸಾಲ ಮರುಪಾವತಿಯಾಗಲಿದ್ದು, ಹಣಕಾಸಿನ ವಿಚಾರದಲ್ಲಿ ತೊಂದರೆಯಾಗದು. ಹೊಸ ಯೋಜನೆಗಳನ್ನು ಆರಂಭಿಸಲಿದ್ದೀರಿ.

ಕನ್ಯಾ: ಬಹಳ ದಿನಗಳ ನಂತರ ಆಪ್ತೇಷ್ಟರ ಭೀತಿಯಿಂದ ಮನಸ್ಸಿಗೆ ಸಂತಸವಾಗಲಿದೆ. ಅಧಿಕ ಧನಲಾಭ ತರುವ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಹಿರಿಯರಿಗೆ ದೇವತಾ ಕಾರ್ಯಗಳಲ್ಲಿ ಆಸಕ್ತಿ ಮೂಡಲಿದೆ. ದಿದನಂತ್ಯಕ್ಕೆ ಅಚ್ಚರಿ ಸುದ್ದಿ.

ತುಲಾ: ಪ್ರತಿಯೊಂದು ವಿಚಾರದಲ್ಲೂ ಅವಸರ ಒಳ್ಳೆಯದಲ್ಲ. ಸಂಗಾತಿಯೊಂದಿಗೆ ಪರಾಮರ್ಶಿಸಿ ನಿರ್ಧಾರ ತೆಗೆದುಕೊಳ್ಳಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಎಚ್ಚರಿಕೆಯಿಂದಿರಿ. ಕೃಷಿಕರಿಗೆ ವ್ಯವಹಾರದಲ್ಲಿ ವಿಘ್ನಗಳು ತೋರಿಬಂದರೂ ಅಂತಿಮವಾಗಿ ಜಯ ಸಿಗಲಿದೆ.

ವೃಶ್ಚಿಕ: ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆ ತಪ್ಪದು. ಮಹಿಳೆಯರಿಗೆ ಆಕಸ್ಮಿಕ ಧನಲಾಭ ಯೋಗವಿದೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸುವಿರಿ.

ಧನು: ನಿಮ್ಮ ಕೆಲಸ ಕಾರ್ಯಗಳಿಗೆ ಬಂಧು ವರ್ಗದವರಿಂದ ಚಾಡಿ ಮಾತು ಕೇಳಿಬಂದೀತು. ಆದರೆ ನಿಮ್ಮ ಮನಸ್ಸಿನ ಭಾವನೆಗೆ ಬೆಲೆ ಕೊಡಿ. ವಾಸಸ್ಥಳ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಮಕರ: ಇದ್ದುದರಲ್ಲೇ ಸಂತೋಷ ಪಟ್ಟರೆ ಉತ್ತಮ. ಕೆಟ್ಟ ಸ್ನೇಹ ಸಂಗದಿಂದ ದೂರವಿದ್ದರೆ ಉತ್ತಮ. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ಕೊಟ್ಟ ಸಾಲಗಳು ಮರಳಿ ಬರಲಿವೆ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಿರದು. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ವಾಹನ ಸವಾರರಿಗೆ ಅಪಘಾತದ ಭಯ ಕಾಡೀತು.

ಮೀನ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮೇಲ್ವರ್ಗಕ್ಕೇರುವ ಅವಕಾಶಗಳು ಒದಗಿಬರಲಿವೆ. ಸಹೋದರರಿಂದ ಶುಭ ಸಮಾಚಾರ ಕೇಳಿಬಂದೀತು. ಸಾಮಾಜಿಕವಾಗಿ ಉತ್ತಮ ಸ್ಥಾನ ಮಾನ ಗಳಿಸಲಿದ್ದೀರಿ. ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments